ಕಾಸ್ಟಿಂಗ್ ಕೌಚ್ ತನಿಖೆಗೆ ಬಾಲಿವುಡ್​ನಲ್ಲಿ ರಚನೆ ಆಗಲಿದೆ ಸಮಿತಿ? ದೊಡ್ಡ ತಲೆಗಳಿಗೆ ಆಗಿದೆ ಭಯ

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ. ಈ ಬೆನ್ನಲ್ಲೇ ಬಾಲಿವುಡ್​ನ ಚಿತ್ರರಂಗದ ಬಗ್ಗೆ ತನಿಖೆ ನಡೆಸಲು ಸಮಿತಿ ಒಂದನ್ನು ರಚನೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಕಾಸ್ಟಿಂಗ್ ಕೌಚ್ ತನಿಖೆಗೆ ಬಾಲಿವುಡ್​ನಲ್ಲಿ ರಚನೆ ಆಗಲಿದೆ ಸಮಿತಿ? ದೊಡ್ಡ ತಲೆಗಳಿಗೆ ಆಗಿದೆ ಭಯ
ಸಾಂದರ್ಭಿಕ ಚಿತ್ರ
Follow us
|

Updated on: Aug 27, 2024 | 7:25 AM

ಮಲಯಾಳಂ ಚಿತ್ರರಂಗದಲ್ಲಿ ಜಸ್ಟೀಸ್ ಹೇಮಾ ಸಮಿತಿ ವರದಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿರುವ ಮಲಯಾಳಂ ಚಿತ್ರರಂಗದ ಆಂತರಿಕ ಮುಖ ಈ ರೀತಿ ಇಲ್ಲ ಎನ್ನಲಾಗುತ್ತಿದೆ. ಹೇಮಾ ವರದಿಯಲ್ಲಿ ಮಲಯಾಳಂ ಚಿತ್ರರಂಗದಲ್ಲಿ ನಟಿಯರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಲಾಗಿದೆ. ಈ ಬೆನ್ನಲ್ಲೇ ಬಾಲಿವುಡ್​ ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಬಗ್ಗೆ ತನಿಖೆ ನಡೆಸಲು ಸಮಿತಿ ಒಂದನ್ನು ರಚನೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಆಶಾ ಪಾರೇಖ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಉನ್ನತ ಮಟ್ಟದಲ್ಲಿ ಈ ತನಿಖೆ ಆಗಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಯು ಸರ್ಕಾರದ ಆದ್ಯತೆಯಾಗಿರಬೇಕು’ ಎಂದು  ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಲ ವರ್ಷಗಳ ಹಿಂದೆ ಬಾಲಿವುಡ್​ನಲ್ಲಿ ನಡೆದ MeToo ಆಂದೋಲನ ಸಂಚಲನ ಸೃಷ್ಟಿ ಮಾಡಿತ್ತು.

MeToo ಆಂದೋಲನದ ವೇಳೆ ಅನೇಕ ಹೀರೋಯಿನ್​ಗಳು ವಿವಿಧ ರೀತಿಯ ಆರೋಪಗಳನ್ನು ಮಾಡಿದರು. ಇದರಲ್ಲಿ ಸಂತ್ರಸ್ತೆಯರು ನಿರ್ಮಾಪಕರು, ನಿರ್ದೇಶಕರ ಹೆಸರನ್ನು ಹೇಳಿದ್ದರು. ಆದರೆ, ಯಾರಿಗೂ ಶಿಕ್ಷೆ ಆಗಿಲ್ಲ. ಸಣ್ಣ ಮೀನುಗಳು ಮಾತ್ರ ಇದರಲ್ಲಿ ಸಿಕ್ಕಿ ಬಿದ್ದವು. ದೊಡ್ಡವರು ಆರಾಮಾಗಿ ಓಡಾಡಿಕೊಂಡಿದ್ದಾರೆ ಅನ್ನೋದು ಅನೇಕರ ಅಭಿಪ್ರಾಯ. ಸಮಿತಿ ರಚನೆ ಆದರೆ ಈ ವಿಚಾರಗಳು ಹೊರಗೆ ಬರುತ್ತವೆ ಅನ್ನೋದು ಅನೇಕರ ನಂಬಿಕೆ.

ಉಳಿದ ಚಿತ್ರರಂಗಗಳಿಗೆ ಹೋಲಿಕೆ ಮಾಡಿದರೆ ಬಾಲಿವುಡ್​ನಲ್ಲಿ  ಕಾಸ್ಟಿಂಗ್ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕ ನಟಿಯರು ತಮ್ಮ ಕಹಿ ಅನುಭವ ಹಂಚಿಕೊಂಡಿದ್ದಾರೆ. ಆದರೆ, ಯಾರಿಗೂ ಶಿಕ್ಷೆ ಮಾತ್ರ ಆಗಿಲ್ಲ. ಈ ಬಗ್ಗೆ ಮಾತನಾಡಿದ ಹೀರೋಯಿನ್​ಗಳೇ ಈಗ ಟೀಕೆ ಎದುರಿಸುವಂಥ ಪರಿಸ್ಥಿತಿ ಬಂದೊದಗಿದೆ.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಹೇಮಾ ಸಮಿತಿ ವರದಿ

ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿಯ ವರದಿಯನ್ನು ಅನೇಕರು ಒಪ್ಪಿದ್ದಾರೆ. ಕೆಲವು ಹೀರೋಯಿನ್​ಗಳೇ ಈ ವಿಚಾರವನ್ನು ಅಲ್ಲಗಳೆದಿದ್ದಾರೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್