AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಸಿನಿಮಾಗಳಿಗೆ ಕುಸಿದ ಬೇಡಿಕೆ; ‘ಪೃಥ್ವಿರಾಜ್​’ ಚಿತ್ರ ನೇರವಾಗಿ ಒಟಿಟಿಗೆ?

ವೀಕೆಂಡ್​ನಲ್ಲೂ ‘ಜಯೇಶ್​ಭಾಯ್​ ಜೋರ್ದಾರ್’ ಸಿನಿಮಾಗೆ ಪ್ರೇಕ್ಷಕರು ಬರುತ್ತಿಲ್ಲ. ಹೀಗಾಗಿ, ಪ್ರದರ್ಶಕರು ಈ ಸಿನಿಮಾ ಬದಲು ‘ಕೆಜಿಎಫ್ 2’ ಹಾಗೂ ‘ಡಾಕ್ಟರ್​ ಸ್ಟ್ರೇಂಜ್​’ ಸೀಕ್ವೆಲ್ ಪ್ರದರ್ಶನ ಮಾಡುತ್ತಿದ್ದಾರೆ. ಇದು ಯಶ್ ರಾಜ್ ಫಿಲ್ಮ್ಸ್ ಕೋಪಕ್ಕೆ ಕಾರಣವಾಗಿದೆ.

ಬಾಲಿವುಡ್​ ಸಿನಿಮಾಗಳಿಗೆ ಕುಸಿದ ಬೇಡಿಕೆ; ‘ಪೃಥ್ವಿರಾಜ್​’ ಚಿತ್ರ ನೇರವಾಗಿ ಒಟಿಟಿಗೆ?
ಅಕ್ಷಯ್ ಕುಮಾರ್
TV9 Web
| Edited By: |

Updated on:May 17, 2022 | 7:16 AM

Share

ಬಾಲಿವುಡ್​ನಲ್ಲಿ (Bollywood Movies) ತಯಾರಾದ ಸಿನಿಮಾಗಳಿಗೆ ಅಲ್ಲಿಯೇ ಬೇಡಿಕೆ ಇಲ್ಲ ಎಂಬಂತಾಗಿದೆ. ಇತ್ತೀಚೆಗೆ ತೆರೆಗೆ ಬಂದ ಬಾಲಿವುಡ್​ನ ಬಹುತೇಕ ಸಿನಿಮಾಗಳು ಮಕಾಡೆ ಮಲಗುತ್ತಿವೆ. ಇದು ಬಾಲಿವುಡ್ ಮಂದಿಯ ಆತಂಕ ಹೆಚ್ಚಿಸಿದೆ. ‘ರನ್​ವೇ 34’ ಹಾಗೂ ‘ಹೀರೋಪಂತಿ 2’ ಚಿತ್ರಗಳು ಈಗಾಗಲೇ ಸೋಲು ಕಂಡಿವೆ. ಕಳೆದ ವಾರ ರಿಲೀಸ್ ಆದ ‘ಜಯೇಶ್​ಭಾಯ್​ ಜೋರ್ದಾರ್’ ಸಿನಿಮಾವನ್ನು (Jayeshbhai Jordaar) ಜನರು ಒಪ್ಪಿಕೊಳ್ಳಲೇ ಇಲ್ಲ. ಈ ಸಿನಿಮಾ ಮೊದಲ ವಾರಾಂತ್ಯಕ್ಕೆ ಗಳಿಸಿದ್ದು ಸುಮಾರು 12 ಕೋಟಿ ರೂಪಾಯಿ ಪಾತ್ರ. ಇದರಿಂದ ಬಾಲಿವುಡ್ ನಿರ್ಮಾಪಕರು ಅಕ್ಷರಶಃ ಚಿಂತೆಗೆ ಒಳಗಾಗಿದ್ದಾರೆ. ಮುಂಬರುವ ಚಿತ್ರಗಳನ್ನು ನೇರವಾಗಿ ಒಟಿಟಿಗೆ ರಿಲೀಸ್ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

‘ಜಯೇಶ್​ಭಾಯ್​ ಜೋರ್ದಾರ್’ ಚಿತ್ರವನ್ನು ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಇದೇ ಪ್ರೊಡಕ್ಷನ್​ ಹೌಸ್​ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್​’ ಸಿನಿಮಾ ಮೂಡಿಬರುತ್ತಿದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್​ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ‘ಜಯೇಶ್​ಭಾಯ್​ ಜೋರ್ದಾರ್’ ಚಿತ್ರದಿಂದ ಯಶ್ ರಾಜ್​ ಫಿಲ್ಮ್ಸ್​ ನಷ್ಟ ಅನುಭವಿಸುತ್ತಿವೆ. ಹೀಗಾಗಿ, ‘ಪೃಥ್ವಿರಾಜ್​’ ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ಮಂಡ್ಯದಲ್ಲಿ ಸನ್ನಿ ಬರ್ತ್​ಡೇ ಬಲುಜೋರು; ರಕ್ತದಾನ ಮಾಡಿ, ಕೇಕ್​ ಕತ್ತರಿಸಿ, ಬಿರಿಯಾನಿ ಹಂಚಿದ ಫ್ಯಾನ್ಸ್​
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಪೃಥ್ವಿರಾಜ್’ ಟ್ರೇಲರ್​ನಲ್ಲಿ ಮಿಂಚಿದ ಅಕ್ಷಯ್​ ಕುಮಾರ್; ಈ ಸಿನಿಮಾದಿಂದ ಚೇತರಿಸಿಕೊಳ್ಳಲಿದೆಯೇ ಬಾಲಿವುಡ್​?
Image
‘ನೀವು ಮಗಳನ್ನು ದತ್ತು ಪಡೆದಿದ್ದು ಪಬ್ಲಿಸಿಟಿ ಗಿಮಿಕ್​’; ಅಭಿಮಾನಿ ಮಾತಿಗೆ ಸನ್ನಿ ಲಿಯೋನ್​ ಉತ್ತರ ಏನು?

ವೀಕೆಂಡ್​ನಲ್ಲೂ ‘ಜಯೇಶ್​ಭಾಯ್​ ಜೋರ್ದಾರ್’ ಸಿನಿಮಾಗೆ ಪ್ರೇಕ್ಷಕರು ಬರುತ್ತಿಲ್ಲ. ಹೀಗಾಗಿ, ಪ್ರದರ್ಶಕರು ಈ ಸಿನಿಮಾ ಬದಲು ‘ಕೆಜಿಎಫ್ 2’ ಹಾಗೂ ‘ಡಾಕ್ಟರ್​ ಸ್ಟ್ರೇಂಜ್​’ ಸೀಕ್ವೆಲ್ ಪ್ರದರ್ಶನ ಮಾಡುತ್ತಿದ್ದಾರೆ. ಇದು ಯಶ್ ರಾಜ್ ಫಿಲ್ಮ್ಸ್ ಕೋಪಕ್ಕೆ ಕಾರಣವಾಗಿದೆ. ಗುರುವಾರದವರೆಗೆ ನಿಗದಿತ ಶೋ ಪ್ರದರ್ಶನ ಮಾಡಲು ಪ್ರದರ್ಶಕರ ಬಳಿ ಯಶ್ ರಾಜ್ ಫಿಲ್ಮ್ಸ್​ ಕೋರಿದೆ. ಒಂದೊಮ್ಮೆ ಹಾಗೆ ಆಗದೆ ಇದ್ದರೆ ‘ಪೃಥ್ವಿರಾಜ್​’ ಹಾಗೂ ರಣಬೀರ್ ಕಪೂರ್ ನಟನೆಯ ‘ಶಂಷೇರಾ’ ಚಿತ್ರಗಳನ್ನು ನೇರವಾಗಿ ಒಟಿಟಿಗೆ ರಿಲೀಸ್ ಮಾಡಲು ನಿರ್ಮಾಣ ಸಂಸ್ಥೆ ನಿರ್ಧರಿಸಿದೆ ಎಂದು ವರದಿ ಆಗಿದೆ.

ದೊಡ್ಡದೊಡ್ಡ ಚಿತ್ರಗಳು ಒಟಿಟಿಯಲ್ಲಿ ನೇರವಾಗಿ ರಿಲೀಸ್ ಆದರೆ ನಿರ್ಮಾಪಕರಿಗೆ ಹೆಚ್ಚು ಹಣ ಸಿಗುತ್ತದೆ. ಸದ್ಯದ ಟ್ರೆಂಡ್ ನೋಡಿದರೆ ಬಾಲಿವುಡ್​ ಚಿತ್ರಗಳು ದೊಡ್ಡ ಮಟ್ಟದಲ್ಲಿ ಕಮಾಯಿ ಮಾಡುವುದು ಅನುಮಾನವೇ. ಹೀಗಾಗಿ, ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಿ ದುಡ್ಡು ಮಾಡಿಕೊಳ್ಳುವ ಆಲೋಚನೆ ಚಿತ್ರತಂಡದ್ದು ಎನ್ನಲಾಗುತ್ತಿದೆ. ಈ ಬಗ್ಗೆ ಯಶ್ ರಾಜ್​ ಫಿಲ್ಮ್ಸ್​ ಅಂತಿಮವಾಗಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Tue, 17 May 22

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!