AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೇ ಮದುವೆ ಆದ ಅದಿತಿ ರಾವ್​ ಹೈದರಿ, ಸಿದ್ದಾರ್ಥ್; ಫೋಟೋ ವೈರಲ್​

ಬಾಲಿವುಡ್​ ಮತ್ತು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿ ಅದಿತಿ ರಾವ್​ ಹೈದರಿ ಅವರು ಫೇಮಸ್​ ಆಗಿದ್ದಾರೆ. ಸಿದ್ದಾರ್ಥ್​ ಮತ್ತು ಅದಿತಿ ಅವರು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ಮದುವೆ ಆಗುವ ಮೂಲಕ ತಮ್ಮ ಪ್ರೀತಿಯನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅದಿತಿ ಮತ್ತು ಸಿದ್ದಾರ್ಥ್​ ಅವರ ಮದುವೆಯ ಫೋಟೋಗಳು ವೈರಲ್​ ಆಗುತ್ತಿವೆ.

ಸದ್ದಿಲ್ಲದೇ ಮದುವೆ ಆದ ಅದಿತಿ ರಾವ್​ ಹೈದರಿ, ಸಿದ್ದಾರ್ಥ್; ಫೋಟೋ ವೈರಲ್​
ಅದಿತಿ ರಾವ್​ ಹೈದರಿ, ಸಿದ್ದಾರ್ಥ್​
ಮದನ್​ ಕುಮಾರ್​
|

Updated on: Sep 16, 2024 | 12:07 PM

Share

ಬಾಲಿವುಡ್​ ನಟಿ ಅದಿತಿ ರಾವ್​ ಹೈದರಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಖ್ಯಾತ ನಟ ಸಿದ್ದಾರ್ಥ್​ ಜೊತೆ ಅವರ ಮದುವೆ ನೆರವೇರಿದೆ. ಮದುವೆ ದಿನಾಂಕದ ಬಗ್ಗೆ ಈ ಜೋಡಿ ಬಾಯಿ ಬಿಟ್ಟಿರಲಿಲ್ಲ. ಆದರೆ ಈಗ ಸಡನ್​ ಆಗಿ ಮದುವೆಯ ಫೋಟೋಗಳನ್ನು ಹಂಚಿಕೊಂಡು ಎಲ್ಲರಿಗೂ ಸಿಹಿ ಸುದ್ದಿ ನೀಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸಿದ್ದಾರ್ಥ್​ ಮತ್ತು ಅದಿತಿ ರಾವ್​ ಹೈದರಿ ಅವರು ರಿಲೇಷನ್​ಶಿಪ್​ನಲ್ಲಿ ಇದ್ದರು. ಈಗ ದಾಂಪತ್ಯ ಜೀವನಕ್ಕೆ ಪ್ರವೇಶ ಪಡೆದಿದ್ದಾರೆ. ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅದಿತಿ ರಾವ್​ ಹೈದರಿ ಮತ್ತು ಸಿದ್ದಾರ್ಥ್​ ಅವರ ಮದುವೆ ವಿಷಯ ತಿಳಿದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್​ ಹೈದರಿ ಹಾಗೂ ಸಿದ್ದಾರ್ಥ್​ ಮದುವೆ ನಡೆದಿದೆ. ‘ನೀನೇ ನನ್ನ ಚಂದ್ರ, ನೀನೇ ನನ್ನ ಸೂರ್ಯ, ನೀನೇ ನನ್ನ ನಕ್ಷತ್ರ’ ಎಂದು ಕ್ಯಾಪ್ಷನ್​ ನೀಡುವ ಮೂಲಕ ಅದಿತಿ ರಾವ್​ ಹೈದರಿ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮದುವೆಯಲ್ಲಿ ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿ ಆಗಿದ್ದರು.

ಹಲವು ವರ್ಷಗಳಿಂದ ಸಿದ್ದಾರ್ಥ್​ ಮತ್ತು ಅದಿತಿ ರಾವ್​ ಹೈದರಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ತಮ್ಮ ಪ್ರೀತಿಯ ವಿಷಯವನ್ನು ಅವರಿಬ್ಬರು ಮುಚ್ಚಿಟ್ಟಿರಲಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ತಮ್ಮಿಬ್ಬರ ಫೋಟೋಗಳನ್ನು ಅವರು ಆಗಾಗ ಶೇರ್​ ಮಾಡಿಕೊಳ್ಳುತ್ತಿದ್ದರು. 2024ರ ಆರಂಭದಲ್ಲಿ ಅವರಿಬ್ಬರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಈಗ ಸದ್ದಿಲ್ಲದೇ ಮದುವೆ ಆಗಿದ್ದಾರೆ.

ಇದನ್ನೂ ಓದಿ: ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ಗೆ ಮೆರುಗು ತಂದ ಅದಿತಿ ರಾವ್​ ಹೈದರಿ

ಅದಿತಿ ರಾವ್​ ಹೈದರಿ ಮತ್ತು ಸಿದ್ದಾರ್ಥ್​ ಇಬ್ಬರಿಗೂ ಇದು ಎರಡನೇ ಮದುವೆ. ಮೊದಲ ಪತ್ನಿ ಮೇಘನಾಗೆ ಸಿದ್ದಾರ್ಥ್​ ಅವರು 2007ರಲ್ಲಿ ವಿಚ್ಛೇದನ ನೀಡಿದ್ದರು. ಹಾಗೆಯೇ ಅದಿತಿ ರಾವ್​ ಅವರು ಮೊದಲ ಪತಿ ಸತ್ಯದೀಪ್​ ಮಿಶ್ರಾಗೆ 2013ರಲ್ಲಿ ಡಿವೋರ್ಸ್​ ನೀಡಿದ್ದರು. ಆ ಬಳಿಕ ಅದಿತಿ ರಾವ್​ ಅವರಿಗೆ ಸಿದ್ದಾರ್ಥ್​ ಜೊತೆ ಪ್ರೀತಿ ಚಿಗುರಿತ್ತು. ಈಗ ಅವರಿಬ್ಬರು ಸತಿ-ಪತಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ