ಬಾಲಿವುಡ್​ ಸಿನಿಮಾಗಳಿಗೆ ಕುಸಿದ ಬೇಡಿಕೆ; ‘ಪೃಥ್ವಿರಾಜ್​’ ಚಿತ್ರ ನೇರವಾಗಿ ಒಟಿಟಿಗೆ?

ವೀಕೆಂಡ್​ನಲ್ಲೂ ‘ಜಯೇಶ್​ಭಾಯ್​ ಜೋರ್ದಾರ್’ ಸಿನಿಮಾಗೆ ಪ್ರೇಕ್ಷಕರು ಬರುತ್ತಿಲ್ಲ. ಹೀಗಾಗಿ, ಪ್ರದರ್ಶಕರು ಈ ಸಿನಿಮಾ ಬದಲು ‘ಕೆಜಿಎಫ್ 2’ ಹಾಗೂ ‘ಡಾಕ್ಟರ್​ ಸ್ಟ್ರೇಂಜ್​’ ಸೀಕ್ವೆಲ್ ಪ್ರದರ್ಶನ ಮಾಡುತ್ತಿದ್ದಾರೆ. ಇದು ಯಶ್ ರಾಜ್ ಫಿಲ್ಮ್ಸ್ ಕೋಪಕ್ಕೆ ಕಾರಣವಾಗಿದೆ.

ಬಾಲಿವುಡ್​ ಸಿನಿಮಾಗಳಿಗೆ ಕುಸಿದ ಬೇಡಿಕೆ; ‘ಪೃಥ್ವಿರಾಜ್​’ ಚಿತ್ರ ನೇರವಾಗಿ ಒಟಿಟಿಗೆ?
ಅಕ್ಷಯ್ ಕುಮಾರ್
Follow us
| Updated By: shivaprasad.hs

Updated on:May 17, 2022 | 7:16 AM

ಬಾಲಿವುಡ್​ನಲ್ಲಿ (Bollywood Movies) ತಯಾರಾದ ಸಿನಿಮಾಗಳಿಗೆ ಅಲ್ಲಿಯೇ ಬೇಡಿಕೆ ಇಲ್ಲ ಎಂಬಂತಾಗಿದೆ. ಇತ್ತೀಚೆಗೆ ತೆರೆಗೆ ಬಂದ ಬಾಲಿವುಡ್​ನ ಬಹುತೇಕ ಸಿನಿಮಾಗಳು ಮಕಾಡೆ ಮಲಗುತ್ತಿವೆ. ಇದು ಬಾಲಿವುಡ್ ಮಂದಿಯ ಆತಂಕ ಹೆಚ್ಚಿಸಿದೆ. ‘ರನ್​ವೇ 34’ ಹಾಗೂ ‘ಹೀರೋಪಂತಿ 2’ ಚಿತ್ರಗಳು ಈಗಾಗಲೇ ಸೋಲು ಕಂಡಿವೆ. ಕಳೆದ ವಾರ ರಿಲೀಸ್ ಆದ ‘ಜಯೇಶ್​ಭಾಯ್​ ಜೋರ್ದಾರ್’ ಸಿನಿಮಾವನ್ನು (Jayeshbhai Jordaar) ಜನರು ಒಪ್ಪಿಕೊಳ್ಳಲೇ ಇಲ್ಲ. ಈ ಸಿನಿಮಾ ಮೊದಲ ವಾರಾಂತ್ಯಕ್ಕೆ ಗಳಿಸಿದ್ದು ಸುಮಾರು 12 ಕೋಟಿ ರೂಪಾಯಿ ಪಾತ್ರ. ಇದರಿಂದ ಬಾಲಿವುಡ್ ನಿರ್ಮಾಪಕರು ಅಕ್ಷರಶಃ ಚಿಂತೆಗೆ ಒಳಗಾಗಿದ್ದಾರೆ. ಮುಂಬರುವ ಚಿತ್ರಗಳನ್ನು ನೇರವಾಗಿ ಒಟಿಟಿಗೆ ರಿಲೀಸ್ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

‘ಜಯೇಶ್​ಭಾಯ್​ ಜೋರ್ದಾರ್’ ಚಿತ್ರವನ್ನು ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಇದೇ ಪ್ರೊಡಕ್ಷನ್​ ಹೌಸ್​ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್​’ ಸಿನಿಮಾ ಮೂಡಿಬರುತ್ತಿದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್​ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ‘ಜಯೇಶ್​ಭಾಯ್​ ಜೋರ್ದಾರ್’ ಚಿತ್ರದಿಂದ ಯಶ್ ರಾಜ್​ ಫಿಲ್ಮ್ಸ್​ ನಷ್ಟ ಅನುಭವಿಸುತ್ತಿವೆ. ಹೀಗಾಗಿ, ‘ಪೃಥ್ವಿರಾಜ್​’ ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ಮಂಡ್ಯದಲ್ಲಿ ಸನ್ನಿ ಬರ್ತ್​ಡೇ ಬಲುಜೋರು; ರಕ್ತದಾನ ಮಾಡಿ, ಕೇಕ್​ ಕತ್ತರಿಸಿ, ಬಿರಿಯಾನಿ ಹಂಚಿದ ಫ್ಯಾನ್ಸ್​
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಪೃಥ್ವಿರಾಜ್’ ಟ್ರೇಲರ್​ನಲ್ಲಿ ಮಿಂಚಿದ ಅಕ್ಷಯ್​ ಕುಮಾರ್; ಈ ಸಿನಿಮಾದಿಂದ ಚೇತರಿಸಿಕೊಳ್ಳಲಿದೆಯೇ ಬಾಲಿವುಡ್​?
Image
‘ನೀವು ಮಗಳನ್ನು ದತ್ತು ಪಡೆದಿದ್ದು ಪಬ್ಲಿಸಿಟಿ ಗಿಮಿಕ್​’; ಅಭಿಮಾನಿ ಮಾತಿಗೆ ಸನ್ನಿ ಲಿಯೋನ್​ ಉತ್ತರ ಏನು?

ವೀಕೆಂಡ್​ನಲ್ಲೂ ‘ಜಯೇಶ್​ಭಾಯ್​ ಜೋರ್ದಾರ್’ ಸಿನಿಮಾಗೆ ಪ್ರೇಕ್ಷಕರು ಬರುತ್ತಿಲ್ಲ. ಹೀಗಾಗಿ, ಪ್ರದರ್ಶಕರು ಈ ಸಿನಿಮಾ ಬದಲು ‘ಕೆಜಿಎಫ್ 2’ ಹಾಗೂ ‘ಡಾಕ್ಟರ್​ ಸ್ಟ್ರೇಂಜ್​’ ಸೀಕ್ವೆಲ್ ಪ್ರದರ್ಶನ ಮಾಡುತ್ತಿದ್ದಾರೆ. ಇದು ಯಶ್ ರಾಜ್ ಫಿಲ್ಮ್ಸ್ ಕೋಪಕ್ಕೆ ಕಾರಣವಾಗಿದೆ. ಗುರುವಾರದವರೆಗೆ ನಿಗದಿತ ಶೋ ಪ್ರದರ್ಶನ ಮಾಡಲು ಪ್ರದರ್ಶಕರ ಬಳಿ ಯಶ್ ರಾಜ್ ಫಿಲ್ಮ್ಸ್​ ಕೋರಿದೆ. ಒಂದೊಮ್ಮೆ ಹಾಗೆ ಆಗದೆ ಇದ್ದರೆ ‘ಪೃಥ್ವಿರಾಜ್​’ ಹಾಗೂ ರಣಬೀರ್ ಕಪೂರ್ ನಟನೆಯ ‘ಶಂಷೇರಾ’ ಚಿತ್ರಗಳನ್ನು ನೇರವಾಗಿ ಒಟಿಟಿಗೆ ರಿಲೀಸ್ ಮಾಡಲು ನಿರ್ಮಾಣ ಸಂಸ್ಥೆ ನಿರ್ಧರಿಸಿದೆ ಎಂದು ವರದಿ ಆಗಿದೆ.

ದೊಡ್ಡದೊಡ್ಡ ಚಿತ್ರಗಳು ಒಟಿಟಿಯಲ್ಲಿ ನೇರವಾಗಿ ರಿಲೀಸ್ ಆದರೆ ನಿರ್ಮಾಪಕರಿಗೆ ಹೆಚ್ಚು ಹಣ ಸಿಗುತ್ತದೆ. ಸದ್ಯದ ಟ್ರೆಂಡ್ ನೋಡಿದರೆ ಬಾಲಿವುಡ್​ ಚಿತ್ರಗಳು ದೊಡ್ಡ ಮಟ್ಟದಲ್ಲಿ ಕಮಾಯಿ ಮಾಡುವುದು ಅನುಮಾನವೇ. ಹೀಗಾಗಿ, ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಿ ದುಡ್ಡು ಮಾಡಿಕೊಳ್ಳುವ ಆಲೋಚನೆ ಚಿತ್ರತಂಡದ್ದು ಎನ್ನಲಾಗುತ್ತಿದೆ. ಈ ಬಗ್ಗೆ ಯಶ್ ರಾಜ್​ ಫಿಲ್ಮ್ಸ್​ ಅಂತಿಮವಾಗಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Tue, 17 May 22

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು