AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಪ್ರಿಯಾಂಕಾ ಚೋಪ್ರಾ ತಿರಸ್ಕರಿಸಿದ ಪಾತ್ರ ಮಾಡಲು ಅನುಷ್ಕಾ ಶರ್ಮಾ ನಕಾರ; ಫರ್ಹಾನ್​ ಅಖ್ತರ್​ಗೆ ಹೆಚ್ಚಿತು ಚಿಂತೆ

Jee Le Zara: ಅನುಷ್ಕಾ ಶರ್ಮಾ ಅವರು ಸಿನಿಮಾಗಳ ಆಯ್ಕೆಯಲ್ಲಿ ಅವಸರ ತೋರುತ್ತಿಲ್ಲ. ‘ಜೀ ಲೇ ಜರಾ’ ಸಿನಿಮಾದಲ್ಲಿ ನಟಿಸಲು ಅವರು ಒಪ್ಪಿಕೊಂಡಿಲ್ಲ.

Anushka Sharma: ಪ್ರಿಯಾಂಕಾ ಚೋಪ್ರಾ ತಿರಸ್ಕರಿಸಿದ ಪಾತ್ರ ಮಾಡಲು ಅನುಷ್ಕಾ ಶರ್ಮಾ ನಕಾರ; ಫರ್ಹಾನ್​ ಅಖ್ತರ್​ಗೆ ಹೆಚ್ಚಿತು ಚಿಂತೆ
ಪ್ರಿಯಾಂಕಾ ಚೋಪ್ರಾ, ಅನುಷ್ಕಾ ಶರ್ಮಾ
ಮದನ್​ ಕುಮಾರ್​
|

Updated on: Jul 11, 2023 | 12:57 PM

Share

ನಟ ಫರ್ಹಾನ್​ ಅಖ್ತರ್​ (Farhan Akhtar) ಅವರು ನಿರ್ದೇಶನದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಅವರ ನಿರ್ದೇಶನದಲ್ಲಿ ತಯಾರಾಗಬೇಕಿರುವ ‘ಜೀ ಲೇ ಜರಾ’ ಸಿನಿಮಾ (Jee Le Zara) ಸೆಟ್ಟೇರಲು ಹಲವು ವಿಘ್ನಗಳು ಎದುರಾಗುತ್ತಿವೆ. ಮಹಿಳಾ ಪ್ರಧಾನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ನಟಿಸಲು ಮೊದಲು ಆಯ್ಕೆ ಆಗಿದ್ದು ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​. ಆದರೆ ಈಗ ಪಾತ್ರವರ್ಗದಲ್ಲಿ ಒಂದಷ್ಟು ಬದಲಾವಣೆ ಆಗುತ್ತಿದೆ. ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ‘ಜೀ ಲೇ ಜರಾ’ ಚಿತ್ರತಂಡದಿಂದ ಹೊರನಡೆದಿದ್ದಾರೆ. ಅವರು ಬಿಟ್ಟುಹೋದ ಪಾತ್ರವನ್ನು ಅನುಷ್ಕಾ ಶರ್ಮಾಗೆ ನೀಡಬೇಕು ಎಂದುಕೊಳ್ಳಲಾಗಿತ್ತು. ಆದರೆ ಆ ಪಾತ್ರ ಮಾಡಲು ಅನುಷ್ಕಾ ಶರ್ಮಾ ಕೂಡ ಒಪ್ಪಿಕೊಂಡಿಲ್ಲ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಹಲವು ವರ್ಷಗಳಿಂದ ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಕೊನೇ ಪಕ್ಷ ಅವರು ಈ ಮೊದಲೇ ಒಪ್ಪಿಕೊಂಡಿದ್ದ ‘ಜೀ ಲೇ ಜರಾ’ ಸಿನಿಮಾದಲ್ಲಾದರೂ ನಟಿಸಬಹುದು ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಸಿಟಾಡೆಲ್​ 2’ ಶೂಟಿಂಗ್​ ಸಲುವಾಗಿ ಅವರು ‘ಜೀ ಲೇ ಜರಾ’ ಸಿನಿಮಾದಿಂದ ಹೊರನಡೆದಿದ್ದಾರೆ. ಡೇಟ್ಸ್​ ಹೊಂದಿಸಲು ಸಾಧ್ಯವಿಲ್ಲ ಎಂದು ಅವರು ಕಾರಣ ನೀಡಿದ್ದಾರೆ. ನಂತರ ಚಿತ್ರತಂಡದವರು ಅನುಷ್ಕಾ ಶರ್ಮಾಗೆ ಆಫರ್​ ನೀಡಿದ್ದಾರೆ. ಅನುಷ್ಕಾ ಶರ್ಮಾ ಕೂಡ ಆ ಪಾತ್ರವನ್ನು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: Anushka Sharma: ಮೊದಲಿನಷ್ಟು ಸಿನಿಮಾ ಮಾಡಲ್ಲ ಅನುಷ್ಕಾ ಶರ್ಮಾ; ಈ ತ್ಯಾಗಕ್ಕೆ ಕಾರಣ ತಿಳಿಸಿದ ನಟಿ

ಅನುಷ್ಕಾ ಶರ್ಮಾ ಅವರು ಸಿನಿಮಾಗಳ ಆಯ್ಕೆಯಲ್ಲಿ ಅವಸರ ತೋರುತ್ತಿಲ್ಲ. ವೃತ್ತಿಜೀವನ ಮತ್ತು ಕುಟುಂಬಕ್ಕೆ ಅವರು ಸಮಯ ಹೊಂದಿಸುತ್ತಿದ್ದಾರೆ. ಹೆಣ್ಣು ಮಗುವಿನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲವು ಜಾಹೀರಾತುಗಳಲ್ಲೂ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣದಿಂದ ‘ಜೀ ಲೇ ಜರಾ’ ಸಿನಿಮಾಗೆ ಕಾಲ್​ಶೀಟ್​ ನೀಡಲು ಅವರಿಗೆ ಸಾಧ್ಯವಾಗಿಲ್ಲ. ಅದನ್ನು ಹೊರತುಪಡಿಸಿದರೆ ಈ ಆಫರ್​ ತಿರಸ್ಕರಿಸಲು ಬೇರೆ ಯಾವುದೇ ಕಾರಣ ಇಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮೊದಲ ಚಿತ್ರದ ನಿರ್ದೇಶಕನ ಬಗ್ಗೆಯೂ ಅನುಷ್ಕಾ ಶರ್ಮಾಗೆ ಗೊತ್ತಿರಲಿಲ್ಲ; ಇದು ನಟಿಯ ಸಿನಿ ಜರ್ನಿ

ಪ್ರಿಯಾಂಕಾ ಚೋಪ್ರಾ ಅವರು ‘ಜೀ ಲೇ ಜರಾ’ ಸಿನಿಮಾದಿಂದ ಹೊರನಡೆದಿದ್ದಕಾಗಿ ನಿರ್ದೇಶಕ ಫರ್ಹಾನ್​ ಅಖ್ತರ್​ ಅವರಿಗೆ ತಲೆಬಿಸಿ ಶುರುವಾಗಿದೆ. ಪ್ರಿಯಾಂಕಾ ಚೋಪ್ರಾ ಬದಲಿಗೆ ಬೇರೆ ಯಾವ ನಟಿಯನ್ನು ಆಯ್ಕೆ ಮಾಡಬೇಕು ಎಂಬುದು ದೊಡ್ಡ ಪ್ರಶ್ನೆ ಆಗಿದೆ. ಇದೇ ರೀತಿ ವಿಳಂಬವಾದರೆ ಆಲಿಯಾ ಭಟ್​ ಮತ್ತು ಕತ್ರಿನಾ ಕೈಫ್​ ಕೂಡ ಈ ಸಿನಿಮಾದಿಂದ ಹೊರನಡೆಯಬಹುದು. ಆಗ ಫರ್ಹಾನ್​ ಅಖ್ತರ್​ ಅವರು ಸಂಪೂರ್ಣವಾಗಿ ಈ ಸಿನಿಮಾವನ್ನು ಕೈ ಬಿಡಬೇಕಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?