‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ
ಆರ್​ಆರ್​ಆರ್​ ಸಿನಿಮಾ
Follow us
|

Updated on: Jul 06, 2023 | 6:30 AM

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ (RRR Movie) ಸೂಪರ್ ಹಿಟ್ ಆಗಿತ್ತು. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಹೆಚ್ಚಿತು. ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಈ ಚಿತ್ರದಲ್ಲಿ ಮಿಂಚಿದರು. ಈ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತ್ತು. ಜಪಾನ್ ಒಂದರಲ್ಲೇ ನೂರು ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದ್ದು ‘ಆರ್​ಆರ್​ಆರ್​’ ಚಿತ್ರದ ಹೆಚ್ಚುಗಾರಿಕೆ. ಈಗ ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಕೂಡ ಜಪಾನ್​ನಲ್ಲಿ ರಿಲೀಸ್ ಆಗಲು ರೆಡಿ ಆಗಿದೆ.

‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಮಟ್ಟದ ಗೆಲುವು ಕಂಡಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರು ದೊಡ್ಡ ಮಟ್ಟದ ಗೆಲುವು ಕಂಡರು. ಶಾರುಖ್ ಖಾನ್ ಈ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರ ಜಪಾನ್ ಭಾಷೆಗೆ ಡಬ್ ಆಗುತ್ತಿದ್ದು, ಅಲ್ಲಿಯೂ ಬಿಸ್ನೆಸ್ ಮಾಡಲು ರೆಡಿ ಆಗಿದೆ.

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು. ಆ್ಯಕ್ಷನ್ ಸಿನಿಮಾಗಳನ್ನು ಅಲ್ಲಿನ ಜನರು ಹೆಚ್ಚು ಇಷ್ಪಡುತ್ತಾರೆ. ‘ಜವಾನ್’ ಚಿತ್ರದಲ್ಲೂ ಭರ್ಜರಿ ಆ್ಯಕ್ಷನ್ ಇರುವುದರಿಂದ ಈ ಸಿನಿಮಾ ಅಲ್ಲಿನವರಿಗೆ ಇಷ್ಟ ಆಗಬಹುದು. ಈ ಮೂಲಕ ಸಿನಿಮಾದ ಕಲೆಕ್ಷನ್ ಹೆಚ್ಚಬಹುದು.

ಇದನ್ನೂ ಓದಿ: ತಮ್ಮದೇ ನಿರ್ಮಾಣ ಸಂಸ್ಥೆಗೆ ದೊಡ್ಡ ಲಾಭ ಮಾಡಿಕೊಟ್ಟ ಶಾರುಖ್ ಖಾನ್; ‘ಡಂಕಿ’, ‘ಜವಾನ್​’ನಿಂದ ಬಂದ ಹಣ ಎಷ್ಟು?

ಯಶ್ ರಾಜ್ ಫಿಲ್ಮ್ಸ್​ ಬ್ಯಾನರ್ ಅಡಿಯಲ್ಲಿ ‘ಪಠಾಣ್’ ಸಿನಿಮಾ ಮೂಡಿ ಬಂದಿದೆ. ಈ ನಿರ್ಮಾಣ ಸಂಸ್ಥೆ ಈಗಾಗಲೇ ಸ್ಪೈ ಯೂನಿವರ್ಸ್​ ಸೃಷ್ಟಿ ಮಾಡಿದೆ. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ವಾರ್’, ‘ಪಠಾಣ್’ ಸಿನಿಮಾಗಳು ಸ್ಪೈ ಯೂನಿವರ್ಸ್ ಅಡಿಯಲ್ಲಿ ಸಿದ್ಧಗೊಂಡಿದೆ. ಮುಂದೆಯೂ ಇದೇ ಯೂನಿವರ್ಸ್ ಅಡಿಯಲ್ಲಿ ಸಿನಿಮಾಗಳು ಮೂಡಿಬರಲಿವೆ. ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎನ್ನುವ ಮಾತೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ