AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ
ಶಾರುಖ್-ಯಶ್
TV9 Web
| Edited By: |

Updated on:Apr 17, 2022 | 11:00 AM

Share

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ತೆರೆಗೆ ಬಂದ ನಂತರದಲ್ಲಿ ಬಾಲಿವುಡ್ ಕಥೆ ಮುಗಿದೇ ಹೋಯಿತು ಎನ್ನುವ ಮಾತು ಕೇಳಿಬರುತ್ತಿದೆ. ಇದು ಬಾಲಿವುಡ್ (Bollywood) ಸ್ಟಾರ್​ಗಳು ಹಾಗೂ ಅಲ್ಲಿನ ನಿರ್ದೇಶಕರಿಗೆ ಚಿಂತೆ ತಂದಿದೆ. ಹೇಗಾದರೂ ಮಾಡಿ ಮತ್ತೆ ಮೊದಲಿನ ಚಾರ್ಮ್​ ಮರಳಿ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ ಅಲ್ಲಿನ ನಿರ್ದೇಶಕರು. ಹೀಗಿರುವಾಗಲೇ ಶಾರುಖ್ ಖಾನ್ ಅವರು (Shah Rukh Khan) ಹೊಸ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಸೋಲನ್ನೇ ಕಾಣದ ನಿರ್ದೇಶಕ ರಾಜ್​ ಕುಮಾರ್ ಹಿರಾನಿ ಜತೆ ಅವರು ಕೆಲಸ ಮಾಡುತ್ತಿದ್ದಾರೆ.

‘ಪುಷ್ಪ’, ‘ಆರ್​ಆರ್​ಆರ್’, ‘ಕೆಜಿಎಫ್ 2’ ಚಿತ್ರದ ಕಲೆಕ್ಷನ್ ನೋಡಿ ಬಾಲಿವುಡ್ ಮಂದಿ ಮಂಕಾಗಿದ್ದಾರೆ. ಸಲ್ಮಾನ್ ಖಾನ್ ಮೊದಲಾದವರ ಚಿತ್ರಗಳು ಗೆಲುವಿನ ಮುಖವನ್ನು ಕಾಣುತ್ತಿಲ್ಲ. ದಕ್ಷಿಣ ಭಾರತದ ಸಿನಿಮಾಗಳನ್ನು ಬಾಲಿವುಡ್​ಗೆ ರಿಮೇಕ್ ಮಾಡಿ ಕೊಂಚ ಬಿಸ್ನೆಸ್ ಮಾಡಿಕೊಳ್ಳುತ್ತಿದ್ದಾರೆ. ‘ನಾನು ಪ್ರಾದೇಶಿಕ ಸಿನಿಮಾಗಳನ್ನು ಮಾಡುವುದಿಲ್ಲ’ ಎಂದು ಧಿಮಾಕಿನ ಮಾತುಗಳನ್ನು ಆಡಿದ್ದರು ಜಾನ್​ ಅಬ್ರಾಹಂ. ಅವರಿಗೆ ಜನರು ಸೋಲಿನ ರುಚಿ ತೋರಿಸಿದ್ದಾರೆ. ಹೀಗಿರುವಾಗಲೇ ಮತ್ತೆ ಬಾಲಿವುಡ್​ಅನ್ನು ಮೇಲಕ್ಕೆತ್ತಬೇಕು ಎಂದು ಅಲ್ಲಿನ ಸ್ಟಾರ್​ಗಳು ನಿರ್ಧರಿಸಿದಂತಿದೆ.

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ. ಇದಲ್ಲದೆ, ರಾಜ್​ಕುಮಾರ್ ಹಿರಾನಿ ಜತೆಗಿನ ಸಿನಿಮಾಗೆ ಅವರು ಚಾಲನೆ ನೀಡಿದ್ದಾರೆ.

ರಾಜ್​ಕುಮಾರ್ ಹಿರಾನಿ ನಿರ್ದೇಶನದ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಹಿಟ್ ಆಗಿವೆ. ಅವರ ಕೊನೆಯ ಸಿನಿಮಾ ‘ಸಂಜು’. ಸಂಜಯ್ ದತ್​ ಅವರ ಕುರಿತು ಸಿದ್ಧವಾದ ಈ ಬಯೋಪಿಕ್ ಹಿಟ್ ಆಗಿತ್ತು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಘೋಷಿಸಿಲ್ಲ. ಈಗ ಶಾರುಖ್ ಖಾನ್ ಜತೆ ಶೂಟಿಂಗ್ ಆರಂಭಿಸಿದ್ದಾರೆ.

ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಪಂಜಾಬ್​ನ ಗ್ರಾಮದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಶೂಟಿಂಗ್ ನಡೆಸಲಿದ್ದಾರೆ. ನಂತರ ಚಿತ್ರತಂಡ ಲಂಡನ್​ಗೆ ಪ್ರಯಾಣ ಬೆಳೆಸಲಿದೆ. ಈ ಸಿನಿಮಾ ಯಾವ ಶೈಲಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಮೂಡಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಅಬ್ಬರದಿಂದ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಬೀಸ್ಟ್​’ಗೆ ಸಿಗಲಿಲ್ಲ ಸ್ಕ್ರೀನ್​; ನಿರ್ಮಾಪಕನ ಅಸಮಾಧಾನ?

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

Published On - 10:52 am, Sun, 17 April 22

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ