AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸ್ಟಿಂಗ್ ಕೌಚ್ ತನಿಖೆಗೆ ಬಾಲಿವುಡ್​ನಲ್ಲಿ ರಚನೆ ಆಗಲಿದೆ ಸಮಿತಿ? ದೊಡ್ಡ ತಲೆಗಳಿಗೆ ಆಗಿದೆ ಭಯ

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ. ಈ ಬೆನ್ನಲ್ಲೇ ಬಾಲಿವುಡ್​ನ ಚಿತ್ರರಂಗದ ಬಗ್ಗೆ ತನಿಖೆ ನಡೆಸಲು ಸಮಿತಿ ಒಂದನ್ನು ರಚನೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಕಾಸ್ಟಿಂಗ್ ಕೌಚ್ ತನಿಖೆಗೆ ಬಾಲಿವುಡ್​ನಲ್ಲಿ ರಚನೆ ಆಗಲಿದೆ ಸಮಿತಿ? ದೊಡ್ಡ ತಲೆಗಳಿಗೆ ಆಗಿದೆ ಭಯ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Aug 27, 2024 | 7:25 AM

Share

ಮಲಯಾಳಂ ಚಿತ್ರರಂಗದಲ್ಲಿ ಜಸ್ಟೀಸ್ ಹೇಮಾ ಸಮಿತಿ ವರದಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿರುವ ಮಲಯಾಳಂ ಚಿತ್ರರಂಗದ ಆಂತರಿಕ ಮುಖ ಈ ರೀತಿ ಇಲ್ಲ ಎನ್ನಲಾಗುತ್ತಿದೆ. ಹೇಮಾ ವರದಿಯಲ್ಲಿ ಮಲಯಾಳಂ ಚಿತ್ರರಂಗದಲ್ಲಿ ನಟಿಯರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಲಾಗಿದೆ. ಈ ಬೆನ್ನಲ್ಲೇ ಬಾಲಿವುಡ್​ ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಬಗ್ಗೆ ತನಿಖೆ ನಡೆಸಲು ಸಮಿತಿ ಒಂದನ್ನು ರಚನೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಆಶಾ ಪಾರೇಖ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಉನ್ನತ ಮಟ್ಟದಲ್ಲಿ ಈ ತನಿಖೆ ಆಗಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಯು ಸರ್ಕಾರದ ಆದ್ಯತೆಯಾಗಿರಬೇಕು’ ಎಂದು  ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಲ ವರ್ಷಗಳ ಹಿಂದೆ ಬಾಲಿವುಡ್​ನಲ್ಲಿ ನಡೆದ MeToo ಆಂದೋಲನ ಸಂಚಲನ ಸೃಷ್ಟಿ ಮಾಡಿತ್ತು.

MeToo ಆಂದೋಲನದ ವೇಳೆ ಅನೇಕ ಹೀರೋಯಿನ್​ಗಳು ವಿವಿಧ ರೀತಿಯ ಆರೋಪಗಳನ್ನು ಮಾಡಿದರು. ಇದರಲ್ಲಿ ಸಂತ್ರಸ್ತೆಯರು ನಿರ್ಮಾಪಕರು, ನಿರ್ದೇಶಕರ ಹೆಸರನ್ನು ಹೇಳಿದ್ದರು. ಆದರೆ, ಯಾರಿಗೂ ಶಿಕ್ಷೆ ಆಗಿಲ್ಲ. ಸಣ್ಣ ಮೀನುಗಳು ಮಾತ್ರ ಇದರಲ್ಲಿ ಸಿಕ್ಕಿ ಬಿದ್ದವು. ದೊಡ್ಡವರು ಆರಾಮಾಗಿ ಓಡಾಡಿಕೊಂಡಿದ್ದಾರೆ ಅನ್ನೋದು ಅನೇಕರ ಅಭಿಪ್ರಾಯ. ಸಮಿತಿ ರಚನೆ ಆದರೆ ಈ ವಿಚಾರಗಳು ಹೊರಗೆ ಬರುತ್ತವೆ ಅನ್ನೋದು ಅನೇಕರ ನಂಬಿಕೆ.

ಉಳಿದ ಚಿತ್ರರಂಗಗಳಿಗೆ ಹೋಲಿಕೆ ಮಾಡಿದರೆ ಬಾಲಿವುಡ್​ನಲ್ಲಿ  ಕಾಸ್ಟಿಂಗ್ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕ ನಟಿಯರು ತಮ್ಮ ಕಹಿ ಅನುಭವ ಹಂಚಿಕೊಂಡಿದ್ದಾರೆ. ಆದರೆ, ಯಾರಿಗೂ ಶಿಕ್ಷೆ ಮಾತ್ರ ಆಗಿಲ್ಲ. ಈ ಬಗ್ಗೆ ಮಾತನಾಡಿದ ಹೀರೋಯಿನ್​ಗಳೇ ಈಗ ಟೀಕೆ ಎದುರಿಸುವಂಥ ಪರಿಸ್ಥಿತಿ ಬಂದೊದಗಿದೆ.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಹೇಮಾ ಸಮಿತಿ ವರದಿ

ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿಯ ವರದಿಯನ್ನು ಅನೇಕರು ಒಪ್ಪಿದ್ದಾರೆ. ಕೆಲವು ಹೀರೋಯಿನ್​ಗಳೇ ಈ ವಿಚಾರವನ್ನು ಅಲ್ಲಗಳೆದಿದ್ದಾರೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ