AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ
ಶಾರುಖ್-ಯಶ್
TV9 Web
| Edited By: |

Updated on:Apr 17, 2022 | 11:00 AM

Share

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ತೆರೆಗೆ ಬಂದ ನಂತರದಲ್ಲಿ ಬಾಲಿವುಡ್ ಕಥೆ ಮುಗಿದೇ ಹೋಯಿತು ಎನ್ನುವ ಮಾತು ಕೇಳಿಬರುತ್ತಿದೆ. ಇದು ಬಾಲಿವುಡ್ (Bollywood) ಸ್ಟಾರ್​ಗಳು ಹಾಗೂ ಅಲ್ಲಿನ ನಿರ್ದೇಶಕರಿಗೆ ಚಿಂತೆ ತಂದಿದೆ. ಹೇಗಾದರೂ ಮಾಡಿ ಮತ್ತೆ ಮೊದಲಿನ ಚಾರ್ಮ್​ ಮರಳಿ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ ಅಲ್ಲಿನ ನಿರ್ದೇಶಕರು. ಹೀಗಿರುವಾಗಲೇ ಶಾರುಖ್ ಖಾನ್ ಅವರು (Shah Rukh Khan) ಹೊಸ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಸೋಲನ್ನೇ ಕಾಣದ ನಿರ್ದೇಶಕ ರಾಜ್​ ಕುಮಾರ್ ಹಿರಾನಿ ಜತೆ ಅವರು ಕೆಲಸ ಮಾಡುತ್ತಿದ್ದಾರೆ.

‘ಪುಷ್ಪ’, ‘ಆರ್​ಆರ್​ಆರ್’, ‘ಕೆಜಿಎಫ್ 2’ ಚಿತ್ರದ ಕಲೆಕ್ಷನ್ ನೋಡಿ ಬಾಲಿವುಡ್ ಮಂದಿ ಮಂಕಾಗಿದ್ದಾರೆ. ಸಲ್ಮಾನ್ ಖಾನ್ ಮೊದಲಾದವರ ಚಿತ್ರಗಳು ಗೆಲುವಿನ ಮುಖವನ್ನು ಕಾಣುತ್ತಿಲ್ಲ. ದಕ್ಷಿಣ ಭಾರತದ ಸಿನಿಮಾಗಳನ್ನು ಬಾಲಿವುಡ್​ಗೆ ರಿಮೇಕ್ ಮಾಡಿ ಕೊಂಚ ಬಿಸ್ನೆಸ್ ಮಾಡಿಕೊಳ್ಳುತ್ತಿದ್ದಾರೆ. ‘ನಾನು ಪ್ರಾದೇಶಿಕ ಸಿನಿಮಾಗಳನ್ನು ಮಾಡುವುದಿಲ್ಲ’ ಎಂದು ಧಿಮಾಕಿನ ಮಾತುಗಳನ್ನು ಆಡಿದ್ದರು ಜಾನ್​ ಅಬ್ರಾಹಂ. ಅವರಿಗೆ ಜನರು ಸೋಲಿನ ರುಚಿ ತೋರಿಸಿದ್ದಾರೆ. ಹೀಗಿರುವಾಗಲೇ ಮತ್ತೆ ಬಾಲಿವುಡ್​ಅನ್ನು ಮೇಲಕ್ಕೆತ್ತಬೇಕು ಎಂದು ಅಲ್ಲಿನ ಸ್ಟಾರ್​ಗಳು ನಿರ್ಧರಿಸಿದಂತಿದೆ.

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ. ಇದಲ್ಲದೆ, ರಾಜ್​ಕುಮಾರ್ ಹಿರಾನಿ ಜತೆಗಿನ ಸಿನಿಮಾಗೆ ಅವರು ಚಾಲನೆ ನೀಡಿದ್ದಾರೆ.

ರಾಜ್​ಕುಮಾರ್ ಹಿರಾನಿ ನಿರ್ದೇಶನದ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಹಿಟ್ ಆಗಿವೆ. ಅವರ ಕೊನೆಯ ಸಿನಿಮಾ ‘ಸಂಜು’. ಸಂಜಯ್ ದತ್​ ಅವರ ಕುರಿತು ಸಿದ್ಧವಾದ ಈ ಬಯೋಪಿಕ್ ಹಿಟ್ ಆಗಿತ್ತು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಘೋಷಿಸಿಲ್ಲ. ಈಗ ಶಾರುಖ್ ಖಾನ್ ಜತೆ ಶೂಟಿಂಗ್ ಆರಂಭಿಸಿದ್ದಾರೆ.

ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಪಂಜಾಬ್​ನ ಗ್ರಾಮದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಶೂಟಿಂಗ್ ನಡೆಸಲಿದ್ದಾರೆ. ನಂತರ ಚಿತ್ರತಂಡ ಲಂಡನ್​ಗೆ ಪ್ರಯಾಣ ಬೆಳೆಸಲಿದೆ. ಈ ಸಿನಿಮಾ ಯಾವ ಶೈಲಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಮೂಡಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಅಬ್ಬರದಿಂದ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಬೀಸ್ಟ್​’ಗೆ ಸಿಗಲಿಲ್ಲ ಸ್ಕ್ರೀನ್​; ನಿರ್ಮಾಪಕನ ಅಸಮಾಧಾನ?

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

Published On - 10:52 am, Sun, 17 April 22

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ