AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಕೃತಿಚೌರ್ಯ ಆರೋಪ ಮಾಡಿದ ಸಂತೋಷ್ ಕುಮಾರ್ ಆರ್​.ಎಸ್. ವಿರುದ್ಧ ಆದಿತ್ಯ ಧರ್ ಅವರು ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಸಂತೋಷ್ ಅವರು ಆದಿತ್ಯ ಧರ್ ಬಗ್ಗೆ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ
Aditya Dhar, Santosh Kumar RS
ಮದನ್​ ಕುಮಾರ್​
|

Updated on: Apr 08, 2026 | 3:18 PM

Share

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ.

‘ಧುರಂಧರ್’ ಸರಣಿಯ ಎರಡನೇ ಭಾಗವಾದ ‘ಧುರಂಧರ್: ದಿ ರಿವೇಂಜ್’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸಂತೋಷ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ, ಆದಿತ್ಯ ಧರ್ ಅವರು ತಮ್ಮ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದರು. ತಮ್ಮ ಬಳಿ ನೋಂದಾಯಿತವಾಗಿರುವ ‘ಡಿ ಸಾಹೇಬ್’ ಎಂಬ ಸ್ಕ್ರಿಪ್ಟ್ ಅನ್ನು ಆದಿತ್ಯ ಧರ್ ಕಾಪಿ ಮಾಡಿದ್ದಾರೆ ಎಂದು ಸಂತೋಷ್ ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಆದಿತ್ಯ ಧರ್, ಲೀಗಲ್ ನೋಟಿಸ್ ಕಳುಹಿಸಿ ಈ ಆರೋಪಗಳನ್ನು ನಿರಾಕರಿಸಿದ್ದರು. ಆದರೆ ಸಂತೋಷ್ ಕುಮಾರ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆಯ ವೇಳೆ ಆದಿತ್ಯ ಧರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿರೇಂದ್ರ ಸರಾಫ್, ‘ಸಂತೋಷ್ ಕುಮಾರ್ ಅವರ ಹೇಳಿಕೆಗಳು ಆಧಾರರಹಿತವಾಗಿದ್ದು, ನಿರ್ದೇಶಕರ ಘನತೆಗೆ ಧಕ್ಕೆ ತರುತ್ತಿವೆ’ ಎಂದು ವಾದಿಸಿದರು.

ಸಂತೋಷ್ ಕುಮಾರ್ ಅವರಿಗೆ ನೋಟಿಸ್ ನೀಡಲಾಗಿದ್ದರೂ, ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಆದಿತ್ಯ ಧರ್ ಅವರು ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಮುಂದಿನ ವಿಚಾರಣೆಯವರೆಗೆ (ಏಪ್ರಿಲ್ 16) ಸಂತೋಷ್ ಕುಮಾರ್ ಅವರು ಈ ಸ್ಕ್ರಿಪ್ಟ್ ವಿಚಾರವಾಗಿ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಪ್ರತಿವಾದಿಯು (ಸಂತೋಷ್) ದೂರಿನಲ್ಲಿ ಉಲ್ಲೇಖಿಸಲಾದ ಮಾತುಗಳನ್ನು ಅಥವಾ ಅದೇ ರೀತಿಯ ಇತರ ಯಾವುದೇ ಆರೋಪಗಳನ್ನು ಪುನರಾವರ್ತಿಸಬಾರದು’ ಎಂದು ನ್ಯಾಯಾಲಯ ಆದೇಶಿಸಿದೆ. ಈ ಆದೇಶವು ಕೇವಲ ಸಂತೋಷ್ ಕುಮಾರ್ ಅವರಿಗೆ ಮಾತ್ರ ಅನ್ವಯಿಸಲಿದ್ದು, ಏಪ್ರಿಲ್ 16ರಂದು ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಲಕ್ಷ್ಮಿ ಬೇಡಯ್ಯ ಗೃಹವನ್ನ ನೀಡಯ್ಯ: ಹಾಡಿನ ಮೂಲಕ ಮುಸ್ಲಿಂ ಮಹಿಳೆ ಮನವಿ
ಗೃಹಲಕ್ಷ್ಮಿ ಬೇಡಯ್ಯ ಗೃಹವನ್ನ ನೀಡಯ್ಯ: ಹಾಡಿನ ಮೂಲಕ ಮುಸ್ಲಿಂ ಮಹಿಳೆ ಮನವಿ
ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ
ಈ ಬಾಬಾ ನನ್ನನ್ನು ಅತ್ಯಾಚಾರ ಮಾಡಿದ್ದಾನೆ
ಆ ವಿಡಿಯೋ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀನಂದಾ ನಾಪತ್ತೆ!
ಆ ವಿಡಿಯೋ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀನಂದಾ ನಾಪತ್ತೆ!
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!