AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಆದಿಪುರುಷ್​’ ಕಳಪೆ ಗ್ರಾಫಿಕ್ಸ್​: ಎಲ್ಲ ಬಿಟ್ಟು ಯೂಟ್ಯೂಬ್​ ಮೇಲೆ ಆರೋಪ ಹೊರಿಸಿದ ನಿರ್ದೇಶಕ

Om Raut | Adipurush Teaser: ‘ಆದಿಪುರುಷ್​’ ಸಿನಿಮಾದಲ್ಲಿ ರಾಮಾಯಣದ ಕಥೆ ಇರಲಿದೆ. ಆ ವೈಭವವನ್ನು ತೋರಿಸಲು ಗ್ರಾಫಿಕ್ಸ್​ ಬಳಸಲಾಗಿದೆ. ಆದರೆ ಅದರ ಗುಣಮಟ್ಟ ಕಂಡು ಸಿನಿಪ್ರಿಯರು ಬೇಸರ ಮಾಡಿಕೊಂಡಿದ್ದಾರೆ.

Adipurush: ‘ಆದಿಪುರುಷ್​’ ಕಳಪೆ ಗ್ರಾಫಿಕ್ಸ್​: ಎಲ್ಲ ಬಿಟ್ಟು ಯೂಟ್ಯೂಬ್​ ಮೇಲೆ ಆರೋಪ ಹೊರಿಸಿದ ನಿರ್ದೇಶಕ
ಓಂ ರಾವತ್
TV9 Web
| Edited By: |

Updated on: Oct 05, 2022 | 3:34 PM

Share

ಪೌರಾಣಿಕ ಕಥಾಹಂದರ ಹೊಂದಿರುವ ‘ಆದಿಪುರುಷ್​’ (Adipurush) ಚಿತ್ರದ ಟೀಸರ್​ಗೆ ಭಾರಿ ಮೆಚ್ಚುಗೆ ಸಿಗಬಹುದು ಎಂದು ಚಿತ್ರತಂಡ ಊಹಿಸಿತ್ತು. ಆದರೆ ಆಗಿದ್ದೇ ಬೇರೆ. ಅಕ್ಟೋಬರ್​ 2ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ಟೀಸರ್​ (Adipurush Teaser) ಬಿಡುಗಡೆ ಮಾಡಲಾಯಿತು. ಅದನ್ನು ನೋಡಿ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆದರೆ ಟೀಸರ್​ನಲ್ಲಿ ಕಾಣಿಸಿದ ಗ್ರಾಫಿಕ್ಸ್​ ಗುಣಮಟ್ಟ ತೀರಾ ಕಳಪೆ ಆಗಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಈ ಕುರಿತು ಅನೇಕ ಮೀಮ್ಸ್​ ಕೂಡ ಹರಿದಾಡುತ್ತಿವೆ. ಒಟ್ಟಾರೆ ಬೆಳವಣಿಗೆಗಳ ಬಗ್ಗೆ ನಿರ್ದೇಶಕ ಓಂ ರಾವತ್​ (Om Raut) ಅವರು ಪ್ರತಿಕ್ರಿಯೆ ನೀಡಿದ್ದಾರೆ.

ರಾಮಾಯಣದ ಕಥೆಯನ್ನು ‘ಆದಿಪುರುಷ್​’ ಸಿನಿಮಾ ಹೊಂದಿರಲಿದೆ. ಆ ವೈಭವವನ್ನು ತೋರಿಸಲು ಗ್ರಾಫಿಕ್ಸ್​ ಬಳಸಲಾಗಿದೆ. ಆದರೆ ಅದರ ಗುಣಮಟ್ಟ ಕಂಡು ನೆಟ್ಟಿಗರು ಬೇಸರ ಮಾಡಿಕೊಂಡಿದ್ದಾರೆ. ನಿರ್ದೇಶಕ ಓಂ ರಾವತ್​ ಹೇಳುವ ಪ್ರಕಾರ, ಯೂಟ್ಯೂಬ್​ನಲ್ಲಿ ಟೀಸರ್​ ನೋಡಿದ್ದೇ ಇದಕ್ಕೆ ಕಾರಣವಂತೆ! ‘ಈ ಸಿನಿಮಾವನ್ನು ನಾನು ಮಾಡಿರುವುದು ದೊಡ್ಡ ಪರದೆಗಾಗಿ. ನಾನು ಈ ಚಿತ್ರದ ಯಾವುದೇ ತುಣುಕನ್ನು ಯೂಟ್ಯೂಬ್​ನಲ್ಲಿ ರಿಲೀಸ್ ಮಾಡುತ್ತಿರಲಿಲ್ಲ. ಆದರೆ ಪ್ರಚಾರದ ಸಲುವಾಗಿ ಮಾಡಿದ್ದೇವೆ’ ಎಂದು ಓಂ ರಾವತ್​ ಹೇಳಿದ್ದಾರೆ.

‘ಆದಿಪುರುಷ್​’ ಟೀಸರ್​ನಲ್ಲಿನ ಅನೇಕ ವಿಚಾರಗಳ ಬಗ್ಗೆ ಜನರು ತಕರಾರು ತೆಗೆದಿದ್ದಾರೆ. ಇದರಲ್ಲಿ ರಾವಣನ ಪಾತ್ರವನ್ನು ಸೈಫ್​ ಅಲಿ ಖಾನ್​ ಮಾಡಿದ್ದಾರೆ. ಅವರು ರಾವಣನ ರೀತಿ ಕಾಣಿಸುವ ಬದಲು ಅಲ್ಲಾವುದ್ದೀನ್​ ಖಿಲ್ಜಿ ರೀತಿ ಕಾಣುತ್ತಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದಾರೆ. ವಾನರ ಸೇನೆಯ ಕೋತಿಗಳು ಕೂಡ ಬೇರೆ ಪ್ರಾಣಿಗಳ ರೀತಿಯಲ್ಲಿ ಕಾಣುತ್ತಿವೆ ಎಂಬ ಕಮೆಂಟ್ಸ್​ ಬಂದಿವೆ. ‘ಗೇಮ್​ ಆಫ್​ ಥ್ರೋನ್ಸ್​’ ದೃಶ್ಯಗಳನ್ನು ಕಾಪಿ ಮಾಡಲಾಗಿದೆ ಎಂದು ಕೂಡ ಕೆಲವರು ಆರೋಪಿಸಿದ್ದಾರೆ.

ಇದನ್ನೂ ಓದಿ
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?

ಎಷ್ಟೇ ಟೀಕೆ ಕೇಳಿಬಂದರೂ ನಿರ್ದೇಶಕ ಓಂ ರಾವತ್​ ತಲೆ ಕೆಡಿಸಿಕೊಂಡಿಲ್ಲ. ಈ ಸಿನಿಮಾ 3ಡಿ ವರ್ಷನ್​ನಲ್ಲೂ ಬಿಡುಗಡೆ ಆಗಲಿದೆ. ಚಿತ್ರಮಂದಿರದಲ್ಲಿ ಸಿನಿಮಾ ನೋಡಿದಾಗ ಗ್ರಾಫಿಕ್ಸ್​ ಚೆನ್ನಾಗಿ ಕಾಣಲಿದೆ ಎಂಬುದು ಅವರ ಅಭಿಪ್ರಾಯ. ಈ ಕುರಿತಂತೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ‘ಆದಿಪುರುಷ್​’ ಚಿತ್ರ ಮೂಡಿಬರುತ್ತಿದೆ. 2023ರ ಜನವರಿ 12ರಂದು ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಪ್ರದರ್ಶನ ಕಾಣಲಿದೆ. ಎಲ್ಲ ಭಾಷೆಯಲ್ಲಿಯೂ ಟೀಸರ್​ ರಿಲೀಸ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು