ಬಾಬಾ ಸಿದ್ಧಿಕಿ ಹತ್ಯೆ ಬಳಿಕ ನಟ ಸಲ್ಮಾನ್​ ಖಾನ್​ಗೆ ವೈ ಪ್ಲಸ್​ ಭದ್ರತೆ

ನಟ ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಬಾಬಾ ಸಿದ್ಧಿಕಿ ಕೊಲೆ ಬಳಿಕ ಆತಂಕ ಹೆಚ್ಚಿದೆ. ಆದ್ದರಿಂದ ಸಲ್ಮಾನ್​ ಖಾನ್​ ಅವರಿಗೆ ವೈ ಪ್ಲಸ್​ ಭದ್ರತೆ ಒದಗಿಸಲಾಗುತ್ತಿದೆ. ಎಷ್ಟೇ ಬೆದರಿಕೆ ಇದ್ದರೂ ಕೂಡ ಸಲ್ಮಾನ್​ ಖಾನ್​ ಅವರು ಬಾಬಾ ಸಿದ್ಧಿಕಿ ಅವರ ಫ್ಯಾಮಿಲಿ ಜೊತೆ ನಿಂತಿದ್ದಾರೆ. ಕಷ್ಟದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಸಲ್ಲು ಸಹಾಯ ಮಾಡುತ್ತಿದ್ದಾರೆ.

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ನಟ ಸಲ್ಮಾನ್​ ಖಾನ್​ಗೆ ವೈ ಪ್ಲಸ್​ ಭದ್ರತೆ
ಸಲ್ಮಾನ್​ ಖಾನ್​
Follow us
|

Updated on: Oct 15, 2024 | 4:00 PM

ಎನ್​ಸಿಪಿ ಮುಖಂಡ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆಯಿಂದಾಗಿ ಮುಂಬೈ ಜನರಲ್ಲಿ ಆತಂಕ ಹೆಚ್ಚಾಗಿದೆ. ಅದರಲ್ಲೂ ಸೆಲೆಬ್ರಿಟಿಗಳಿಗೆ ಟೆನ್ಷನ್ ಜಾಸ್ತಿ ಆಗಿದೆ. ಸಲ್ಮಾನ್​ ಜೊತೆ ಬಾಬಾ ಸಿದ್ಧಿಕಿ ಅವರು ಆತ್ಮೀಯ ಒಡನಾಟ ಹೊಂದಿದ್ದರು. ಆ ಕಾರಣದಿಂದಲೇ ಅವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಇದೆ. ಸಲ್ಮಾನ್ ಖಾನ್​ ಹತ್ಯೆಗೆ ಹಲವು ವರ್ಷಗಳಿಂದ ಸ್ಕೆಚ್​ ಹಾಕಿರುವ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್​ ಗ್ಯಾಂಗ್​ನಿಂದಲೇ ಬಾಬಾ ಸಿದ್ಧಿಕಿಯ ಮರ್ಡರ್​ ನಡೆದಿದೆ. ಹಾಗಾಗಿ ಸಲ್ಮಾನ್ ಖಾನ್ ಅವರಿಗೆ ಈಗ ವೈ ಪ್ಲಸ್​ ಭದ್ರತೆ ನೀಡಲಾಗುತ್ತಿದೆ.

ಸಲ್ಮಾನ್​ ಖಾನ್ ಅವರ ಸುತ್ತಲೂ ಪೊಲೀಸರ ತಂಡ ಇರಲಿದೆ. ಅವರು ಎಲ್ಲಿಯೇ ಹೋದರೂ ಭದ್ರತೆ ನೀಡಲಾಗುತ್ತದೆ. ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನು ಬಳಸುವ ತರಬೇತಿ ಪಡೆದಿರುವ ಕಾನ್ಸ್​ಟೇಬಲ್​ ಒಬ್ಬರು ಯಾವಾಗಲೂ ಸಲ್ಮಾನ್​ ಖಾನ್​ ಜೊತೆ ಇರಲಿದ್ದಾರೆ. ಅಲ್ಲದೇ ಸಲ್ಮಾನ್​ ಖಾನ್​ ಅವರ ಖಾಸಗಿ ಸೆಕ್ಯೂರಿಟಿಯನ್ನೂ ಹೆಚ್ಚಿಸಲಾಗಿದೆ. ಅವರ ನಿವಾಸದ ಎದುರು ಕೂಡ ಪೊಲೀಸ್​ ಪ್ರೊಟೆಕ್ಷನ್​ ನೀಡಲಾಗುತ್ತಿದೆ.

ಈ ಮೊದಲ ಸಲ್ಮಾನ್​ ಖಾನ್​ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಅಲ್ಲದೇ, ಅವರ ಫಾರ್ಮ್​ಹೌಸ್​ಗೆ ನುಗ್ಗಲು ಕಿಡಿಗೇಡಿಗಳು ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಫಾರ್ಮ್​ಹೌಸ್​ಗೂ ಭದ್ರತೆ ಒದಗಿಸಲಾಗಿದೆ. ಸದ್ಯಕ್ಕೆ ಯಾರನ್ನೂ ಕೂಡ ಭೇಟಿ ಮಾಡಬಾರದು ಎಂದು ಸಲ್ಮಾನ್​ ಖಾನ್​ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಬಾಬಾ ಸಿದ್ಧಿಕಿ ಮತ್ತು ಸಲ್ಮಾನ್​ ಖಾನ್​ ಅವರು ಆಪ್ತವಾಗಿದ್ದರು. ಸಲ್ಮಾನ್​ ಖಾನ್​ಗೆ ಸಹಾಯ ಮಾಡುವ ವ್ಯಕ್ತಿ ಎಂಬ ಕಾರಣಕ್ಕೆ ಬಾಬಾ ಸಿದ್ಧಿಕಿ ಅವರನ್ನು ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನವರು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಲ್ಮಾನ್​ ಖಾನ್​ಗೆ ಸಹಾಯ ಮಾಡುವ ಯಾವುದೇ ವ್ಯಕ್ತಿಗೆ ಇದೇ ಗತಿ ಆಗಲಿದೆ ಎಂದು ಲಾರೆನ್ಸ್​ ಬಿಷ್ಣೋಯ್​ ಗಾಂಗ್​ನವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್