AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ?

Aditya Dhar and Ranveer Singh: ‘ಧುರಂಧರ್’ ಸಿನಿಮಾ ಈಗಾಗಲೇ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡುವ ನಿರೀಕ್ಷೆ ಇದೆ. ಇದೀಗ ಸಿನಿಮಾದ ನಾಯಕ ರಣ್ವೀರ್ ಸಿಂಗ್ ಅವರಿಗೆ ಆದಿತ್ಯ ಧರ್ ಮತ್ತು ಅವರ ಪತ್ನಿ ಯಾಮಿ ಗೌತಮ್ ಭರ್ಜರಿ ಉಡುಗೊರೆ ನೀಡಿದ್ದಾರೆ. ಏನದು ಉಡುಗೊರೆ ಮಾಹಿತಿ ಇಲ್ಲಿದೆ.

‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್​​ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ?
Dhurandhar 2 Gmc
ಮಂಜುನಾಥ ಸಿ.
|

Updated on:Mar 28, 2026 | 9:20 PM

Share

ಧುರಂಧರ್ 2’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರಗಳಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ್ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚು ಮಾಡಲಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ್’ ಸಿನಿಮಾ ಈಗಾಗಲೇ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡುವ ನಿರೀಕ್ಷೆ ಇದೆ. ಇದೀಗ ಸಿನಿಮಾದ ನಾಯಕ ರಣ್ವೀರ್ ಸಿಂಗ್ ಅವರಿಗೆ ಆದಿತ್ಯ ಧರ್ ಮತ್ತು ಅವರ ಪತ್ನಿ ಯಾಮಿ ಗೌತಮ್ ಭರ್ಜರಿ ಉಡುಗೊರೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾಗಳು ಯಶಸ್ವಿಯಾದರೆ ಮುಖ್ಯ ನಟರಿಗೆ, ತಂತ್ರಜ್ಞರಿಗೆ ಐಶಾರಾಮಿ ಕಾರುಗಳನ್ನು ಉಡುಗೊರೆಯಾಗಿ ಕೊಡುವ ಸಂಪ್ರದಾಯ ದಕ್ಷಿಣ ಭಾರತ ಚಿತ್ರರಂಗದಲ್ಲಿ ಶುರುವಾಗಿದೆ. ಇದೀಗ ಆದಿತ್ಯ ಧರ್ ಅವರೂ ಸಹ ರಣ್ವೀರ್ ಸಿಂಗ್​​ಗೆ ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಅದೂ ಸಾಮಾನ್ಯ ಕಾರಲ್ಲ ಬದಲಿಗೆ ಐದು ಕೋಟಿಗೂ ಹೆಚ್ಚು ಮೌಲ್ಯದ ಐಶಾರಾಮಿ ಜಿಎಂಸಿ ಹಮ್ಮರ್ ಇವಿ ಕಾರನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಿಶ್ವದ ರಗಡ್ ಮತ್ತು ಐಶಾರಾಮಿ ಕಾರುಗಳಲ್ಲಿ ಒಂದಾಗಿರುವ ಹಮ್ಮರ್ ಕಾರಿನ ಅತ್ಯಾಧುನಿಕ ವರ್ಷನ್​​ ಕಾರು ಇದಾಗಿದೆ. ವಿಶೇಷವೆಂದರೆ ಈ ಕಾರು ಎಲೆಕ್ಟ್ರಾನಿಕ್ ಕಾರಾಗಿದೆ.

ಇದನ್ನೂ ಓದಿ:ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿದ ‘ಧುರಂಧರ್’ ಸಿನಿಮಾದ ಪಾತ್ರಗಳು: ಫೋಟೋ ವೈರಲ್

ರಣ್ವೀರ್ ಅವರು ಇತ್ತೀಚೆಗಷ್ಟೆ ಈ ಜಿಎಂಸಿ ಹಮ್ಮರ್ ಇವಿ ಕಾರಿನಲ್ಲಿ ಓಡಾಡುತ್ತಿರುವಾಗ ಪಾಪರಾಟ್ಜಿಗಳ ಕಣ್ಣಿಗೆ ಬಿದ್ದಿದ್ದು, ಈ ಕಾರನ್ನು ಆದಿತ್ಯ ಮತ್ತು ಯಾಮಿ ಅವರು ಉಡುಗೊರೆಯಾಗಿ ನೀಡಿದ್ದಾರೆ ಎನ್ನಲಾಗುತ್ತಿದೆ. ಆದಿತ್ಯ ಮತ್ತು ರಣ್ವೀರ್ ಸಿಂಗ್ ನಡುವೆ ಇರುವ ಗೆಳೆತನದ ಸಂಕೇತವಾಗಿ ಈ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆಯಂತೆ. ಅಲ್ಲದೆ, ಆದಿತ್ಯ ಹಾಗೂ ರಣ್ವೀರ್ ಅವರುಗಳು ಮುಂದೆ ಸಹ ಒಟ್ಟಿಗೆ ಕೆಲಸ ಮಾಡಲಿದ್ದು, ಅದರ ದ್ಯೋತಕವಾಗಿ ಈ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ ‘ಧುರಂಧರ್ 2’ ಸಿನಿಮಾದ ಸಕ್ಸಸ್ ಪಾರ್ಟಿ ನಡೆದಿತ್ತು, ಆ ಪಾರ್ಟಿ ವೇಳೆ ರಣ್ವೀರ್​​ಗೆ ಈ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನಟ ರಣ್ವೀರ್ ಆಗಲಿ, ಆದಿತ್ಯ ಧರ್ ಆಗಲಿ ಹಂಚಿಕೊಂಡಿಲ್ಲ.

ಜಿಎಂಸಿ ಹಮ್ಮರ್ ಇವಿ ಕಾರು 5 ಕೋಟಿ ರೂಪಾಯಿ ಮೌಲ್ಯದ್ದಾಗಿದ್ದು, ಇದು ವಿಶ್ವದ ಅತ್ಯಂತ ವೇಗದ ಮತ್ತು ಐಷಾರಾಮಿ ಕಾರುಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ರಣವೀರ್ ಸಿಂಗ್ ಮೊದಲೇ ವಾಹನ ಪ್ರೇಮಿಯಾಗಿದ್ದು, ಅವರ ಗ್ಯಾರೇಜ್‌ನಲ್ಲಿ ಈಗಾಗಲೇ ಲಂಬೋರ್ಗಿನಿ, ಆಸ್ಟನ್ ಮಾರ್ಟಿನ್‌, ಆಡಿ, ಮರ್ಸಿಡೀಸ್, ಬಿಎಂಡಬ್ಲುನಂತಹ ದುಬಾರಿ ಕಾರುಗಳಿವೆ. ಈಗ ಈ ಹೊಸ ಅತಿಥಿಯ ಸೇರ್ಪಡೆಯಿಂದ ಅವರ ಸಂಗ್ರಹ ಮತ್ತಷ್ಟು ಶ್ರೀಮಂತವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Sat, 28 March 26

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ