AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಭಾರತದ ಹೀರೋಗಳು’; ಹಾರ್ದಿಕ್​ನ ಟ್ರೋಲ್​ ಮಾಡಿದ್ದನ್ನು ಖಂಡಿಸಿದ ಸೋನು ಸೂದ್

ಕ್ರೀಡಾ ಸ್ಫೂರ್ತಿ ಅನ್ನೋದು ತುಂಬಾನೇ ಮುಖ್ಯ. ಆಟಗಾರ ಹೇಗೆ ಆಡಿದರೂ ಅವರನ್ನು ಸ್ವೀಕರಿಸಿಬೇಕು. ಆದರೆ, ಪಾಂಡ್ಯ ವಿಚಾರದಲ್ಲಿ ಹಾಗಾಗುತ್ತಿಲ್ಲ. ಅವರು ಮುಂಬೈ ಇಂಡಿಯನ್ಸ್​ಗೆ ಆಗಮಿಸಿ ರೋಹಿತ್ ಶರ್ಮಾ ಅವರ ಕ್ಯಾಪ್ಟನ್ಸಿಯನ್ನು ಕಿತ್ತುಕೊಂಡಿದ್ದಾರೆ ಎನ್ನುವ ಬೇಸರ ಅಭಿಮಾನಿಗಳಲ್ಲಿ ಇದೆ.

‘ಅವರು ಭಾರತದ ಹೀರೋಗಳು’; ಹಾರ್ದಿಕ್​ನ ಟ್ರೋಲ್​ ಮಾಡಿದ್ದನ್ನು ಖಂಡಿಸಿದ ಸೋನು ಸೂದ್
ಸೋನು-ಹಾರ್ದಿಕ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Mar 30, 2024 | 9:01 AM

Share

ಮುಂಬೈ ಇಂಡಿಯನ್ಸ್‌ನ (Mumbai Indians) ಹೊಸ ನಾಯಕ ಹಾರ್ದಿಕ್ ಪಾಂಡ್ಯ ಕ್ರಿಕೆಟ್​ನಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಗುಜರಾತ್​​ನ ಟೈಟನ್ಸ್ ಕ್ಯಾಪ್ಟನ್ ಆಗಿ ಆಡಿದ ಎರಡು ಸೀಸನ್​ನಲ್ಲಿ ಅವರು ತಂಡವನ್ನು ಎರಡು ಬಾರಿ ಫಿನಾಲೆಗೆ ಕರೆದುಕೊಂಡು ಹೋಗಿದ್ದರು ಮತ್ತು ಒಮ್ಮೆ ಕಪ್ ಗೆದ್ದಿದ್ದರು. ಈ ಬಾರಿ ಅವರು ಮುಂಬೈ ಕ್ಯಾಪ್ಟನ್ ಆಗಿದ್ದು, ಆಡಿದ ಎರಡೂ ಪಂದ್ಯದಲ್ಲಿ ಅವರು ಸೋತಿದ್ದಾರೆ. ಮತ್ತೊಂದೆಡೆ, ಸಾಮಾಜಿಕ ಜಾಲತಾಣಗಳಲ್ಲಿ ಅವರ ಬಗ್ಗೆ ಭಾರೀ ಟ್ರೋಲ್ ಆಗುತ್ತಿದೆ. ಅಹಮದಾಬಾದ್ ಮತ್ತು ಹೈದರಾಬಾದ್ ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಪ್ರೇಕ್ಷಕರು ಅವರನ್ನು ಟೀಕೆ ಮಾಡಿದ್ದಾರೆ. ಹಾರ್ದಿಕ್ ಬೌಂಡರಿ ಬಳಿ ಫೀಲ್ಡಿಂಗ್ ಮಾಡುತ್ತಿದ್ದರೆ ಅಥವಾ ಔಟಾದ ನಂತರ ಪೆವಿಲಿಯನ್‌ಗೆ ಹಿಂತಿರುಗಿದರೆ ರೋಹಿತ್ ಶರ್ಮಾ ಹೆಸರನ್ನು ಪ್ರೇಕ್ಷಕರು ಉದ್ದೇಶಪೂರ್ವಕವಾಗಿ ಕೂಗುತ್ತಿದ್ದಾರೆ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸೋನು ಸೂದ್​​ಗೆ ಇಷ್ಟವಾಗಲಿಲ್ಲ. ಈ ಬಗ್ಗೆ ಅವರು ಟ್ವಿಟ್ಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕ್ರೀಡಾ ಸ್ಫೂರ್ತಿ ಅನ್ನೋದು ತುಂಬಾನೇ ಮುಖ್ಯ. ಆಟಗಾರ ಹೇಗೆ ಆಡಿದರೂ ಅವರನ್ನು ಸ್ವೀಕರಿಸಿಬೇಕು. ಆದರೆ, ಪಾಂಡ್ಯ ವಿಚಾರದಲ್ಲಿ ಹಾಗಾಗುತ್ತಿಲ್ಲ. ಅವರು ಮುಂಬೈ ಇಂಡಿಯನ್ಸ್​ಗೆ ಆಗಮಿಸಿ ರೋಹಿತ್ ಶರ್ಮಾ ಅವರ ಕ್ಯಾಪ್ಟನ್ಸಿಯನ್ನು ಕಿತ್ತುಕೊಂಡಿದ್ದಾರೆ ಎನ್ನುವ ಬೇಸರ ಅಭಿಮಾನಿಗಳಲ್ಲಿ ಇದೆ. ಇತ್ತೀಚೆಗೆ ರೋಹಿತ್ ಶರ್ಮಾ ಅವರನ್ನು ಬೌಂಡರಿ ಗಡಿಗೆ ಪಾಂಡ್ಯ ಓಡಿಸಿದ್ದು ಅನೇಕರಿಗೆ ಬೇಸರ ತರಿಸಿದೆ. ಈ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ಟೀಕೆ ಎದುರಿಸುತ್ತಿದ್ದಾರೆ.

ಈಗ ಸೋನು ಸೂದ್ ಅವರು ಪೋಸ್ಟ್ ಒಂದನ್ನು ಮಾಡಿದ್ದಾರೆ. ಇದರಲ್ಲಿ ಅವರು ಹಾರ್ದಿಕ್ ಪಾಂಡ್ಯ ಬಗ್ಗೆ ನೇರವಾಗಿ ಪ್ರಸ್ತಾಪಿಸಿಲ್ಲ. ಆದರೆ ಅವರ ಈ ಪೋಸ್ಟ್ ಹಾರ್ದಿಕ್​ ಬಗ್ಗೆ ಮಾಡಿದ ಟ್ರೋಲ್​ ಕುರಿತಾಗಿಯೇ ಇದೆ. ನಮ್ಮ ದೇಶದ ಕ್ರೀಡಾಪಟುಗಳು ನಮ್ಮ ಹೀರೋಗಳು ಎಂದು ಅವರು ಬರೆದಿದ್ದಾರೆ. ‘ನಾವು ನಮ್ಮ ಆಟಗಾರರನ್ನು ಗೌರವಿಸಬೇಕು. ಅವರು ನಮ್ಮ ಹಾಗೂ ನಮ್ಮ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ ಆಟಗಾರರು. ಒಂದು ದಿನ ಅವರನ್ನು ಚಿಯರ್ ಮಾಡುತ್ತೀರಿ, ಮತ್ತೊಂದು ದಿನ ಬಯ್ಯುತ್ತೀರಿ. ಇಲ್ಲಿ ಅವರಲ್ಲ ವಿಫಲರಾಗುತ್ತಿರುವುದು, ನಾವು’ ಎಂದು ಪೋಸ್ಟ್ ಆರಂಭಿಸಿದ್ದಾರೆ ಅವರು.

‘ನನಗೆ ಕ್ರಿಕೆಟ್​ ಮೇಲೆ ಪ್ರೀತಿ ಇದೆ. ನನ್ನ ದೇಶವನ್ನು ಪ್ರತಿನಿಧಿಸುವ ಎಲ್ಲಾ ಆಟಗರಾರ ಮೇಲೆ ನನಗೆ ಪ್ರೀತಿ ಇದೆ. ಅವರು ಯಾವ ಫ್ರಾಂಚೈಸಿಗೆ ಆಟ ಆಡುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ. ಅವರು ಕ್ಯಾಪ್ಟನ್ ಅಥವಾ 15ನೇ ಆಟಗಾರನೋ ಅನ್ನೋದು ನನಗೆ ಮುಖ್ಯವಲ್ಲ. ಅವರು ಭಾರತದ ಹೀರೋಗಳು’ ಎಂದು ಹೇಳಿದ್ದಾರೆ. ಇದು ಹಾರ್ದಿಕ್ ಪಾಂಡ್ಯಾ ಬಗ್ಗೆಯೇ ಹಾಕಲಾದ ಪೋಸ್ಟ್ ಅನ್ನೋದು ಎಲ್ಲರಿಗೂ ಗೊತ್ತಾಗಿದೆ.

ಹಾರ್ದಿಕ್ ಪಾಂಡ್ಯಾ ಬಗ್ಗೆ ಸೋನು ಟ್ವೀಟ್

ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ನ ಹೊಸ ನಾಯಕನನ್ನಾಗಿ ಮಾಡಲಾಯಿತು. ರೋಹಿತ್ ಶರ್ಮಾ ಅವರನ್ನು ಈ ರೀತಿ ನಾಯಕತ್ವದಿಂದ ತೆಗೆದುಹಾಕಿರುವುದು ಅಭಿಮಾನಿಗಳಿಗೆ ಇಷ್ಟವಾಗಲಿಲ್ಲ. ಮುಂಬೈ ಇಂಡಿಯನ್ಸ್ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದಕ್ಕೆ ಹಾರ್ದಿಕ್ ಅವರೇ ಕಾರಣ ಅನ್ನೋದು ಅನೇಕರ ಅಭಿಪ್ರಾಯ. ಈ ಎರಡೂ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಕ್ರೀಡಾಂಗಣದಲ್ಲಿ ಸಾಕಷ್ಟು ಟ್ರೋಲ್ ಮಾಡಲಾಗಿದೆ.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾ ಜೊತೆ ಆಕಾಶ್ ಅಂಬಾನಿ ಸುದೀರ್ಘ ಚರ್ಚೆ..!

ಸೋನು ಸೂದ್ ಅವರು ಕೊವಿಡ್ ಬಳಿಕ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡುತ್ತಿಲ್ಲ. ಸಾಮಾಜಿಕವಾಗಿ ಅವರು ಎಲ್ಲರಿಗೂ ಸಹಾಯ ಮಾಡಿ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಸಾಮಾಜಿಕ ಕೆಲಸದ ಮೇಲೆ ಅವರ ಗಮನ ಇದೆ. ಈ ಬಾರಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ