AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಗೆದ್ದ ಬಳಿಕ ಅನುಷ್ಕಾ ಶರ್ಮಾ ಸೆಲೆಬ್ರೇಷನ್ ಹೇಗಿತ್ತು ನೋಡಿ; ಬೇರೆಯದೇ ಲೆವೆಲ್

ಅನುಷ್ಕಾ ಶರ್ಮಾ ಅವರು ತಮ್ಮ ಚೇರ್ ಮೇಲೆ ಕುಳಿತಿದ್ದರು. ಕೊನೆಯ ವಿಕೆಟ್ ಬೀಳುತ್ತಿದ್ದಂತೆ ಅವರು ಎದ್ದು ಕೈ ಮುಗಿದಿದ್ದಾರೆ. ಈ ವಿಡಿಯೋನ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಅನುಷ್ಕಾ ಶರ್ಮಾ ಅವರ ಸೆಲೆಬ್ರೇಷನ್ ಬೇರೆಯದೇ ಲೆವೆಲ್’ ಎಂದು ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

ಆರ್​ಸಿಬಿ ಗೆದ್ದ ಬಳಿಕ ಅನುಷ್ಕಾ ಶರ್ಮಾ ಸೆಲೆಬ್ರೇಷನ್ ಹೇಗಿತ್ತು ನೋಡಿ; ಬೇರೆಯದೇ ಲೆವೆಲ್
ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: May 13, 2024 | 7:29 AM

Share

ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದಿದೆ. ಫಾಪ್ ಡುಪ್ಲೆಸಿಸ್ ತಂಡ 47 ರನ್​ಗಳ ಗೆಲುವು ಸಾಧಿಸೋ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನಕ್ಕೆ ಜಂಪ್ ಆಗಿದೆ. ಇದು ಆರ್​ಸಿಬಿ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ಆರ್​ಸಿಬಿ ಅಭಿಮಾನಿ. ಇದಕ್ಕೆ ಕಾರಣ ಅವರ ಪತಿ ವಿರಾಟ್ ಕೊಹ್ಲಿ ಈ ತಂಡದಲ್ಲಿ ಆಟ ಆಡುತ್ತಿದ್ದಾರೆ. ಆರ್​ಸಿಬಿ ಗೆದ್ದ ಬಳಿಕ ಅವರು ಕೂಡ ಸಂಭ್ರಮಿಸಿದ್ದಾರೆ.

ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ಉತ್ತಮ ಆಟ ಪ್ರದರ್ಶನ ನೀಡಿದ ಆರ್​ಸಿಬಿ ಕೊನೆಯಲ್ಲಿ ಡಲ್ ಹೊಡೆಯಿತು. ಆರ್​ಸಿಬಿ ಪರ ವಿಲ್ ಜಾಕ್ಸ್ 29 ಬಾಲ್​ಗಳಿಗೆ 41, ರಜತ್ ಪಟಿದಾರ್ 32 ಬಾಲ್​ಗೆ 52 ಹಾಗೂ ಗ್ರೀನ್ 24 ಬಾಲ್​ಗೆ 32 ರನ್ ಕಲೆ ಹಾಕಿ ತಂಡಕ್ಕೆ ಆಸರೆ ಆದರು. ಅಂತಿಮವಾಗಿ, ಆರ್​ಸಿಬಿ 9 ವಿಕೆಟ್ ನಷ್ಟಕ್ಕೆ 187 ರನ್​ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನು ಹತ್ತಿದ ಡೆಲ್ಲಿ ಆರಂಭದಲ್ಲೇ ಮುಗ್ಗರಿಸಿತು. ಅಕ್ಸರ್ ಪಟೇಲ್ ಅವರು ಮಾತ್ರ (57 ರನ್) ಡೆಲ್ಲಿ ಪರ ಆಸರೆ ಆದರು. ಯಶ್ ದಯಾಳ್ ಅವರು 20ನೇ ಓವರ್​ನಲ್ಲಿ ಕುಲ್ದೀಪ್ ಯಾದವ್​ನ ಬೋಲ್ಡ್ ಮಾಡಿದರು. ಈ ವೇಳೆ ಸಂಭ್ರಮ ಮುಗಿಲುಮುಟ್ಟಿತ್ತು.

ಅನುಷ್ಕಾ ಶರ್ಮಾ ಅವರು ತಮ್ಮ ಚೇರ್ ಮೇಲೆ ಕುಳಿತಿದ್ದರು. ಕೊನೆಯ ವಿಕೆಟ್ ಬೀಳುತ್ತಿದ್ದಂತೆ ಅವರು ಎದ್ದು ಕೈ ಮುಗಿದಿದ್ದಾರೆ. ಈ ವಿಡಿಯೋನ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಅನುಷ್ಕಾ ಶರ್ಮಾ ಅವರ ಸೆಲೆಬ್ರೇಷನ್ ಬೇರೆಯದೇ ಲೆವೆಲ್’ ಎಂದು ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ. ಆರ್​ಸಿಬಿ ಸತತ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ ಅನ್ನೋದು ವಿಶೇಷ. ಸದ್ಯ 12 ಅಂಕ ಗಳಿಸಿ ಆರ್​ಸಿಬಿ ಐದನ್ನೇ ಸ್ಥಾನಕ್ಕೆ ಬಂದಿದೆ. ಪ್ಲೇಆಫ್​ಗೆ ಏರಬೇಕು ಎನ್ನುವ ಕನಸು ಇನ್ನೂ ಜೀವಂತವಾಗಿದೆ.

ಇದನ್ನೂ ಓದಿ: ಆರ್​ಸಿಬಿ ಆಟಗಾರರ ಜೊತೆ ಅನುಷ್ಕಾ ಶರ್ಮಾ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್

ಅನುಷ್ಕಾ ಶರ್ಮಾ ಅವರು ಇತ್ತೀಚೆಗೆ ಸಿನಿಮಾಗಳಿಂದ ದೂರವಾಗಿದ್ದಾರೆ. ಇತ್ತೀಚೆಗೆ ಅವರು ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿನ ಆರೈಕೆಯ ಕಾರಣಕ್ಕೆ ಅವರು ಐಪಿಲ್ ಪಂದ್ಯ ವೀಕ್ಷಿಸೋಕೆ ಬರುತ್ತಿರಲಿಲ್ಲ. ಇತ್ತೀಚೆಗೆ ಅವರು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ