AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Collection: ಸೋಮವಾರ ಮುಗ್ಗರಿಸಿತು ‘ಆದಿಪುರುಷ್​’ ಕಲೆಕ್ಷನ್​; ನೆಗೆಟಿವ್​ ವಿಮರ್ಶೆಗೆ ಪ್ರಭಾಸ್​ ಸಿನಿಮಾ ತತ್ತರ

Adipurush Movie Collection: ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಅವರು ‘ಆದಿಪುರುಷ್​’ ಸಿನಿಮಾದ ಸೋಮವಾರದ (ಜೂನ್​ 19) ಗಳಿಕೆಯನ್ನು ‘ಪತನ’ ಎಂದು ಬಣ್ಣಿಸಿದ್ದಾರೆ. ಈ ಚಿತ್ರದ ಕಲೆಕ್ಷನ್​ನಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ಆಗುತ್ತಿದೆ.

Adipurush Collection: ಸೋಮವಾರ ಮುಗ್ಗರಿಸಿತು ‘ಆದಿಪುರುಷ್​’ ಕಲೆಕ್ಷನ್​; ನೆಗೆಟಿವ್​ ವಿಮರ್ಶೆಗೆ ಪ್ರಭಾಸ್​ ಸಿನಿಮಾ ತತ್ತರ
ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Jun 20, 2023 | 11:45 AM

ಭಾರಿ ನಿರೀಕ್ಷೆ ಸೃಷ್ಟಿ ಮಾಡಿದ್ದ ‘ಆದಿಪುರುಷ್​’ (Adipurush) ಸಿನಿಮಾವನ್ನು ಜನರು ಮೆಚ್ಚಿಕೊಂಡಿಲ್ಲ. ಮೊದಲೇ ಕ್ರಿಯೇಟ್​ ಆಗಿದ್ದ ಹೈಪ್​ನ ಕಾರಣಕ್ಕಾಗಿ ಮೂರು ದಿನಗಳ ಕಾಲ ಹೇಗೋ ಒಂದಷ್ಟು ಕಲೆಕ್ಷನ್​ ಆಯಿತು. ಆದರೆ ನಿಜವಾದ ಪರೀಕ್ಷೆ ಎದುರಾಗಿದ್ದು ಸೋಮವಾರ. ಯಾವುದೇ ಸಿನಿಮಾ ಸೋಮವಾರದ ಪರೀಕ್ಷೆಯಲ್ಲಿ ಪಾಸ್​ ಆದರೆ ನಂತರದ ದಿನಗಳ ಕಲೆಕ್ಷನ್​ (Adipurush Collection) ಕೂಡ ಚನ್ನಾಗಿ ಆಗುತ್ತದೆ. ಆದರೆ ‘ಆದಿಪುರುಷ್​’ ತಂಡಕ್ಕೆ ಸೋಮವಾರ (ಜೂನ್​ 19) ನಿರೀಕ್ಷಿತ ಮಟ್ಟದಲ್ಲಿ ಗಳಿಕೆ ಆಗಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್​ ಇನ್ನಷ್ಟು ಕುಸಿಯುವ ಮುನ್ಸೂಚನೆ ಸಿಕ್ಕಿದೆ. ಪ್ರಭಾಸ್​ ಅವರು ಈ ಸಿನಿಮಾದಿಂದ ಮುಖಭಂಗ ಎದುರಿಸುವಂತಾಗಿದೆ. ನಿರ್ದೇಶಕ ಓಂ ರಾವತ್​ (Om Raut) ಅವರನ್ನು ಪ್ರೇಕ್ಷಕರು ಟ್ರೋಲ್​ ಮಾಡುತ್ತಿದ್ದಾರೆ.

ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಅವರು ‘ಆದಿಪುರುಷ್​’ ಸಿನಿಮಾದ ಸೋಮವಾರದ ಗಳಿಕೆಯನ್ನು ‘ಪತನ’ ಎಂದು ಬಣ್ಣಿಸಿದ್ದಾರೆ. ಅವರು ಹೇಳಿರುವುದು ಹಿಂದಿ ವರ್ಷನ್​ನ ಕಲೆಕ್ಷನ್​ ಬಗ್ಗೆ ಮಾತ್ರ. ಮೂಲಗಳ ಪ್ರಕಾರ ಈ ಚಿತ್ರ ಸೋಮವಾರ ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮೂಲಗಳ ಪ್ರಕಾರ ಮೂರು ದಿನಕ್ಕೆ ಈ ಸಿನಿಮಾದ ಎಲ್ಲ ಭಾಷೆಯ ವರ್ಷನ್​ನಿಂದ ವಿಶ್ವಾದ್ಯಂತ 340 ಕೋಟಿ ರೂಪಾಯಿ ಗಳಿಕೆ ಆಗಿದೆ. ಆದರೆ ಸೋಮವಾರದ ಬಳಿಕ ಗಳಿಕೆಯಲ್ಲಿ ಗಣನೀಯ ಕುಸಿತ ಆಗುತ್ತಿದೆ.

ರಾಮಾಯಣವನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ಸಿದ್ಧವಾಗಿದೆ. ಆದರೆ ಈ ಸಿನಿಮಾ ಮೂಡಿಬಂದಿರುವ ಶೈಲಿಗೆ ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಮೊದಲ ದಿನವೇ ಸಾಕಷ್ಟು ಟ್ರೋಲ್​ಗಳು ಶುರುವಾದವು. ಮೂರು ದಿನ ಕಳೆದರೂ ಚಿತ್ರದ ಬಗೆಗಿನ ನೆಗೆಟಿವ್​ ವಿಮರ್ಶೆ ನಿಂತಿಲ್ಲ. ಪ್ರತಿಯೊಂದು ವಿಚಾರವನ್ನೂ ಇಟ್ಟುಕೊಂಡು ಜನರು ಟೀಕೆ ಮಾಡುತ್ತಿದ್ದಾರೆ. ಇದನ್ನೆಲ್ಲ ಕೇಳಿ ಅನೇಕರು ಈ ಮೊದಲೇ ಬುಕ್​ ಮಾಡಿದ್ದ ಟಿಕೆಟ್​ಗಳನ್ನು ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ. ಈ ಎಲ್ಲ ಘಟನೆಗಳು ‘ಆದಿಪುರುಷ್​’ ಚಿತ್ರದ ಹಿನ್ನಡೆಗೆ ಕಾರಣ ಆಗಿವೆ.

ಇದನ್ನೂ ಓದಿ: Adipurush: ‘ಆಂಜನೇಯನಿಗೆ ಇಂಥ ಸೀನ್​ ತೋರಿಸಿಬಿಟ್ರಲ್ಲೋ’: ‘ಆದಿಪುರುಷ್​’ ಚಿತ್ರದ ಗ್ಲಾಮರ್​ ಬಗ್ಗೆ ಜನರ ಟೀಕೆ

ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಸೈಫ್​ ಅಲಿ ಖಾನ್​ ಅವರಿಗೆ ರಾವಣನ ಪಾತ್ರ ನೀಡಲಾಗಿದೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್​ ಅಭಿನಯಿಸಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವಿಭೀಷಣನ ಪತ್ನಿಯ ಪಾತ್ರವನ್ನು ಮರಾಠಿ ನಟಿ ತೃಪ್ತಿ ತೋರಡ್ಮಲ್​ ಮಾಡಿದ್ದಾರೆ. ಅವರು ಒಂದು ದೃಶ್ಯದಲ್ಲಿ ಗ್ಲಾಮರಸ್​ ಆಗಿ ಕಾಣಿಸಿಕೊಂಡಿರುವುದಕ್ಕೂ ಟೀಕೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್