AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ
ಆರ್​ಆರ್​ಆರ್​ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 06, 2023 | 6:30 AM

Share

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ (RRR Movie) ಸೂಪರ್ ಹಿಟ್ ಆಗಿತ್ತು. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಹೆಚ್ಚಿತು. ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಈ ಚಿತ್ರದಲ್ಲಿ ಮಿಂಚಿದರು. ಈ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತ್ತು. ಜಪಾನ್ ಒಂದರಲ್ಲೇ ನೂರು ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದ್ದು ‘ಆರ್​ಆರ್​ಆರ್​’ ಚಿತ್ರದ ಹೆಚ್ಚುಗಾರಿಕೆ. ಈಗ ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಕೂಡ ಜಪಾನ್​ನಲ್ಲಿ ರಿಲೀಸ್ ಆಗಲು ರೆಡಿ ಆಗಿದೆ.

‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಮಟ್ಟದ ಗೆಲುವು ಕಂಡಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರು ದೊಡ್ಡ ಮಟ್ಟದ ಗೆಲುವು ಕಂಡರು. ಶಾರುಖ್ ಖಾನ್ ಈ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರ ಜಪಾನ್ ಭಾಷೆಗೆ ಡಬ್ ಆಗುತ್ತಿದ್ದು, ಅಲ್ಲಿಯೂ ಬಿಸ್ನೆಸ್ ಮಾಡಲು ರೆಡಿ ಆಗಿದೆ.

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು. ಆ್ಯಕ್ಷನ್ ಸಿನಿಮಾಗಳನ್ನು ಅಲ್ಲಿನ ಜನರು ಹೆಚ್ಚು ಇಷ್ಪಡುತ್ತಾರೆ. ‘ಜವಾನ್’ ಚಿತ್ರದಲ್ಲೂ ಭರ್ಜರಿ ಆ್ಯಕ್ಷನ್ ಇರುವುದರಿಂದ ಈ ಸಿನಿಮಾ ಅಲ್ಲಿನವರಿಗೆ ಇಷ್ಟ ಆಗಬಹುದು. ಈ ಮೂಲಕ ಸಿನಿಮಾದ ಕಲೆಕ್ಷನ್ ಹೆಚ್ಚಬಹುದು.

ಇದನ್ನೂ ಓದಿ: ತಮ್ಮದೇ ನಿರ್ಮಾಣ ಸಂಸ್ಥೆಗೆ ದೊಡ್ಡ ಲಾಭ ಮಾಡಿಕೊಟ್ಟ ಶಾರುಖ್ ಖಾನ್; ‘ಡಂಕಿ’, ‘ಜವಾನ್​’ನಿಂದ ಬಂದ ಹಣ ಎಷ್ಟು?

ಯಶ್ ರಾಜ್ ಫಿಲ್ಮ್ಸ್​ ಬ್ಯಾನರ್ ಅಡಿಯಲ್ಲಿ ‘ಪಠಾಣ್’ ಸಿನಿಮಾ ಮೂಡಿ ಬಂದಿದೆ. ಈ ನಿರ್ಮಾಣ ಸಂಸ್ಥೆ ಈಗಾಗಲೇ ಸ್ಪೈ ಯೂನಿವರ್ಸ್​ ಸೃಷ್ಟಿ ಮಾಡಿದೆ. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ವಾರ್’, ‘ಪಠಾಣ್’ ಸಿನಿಮಾಗಳು ಸ್ಪೈ ಯೂನಿವರ್ಸ್ ಅಡಿಯಲ್ಲಿ ಸಿದ್ಧಗೊಂಡಿದೆ. ಮುಂದೆಯೂ ಇದೇ ಯೂನಿವರ್ಸ್ ಅಡಿಯಲ್ಲಿ ಸಿನಿಮಾಗಳು ಮೂಡಿಬರಲಿವೆ. ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎನ್ನುವ ಮಾತೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ