AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ರಿಯಾಲಿಟಿ ಶೋನಿಂದ ಹೊರ ನಡೆದ ಖ್ಯಾತ ನಿರೂಪಕ; ಮತ್ತೆ ಮರಳಲ್ಲ ಎಂದ ನಟ

ಈ ಬಗ್ಗೆ ಸಂದರ್ಶನವೊಂದರಲ್ಲಿ ಆದಿತ್ಯ ಮಾತನಾಡಿದ್ದಾರೆ. ನಿರೂಪಣೆ ಮಾಡಿದ್ದು ಅವರಿಗೆ ಸಾಕೆನಿಸಿದೆಯಂತೆ. ಜತೆಗೆ ಹೊಸದೇನಾದರೂ ಮಾಡಬೇಕು ಎನ್ನುವ ತುಡಿತ ಹುಟ್ಟಿದೆ.

ಏಕಾಏಕಿ ರಿಯಾಲಿಟಿ ಶೋನಿಂದ ಹೊರ ನಡೆದ ಖ್ಯಾತ ನಿರೂಪಕ; ಮತ್ತೆ ಮರಳಲ್ಲ ಎಂದ ನಟ
ಏಕಾಏಕಿ ರಿಯಾಲಿಟಿ ಶೋನಿಂದ ಹೊರ ನಡೆದ ಖ್ಯಾತ ನಿರೂಪಕ; ಮತ್ತೆ ಮರಳಲ್ಲ ಎಂದ ನಟ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 29, 2021 | 5:13 PM

Share

ಉದಿತ್​ ನಾರಾಯಣ್​ ಮಗ ಆದಿತ್ಯ ನಾರಾಯಣ್​ ಅವರು ನಟನೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದಾರೆ. ಆದರೆ, ಅವರಿಗೆ ಖ್ಯಾತಿ ತಂದುಕೊಟ್ಟಿದ್ದು ರಿಯಾಲಿಟಿ ಶೋ ನಿರೂಪಣೆ. ಸಾಕಷ್ಟು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿರುವ ಅವರು, ತಮ್ಮ ಭಿನ್ನ ನಿರೂಪಣೆ ಮೂಲಕ ವೀಕ್ಷಕರಿಗೆ ಇಷ್ಟವಾಗಿದ್ದಾರೆ. ಆದರೆ, ಈಗ ಅವರು ಏಕಾಏಕಿ ರಿಯಾಲಿಟಿ ಶೋ ನಿರೂಪಣೆಗೆ ಗುಡ್​ಬೈ ಹೇಳಿದ್ದಾರೆ. ಅಷ್ಟೇ ಅಲ್ಲ, ಮತ್ತೆ ಈ ಕ್ಷೇತ್ರಕ್ಕೆ ಮರಳುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಆದಿತ್ಯ ಮಾತನಾಡಿದ್ದಾರೆ. ನಿರೂಪಣೆ ಮಾಡಿದ್ದು ಅವರಿಗೆ ಸಾಕೆನಿಸಿದೆಯಂತೆ. ಜತೆಗೆ ಹೊಸದೇನಾದರೂ ಮಾಡಬೇಕು ಎನ್ನುವ ತುಡಿತ ಹುಟ್ಟಿದೆ. ‘ಶೋಗಳನ್ನು ಹೋಸ್ಟ್​ ಮಾಡುವುದು ಸಾಕೆನಿಸಿದೆ. ಇನ್ನೂ ಮೇಲೆ ಹೋಗಬೇಕು ಎಂಬುದು ನನ್ನ ಆಸೆ. ನಾನು ಕೆಲ ಪ್ರಾಜೆಕ್ಟ್​ಗಳನ್ನು ನಿರ್ಮಾಣ ಮಾಡಬೇಕು. ಒಟಿಟಿ, ಟಿವಿ ಹಾಗೂ ಮ್ಯೂಸಿಕ್​ ಆಲ್ಬಮ್​ಗಳನ್ನು ನಿರ್ಮಾಣ ಮಾಡಬೇಕು ಎಂದುಕೊಂಡಿದ್ದೇನೆ. ಅದಕ್ಕೆ ಇದು ಸರಿಯಾದ ಸಮಯ. ನಾನು ಇದನ್ನೇ ಮಾಡಬೇಕು ಎಂದು ನನ್ನ ಮನಸ್ಸು ಹೇಳುತ್ತಿದೆ’ ಎಂದು ಮನಸಿನ ಮಾತನ್ನು ಹೇಳಿದ್ದಾರೆ ಅವರು.

ಚಿಕ್ಕ ವಯಸ್ಸಿನಲ್ಲಿ ಎಲ್ಲರಿಗೂ ಒಂದು ಕನಸು ಇರುತ್ತದೆ. ಆ ಕನಸನ್ನು ಪೂರ್ಣಗೊಳಿಸಬೇಕು ಎಂದು ಹಲವರು ಪ್ರಯತ್ನಿಸುತ್ತಾರೆ. ಇನ್ನೂ ಕೆಲವರು ಆ ಕನಸನ್ನು ಅರ್ಧಕ್ಕೆ ಬಿಡುತ್ತಾರೆ. ಆದರೆ, ಈಗ ಆದಿತ್ಯ ನಾರಾಯಣ್​ ಬಾಲ್ಯದ ಕನಸನ್ನು ಪೂರ್ಣಗೊಳಿಸುತ್ತಿದ್ದಾರೆ. ‘ಭಾರತಕ್ಕೋಸ್ಕರ ಗ್ರ್ಯಾಮಿ ಅವಾರ್ಡ್​ ಗೆಲ್ಲಬೇಕು ಎನ್ನುವುದು ನನ್ನ ಸಣ್ಣ ವಯಸ್ಸಿನ ಕನಸು. ಆ ಕನಸನ್ನು ನನಸು ಮಾಡಿಕೊಳ್ಳುವ ಕಾಲ ಸಮೀಪಿಸಿದೆ. ಎಲ್ಲರ ದೃಷ್ಟಿ ಭಾರತದ ಮೇಲಿದೆ. ವಿಶ್ವ ಮಟ್ಟದಲ್ಲಿ ನಾವು ಮಿಂಚಬೇಕು’ ಎಂದಿದ್ದಾರೆ ಅವರು.

ಆದಿತ್ಯ ನಾರಾಯಣ್​ ಅವರು ರಿಯಾಲಿಟಿ ಶೋ ನಿರೂಪಣೆ ಬಿಡುತ್ತಿದ್ದಾರೆ ಎನ್ನುವ ವಿಚಾರ ಅನೇಕ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇನ್ನು, ಅವರು ಬೇರೆಬೇರೆ ಆಲೋಚನೆಯೊಂದಿಗೆ ಹೊಸ ಪ್ರಯತ್ನಕ್ಕೆ ಮುಂದಾಗುತ್ತಿರುವುದಕ್ಕೆ ಅನೇಕರು ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: ನೀನು ಗಂಡಸಾಗಿರಬಹುದು, ಆದರೆ ನಿನಗಿಂತ ಹೆಚ್ಚು ಪ್ರಬುದ್ಧತೆ ನನಗಿದೆ; ಸಿಟ್ಟಾದ ವೈಷ್ಣವಿ

‘ಡ್ಯಾನ್ಸ್​​ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಅನುಶ್ರೀಗೆ ಸಿಕ್ಕರು ಈ ವಿಶೇಷ ವ್ಯಕ್ತಿ

Published On - 4:54 pm, Sun, 29 August 21

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ