AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ನಿರ್ದೇಶಕ ಆದಿತ್ಯ ಧಾರ್ ಹಾಗೂ ಪತ್ನಿ ಯಾಮಿ ಪೈಕಿ ಯಾರು ಹೆಚ್ಚು ಶ್ರೀಮಂತರು?

ಆದಿತ್ಯ ಧಾರ್ ಮತ್ತು ಯಾಮಿ ಗೌತಮ್, ಬಾಲಿವುಡ್‌ನ 'ಪವರ್ ಕಪಲ್', ಅವರ ಸಂಪತ್ತು 100-125 ಕೋಟಿ ರೂ. 'ಧುರಂಧರ್' ಸರಣಿಯ ಭಾರಿ ಯಶಸ್ಸು ನಿರ್ದೇಶಕ ಆದಿತ್ಯ ಧಾರ್ ಜನಪ್ರಿಯತೆಯನ್ನು ಹೆಚ್ಚಿಸಿದೆ. ಯಾಮಿ ಗೌತಮ್ ಹೆಚ್ಚು ಸಂಪಾದನೆ ಮಾಡಿದ್ದು, ಜಾಹೀರಾತು ಮತ್ತು ನಟನೆಯ ಮೂಲಕ ಗಳಿಸುತ್ತಾರೆ. ಆದಿತ್ಯ ಪ್ರತಿ ಚಿತ್ರಕ್ಕೆ 8-10 ಕೋಟಿ ರೂ. ಪಡೆಯುತ್ತಾರೆ.

‘ಧುರಂಧರ್ 2’ ನಿರ್ದೇಶಕ ಆದಿತ್ಯ ಧಾರ್ ಹಾಗೂ ಪತ್ನಿ ಯಾಮಿ ಪೈಕಿ ಯಾರು ಹೆಚ್ಚು ಶ್ರೀಮಂತರು?
ಆದಿತ್ಯ-ಯಾಮಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 30, 2026 | 7:59 AM

Share

‘ಧುರಂಧರ್’ ನಿರ್ದೇಶಕ ಆದಿತ್ಯ ಧಾರ್ ಹೆಚ್ಚು ಚರ್ಚೆಯಲ್ಲಿರುವ ವ್ಯಕ್ತಿ. ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳ ಭಾರಿ ಯಶಸ್ಸಿನ ನಂತರ, ಆದಿತ್ಯ ಅವರ ಸಂಪತ್ತು ಎಷ್ಟು ಎಂಬ ಬಗ್ಗೆ ಚರ್ಚೆ ಆಗಿದೆ. ಅವರ ಪತ್ನಿ ಯಾಮಿ ಗೌತಮ್ ಮತ್ತು ಆದಿತ್ಯ ಅವರ ಒಟ್ಟು ಸಂಪತ್ತಿನ ಬಗ್ಗೆ ಇಲ್ಲಿದೆ ಮಾಹಿತ. ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳ ಭಾರಿ ಯಶಸ್ಸಿನ ನಂತರ ನಿರ್ದೇಶಕ ಆದಿತ್ಯ ಧಾರ್ ಜನಪ್ರಿಯತೆ ಹೆಚ್ಚಿದೆ. ಆದಿತ್ಯ ಈಗ ಬಾಲಿವುಡ್ ಅಲ್ಲಿ ಬೇಡಿಕೆಯ ನಿರ್ದೇಶಕ. ಅವರ ಸಂಪತ್ತು ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ. ಆದಿತ್ಯ ಅವರ ಪತ್ನಿ ಮತ್ತು ನಟಿ ಯಾಮಿ ಗೌತಮ್ ಕೂಡ ನಟನಾ ಕ್ಷೇತ್ರದಲ್ಲಿ ಹೆಸರು ಮಾಡುತ್ತಿದ್ದಾರೆ. ಅವರು ಕನ್ನಡದಲ್ಲಿ ಮೊದಲ ಬಾರಿಗೆ ನಟಿಸಿದರು.

ಒಂದು ವರದಿಯ ಪ್ರಕಾರ, ಆದಿತ್ಯ ಧಾರ್ ಮತ್ತು ಯಾಮಿ ಗೌತಮ್ ಅವರ ಒಟ್ಟು ಸಂಪತ್ತು 100 ರಿಂದ 125 ಕೋಟಿ ರೂ.ಗಳ ನಡುವೆ ಇದೆ. ಅವರಲ್ಲಿ ಯಾಮಿ ಅತಿ ಹೆಚ್ಚು ಆದಾಯ ಹೊಂದಿರುವವರು. ಯಾಮಿ 90 ಕೋಟಿ ರೂ.ಗಳಿಗಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ.

ಆದಿತ್ಯ ಧಾರ್ ಚಲನಚಿತ್ರ ನಿರ್ದೇಶನ ಮತ್ತು ಬರವಣಿಗೆಯಿಂದ ಗಳಿಸುತ್ತಾ ಇದ್ದಾರೆ. ಯಾಮಿ ನಟನೆ ಮತ್ತು ಜಾಹೀರಾತುಗಳಿಂದ ಸಂಪಾದಿಸುತ್ತಾರೆ. ಆದಿತ್ಯ ಒಂದು ಚಿತ್ರಕ್ಕೆ ಸುಮಾರು ಎಂಟರಿಂದ ಹತ್ತು ಕೋಟಿ ರೂಪಾಯಿಗಳನ್ನು ಪಡೆಯುತ್ತಾರೆ.

ಈ ಇಬ್ಬರನ್ನು ಬಾಲಿವುಡ್ ಉದ್ಯಮದಲ್ಲಿ ಪವರ್ ಕಪಲ್ ಎಂದು ಪರಿಗಣಿಸಲಾಗಿದೆ. ಈಗ, ‘ಧುರಂಧರ್ 2’ ಯಶಸ್ಸಿನ ನಂತರ, ಆದಿತ್ಯ ಅವರ ಸಂಪತ್ತು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಎರಡೂ ಚಿತ್ರಗಳು ಒಟ್ಟಿಗೆ 2000 ಕೋಟಿ ರೂ. ಗಳಿಸಿವೆ. ಎರಡನೇ ಭಾಗದ ಗಳಿಕೆ ಇನ್ನೂ ಮುಂದುವರೆದಿದೆ.

ಇದನ್ನೂ ಓದಿ:  ‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ?

ಆದಿತ್ಯ ಧಾರ್ 1983 ರಲ್ಲಿ ದೆಹಲಿಯ ಕಾಶ್ಮೀರಿ ಪಂಡಿತ್ ಕುಟುಂಬದಲ್ಲಿ ಜನಿಸಿದರು. ಅವರ ತಾಯಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಆದಿತ್ಯ ಅದೇ ನಗರದಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಕ್ರಿಕೆಟಿಗನಾಗುವುದು ಅವರ ಕನಸಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ