AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ
ಶಾರುಖ್-ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 17, 2022 | 11:00 AM

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ತೆರೆಗೆ ಬಂದ ನಂತರದಲ್ಲಿ ಬಾಲಿವುಡ್ ಕಥೆ ಮುಗಿದೇ ಹೋಯಿತು ಎನ್ನುವ ಮಾತು ಕೇಳಿಬರುತ್ತಿದೆ. ಇದು ಬಾಲಿವುಡ್ (Bollywood) ಸ್ಟಾರ್​ಗಳು ಹಾಗೂ ಅಲ್ಲಿನ ನಿರ್ದೇಶಕರಿಗೆ ಚಿಂತೆ ತಂದಿದೆ. ಹೇಗಾದರೂ ಮಾಡಿ ಮತ್ತೆ ಮೊದಲಿನ ಚಾರ್ಮ್​ ಮರಳಿ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ ಅಲ್ಲಿನ ನಿರ್ದೇಶಕರು. ಹೀಗಿರುವಾಗಲೇ ಶಾರುಖ್ ಖಾನ್ ಅವರು (Shah Rukh Khan) ಹೊಸ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಸೋಲನ್ನೇ ಕಾಣದ ನಿರ್ದೇಶಕ ರಾಜ್​ ಕುಮಾರ್ ಹಿರಾನಿ ಜತೆ ಅವರು ಕೆಲಸ ಮಾಡುತ್ತಿದ್ದಾರೆ.

‘ಪುಷ್ಪ’, ‘ಆರ್​ಆರ್​ಆರ್’, ‘ಕೆಜಿಎಫ್ 2’ ಚಿತ್ರದ ಕಲೆಕ್ಷನ್ ನೋಡಿ ಬಾಲಿವುಡ್ ಮಂದಿ ಮಂಕಾಗಿದ್ದಾರೆ. ಸಲ್ಮಾನ್ ಖಾನ್ ಮೊದಲಾದವರ ಚಿತ್ರಗಳು ಗೆಲುವಿನ ಮುಖವನ್ನು ಕಾಣುತ್ತಿಲ್ಲ. ದಕ್ಷಿಣ ಭಾರತದ ಸಿನಿಮಾಗಳನ್ನು ಬಾಲಿವುಡ್​ಗೆ ರಿಮೇಕ್ ಮಾಡಿ ಕೊಂಚ ಬಿಸ್ನೆಸ್ ಮಾಡಿಕೊಳ್ಳುತ್ತಿದ್ದಾರೆ. ‘ನಾನು ಪ್ರಾದೇಶಿಕ ಸಿನಿಮಾಗಳನ್ನು ಮಾಡುವುದಿಲ್ಲ’ ಎಂದು ಧಿಮಾಕಿನ ಮಾತುಗಳನ್ನು ಆಡಿದ್ದರು ಜಾನ್​ ಅಬ್ರಾಹಂ. ಅವರಿಗೆ ಜನರು ಸೋಲಿನ ರುಚಿ ತೋರಿಸಿದ್ದಾರೆ. ಹೀಗಿರುವಾಗಲೇ ಮತ್ತೆ ಬಾಲಿವುಡ್​ಅನ್ನು ಮೇಲಕ್ಕೆತ್ತಬೇಕು ಎಂದು ಅಲ್ಲಿನ ಸ್ಟಾರ್​ಗಳು ನಿರ್ಧರಿಸಿದಂತಿದೆ.

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ. ಇದಲ್ಲದೆ, ರಾಜ್​ಕುಮಾರ್ ಹಿರಾನಿ ಜತೆಗಿನ ಸಿನಿಮಾಗೆ ಅವರು ಚಾಲನೆ ನೀಡಿದ್ದಾರೆ.

ರಾಜ್​ಕುಮಾರ್ ಹಿರಾನಿ ನಿರ್ದೇಶನದ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಹಿಟ್ ಆಗಿವೆ. ಅವರ ಕೊನೆಯ ಸಿನಿಮಾ ‘ಸಂಜು’. ಸಂಜಯ್ ದತ್​ ಅವರ ಕುರಿತು ಸಿದ್ಧವಾದ ಈ ಬಯೋಪಿಕ್ ಹಿಟ್ ಆಗಿತ್ತು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಘೋಷಿಸಿಲ್ಲ. ಈಗ ಶಾರುಖ್ ಖಾನ್ ಜತೆ ಶೂಟಿಂಗ್ ಆರಂಭಿಸಿದ್ದಾರೆ.

ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಪಂಜಾಬ್​ನ ಗ್ರಾಮದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಶೂಟಿಂಗ್ ನಡೆಸಲಿದ್ದಾರೆ. ನಂತರ ಚಿತ್ರತಂಡ ಲಂಡನ್​ಗೆ ಪ್ರಯಾಣ ಬೆಳೆಸಲಿದೆ. ಈ ಸಿನಿಮಾ ಯಾವ ಶೈಲಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಮೂಡಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಅಬ್ಬರದಿಂದ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಬೀಸ್ಟ್​’ಗೆ ಸಿಗಲಿಲ್ಲ ಸ್ಕ್ರೀನ್​; ನಿರ್ಮಾಪಕನ ಅಸಮಾಧಾನ?

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

Published On - 10:52 am, Sun, 17 April 22

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ