AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ನಟ ಸಲ್ಮಾನ್​ ಖಾನ್​ಗೆ ವೈ ಪ್ಲಸ್​ ಭದ್ರತೆ

ನಟ ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಬಾಬಾ ಸಿದ್ಧಿಕಿ ಕೊಲೆ ಬಳಿಕ ಆತಂಕ ಹೆಚ್ಚಿದೆ. ಆದ್ದರಿಂದ ಸಲ್ಮಾನ್​ ಖಾನ್​ ಅವರಿಗೆ ವೈ ಪ್ಲಸ್​ ಭದ್ರತೆ ಒದಗಿಸಲಾಗುತ್ತಿದೆ. ಎಷ್ಟೇ ಬೆದರಿಕೆ ಇದ್ದರೂ ಕೂಡ ಸಲ್ಮಾನ್​ ಖಾನ್​ ಅವರು ಬಾಬಾ ಸಿದ್ಧಿಕಿ ಅವರ ಫ್ಯಾಮಿಲಿ ಜೊತೆ ನಿಂತಿದ್ದಾರೆ. ಕಷ್ಟದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಸಲ್ಲು ಸಹಾಯ ಮಾಡುತ್ತಿದ್ದಾರೆ.

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ನಟ ಸಲ್ಮಾನ್​ ಖಾನ್​ಗೆ ವೈ ಪ್ಲಸ್​ ಭದ್ರತೆ
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Oct 15, 2024 | 4:00 PM

Share

ಎನ್​ಸಿಪಿ ಮುಖಂಡ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆಯಿಂದಾಗಿ ಮುಂಬೈ ಜನರಲ್ಲಿ ಆತಂಕ ಹೆಚ್ಚಾಗಿದೆ. ಅದರಲ್ಲೂ ಸೆಲೆಬ್ರಿಟಿಗಳಿಗೆ ಟೆನ್ಷನ್ ಜಾಸ್ತಿ ಆಗಿದೆ. ಸಲ್ಮಾನ್​ ಜೊತೆ ಬಾಬಾ ಸಿದ್ಧಿಕಿ ಅವರು ಆತ್ಮೀಯ ಒಡನಾಟ ಹೊಂದಿದ್ದರು. ಆ ಕಾರಣದಿಂದಲೇ ಅವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಇದೆ. ಸಲ್ಮಾನ್ ಖಾನ್​ ಹತ್ಯೆಗೆ ಹಲವು ವರ್ಷಗಳಿಂದ ಸ್ಕೆಚ್​ ಹಾಕಿರುವ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್​ ಗ್ಯಾಂಗ್​ನಿಂದಲೇ ಬಾಬಾ ಸಿದ್ಧಿಕಿಯ ಮರ್ಡರ್​ ನಡೆದಿದೆ. ಹಾಗಾಗಿ ಸಲ್ಮಾನ್ ಖಾನ್ ಅವರಿಗೆ ಈಗ ವೈ ಪ್ಲಸ್​ ಭದ್ರತೆ ನೀಡಲಾಗುತ್ತಿದೆ.

ಸಲ್ಮಾನ್​ ಖಾನ್ ಅವರ ಸುತ್ತಲೂ ಪೊಲೀಸರ ತಂಡ ಇರಲಿದೆ. ಅವರು ಎಲ್ಲಿಯೇ ಹೋದರೂ ಭದ್ರತೆ ನೀಡಲಾಗುತ್ತದೆ. ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನು ಬಳಸುವ ತರಬೇತಿ ಪಡೆದಿರುವ ಕಾನ್ಸ್​ಟೇಬಲ್​ ಒಬ್ಬರು ಯಾವಾಗಲೂ ಸಲ್ಮಾನ್​ ಖಾನ್​ ಜೊತೆ ಇರಲಿದ್ದಾರೆ. ಅಲ್ಲದೇ ಸಲ್ಮಾನ್​ ಖಾನ್​ ಅವರ ಖಾಸಗಿ ಸೆಕ್ಯೂರಿಟಿಯನ್ನೂ ಹೆಚ್ಚಿಸಲಾಗಿದೆ. ಅವರ ನಿವಾಸದ ಎದುರು ಕೂಡ ಪೊಲೀಸ್​ ಪ್ರೊಟೆಕ್ಷನ್​ ನೀಡಲಾಗುತ್ತಿದೆ.

ಈ ಮೊದಲ ಸಲ್ಮಾನ್​ ಖಾನ್​ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಅಲ್ಲದೇ, ಅವರ ಫಾರ್ಮ್​ಹೌಸ್​ಗೆ ನುಗ್ಗಲು ಕಿಡಿಗೇಡಿಗಳು ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಫಾರ್ಮ್​ಹೌಸ್​ಗೂ ಭದ್ರತೆ ಒದಗಿಸಲಾಗಿದೆ. ಸದ್ಯಕ್ಕೆ ಯಾರನ್ನೂ ಕೂಡ ಭೇಟಿ ಮಾಡಬಾರದು ಎಂದು ಸಲ್ಮಾನ್​ ಖಾನ್​ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಬಾಬಾ ಸಿದ್ಧಿಕಿ ಮತ್ತು ಸಲ್ಮಾನ್​ ಖಾನ್​ ಅವರು ಆಪ್ತವಾಗಿದ್ದರು. ಸಲ್ಮಾನ್​ ಖಾನ್​ಗೆ ಸಹಾಯ ಮಾಡುವ ವ್ಯಕ್ತಿ ಎಂಬ ಕಾರಣಕ್ಕೆ ಬಾಬಾ ಸಿದ್ಧಿಕಿ ಅವರನ್ನು ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನವರು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಲ್ಮಾನ್​ ಖಾನ್​ಗೆ ಸಹಾಯ ಮಾಡುವ ಯಾವುದೇ ವ್ಯಕ್ತಿಗೆ ಇದೇ ಗತಿ ಆಗಲಿದೆ ಎಂದು ಲಾರೆನ್ಸ್​ ಬಿಷ್ಣೋಯ್​ ಗಾಂಗ್​ನವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ