AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ
ಆರ್​ಆರ್​ಆರ್​ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 06, 2023 | 6:30 AM

Share

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ (RRR Movie) ಸೂಪರ್ ಹಿಟ್ ಆಗಿತ್ತು. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಹೆಚ್ಚಿತು. ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಈ ಚಿತ್ರದಲ್ಲಿ ಮಿಂಚಿದರು. ಈ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತ್ತು. ಜಪಾನ್ ಒಂದರಲ್ಲೇ ನೂರು ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದ್ದು ‘ಆರ್​ಆರ್​ಆರ್​’ ಚಿತ್ರದ ಹೆಚ್ಚುಗಾರಿಕೆ. ಈಗ ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಕೂಡ ಜಪಾನ್​ನಲ್ಲಿ ರಿಲೀಸ್ ಆಗಲು ರೆಡಿ ಆಗಿದೆ.

‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಮಟ್ಟದ ಗೆಲುವು ಕಂಡಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರು ದೊಡ್ಡ ಮಟ್ಟದ ಗೆಲುವು ಕಂಡರು. ಶಾರುಖ್ ಖಾನ್ ಈ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರ ಜಪಾನ್ ಭಾಷೆಗೆ ಡಬ್ ಆಗುತ್ತಿದ್ದು, ಅಲ್ಲಿಯೂ ಬಿಸ್ನೆಸ್ ಮಾಡಲು ರೆಡಿ ಆಗಿದೆ.

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು. ಆ್ಯಕ್ಷನ್ ಸಿನಿಮಾಗಳನ್ನು ಅಲ್ಲಿನ ಜನರು ಹೆಚ್ಚು ಇಷ್ಪಡುತ್ತಾರೆ. ‘ಜವಾನ್’ ಚಿತ್ರದಲ್ಲೂ ಭರ್ಜರಿ ಆ್ಯಕ್ಷನ್ ಇರುವುದರಿಂದ ಈ ಸಿನಿಮಾ ಅಲ್ಲಿನವರಿಗೆ ಇಷ್ಟ ಆಗಬಹುದು. ಈ ಮೂಲಕ ಸಿನಿಮಾದ ಕಲೆಕ್ಷನ್ ಹೆಚ್ಚಬಹುದು.

ಇದನ್ನೂ ಓದಿ: ತಮ್ಮದೇ ನಿರ್ಮಾಣ ಸಂಸ್ಥೆಗೆ ದೊಡ್ಡ ಲಾಭ ಮಾಡಿಕೊಟ್ಟ ಶಾರುಖ್ ಖಾನ್; ‘ಡಂಕಿ’, ‘ಜವಾನ್​’ನಿಂದ ಬಂದ ಹಣ ಎಷ್ಟು?

ಯಶ್ ರಾಜ್ ಫಿಲ್ಮ್ಸ್​ ಬ್ಯಾನರ್ ಅಡಿಯಲ್ಲಿ ‘ಪಠಾಣ್’ ಸಿನಿಮಾ ಮೂಡಿ ಬಂದಿದೆ. ಈ ನಿರ್ಮಾಣ ಸಂಸ್ಥೆ ಈಗಾಗಲೇ ಸ್ಪೈ ಯೂನಿವರ್ಸ್​ ಸೃಷ್ಟಿ ಮಾಡಿದೆ. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ವಾರ್’, ‘ಪಠಾಣ್’ ಸಿನಿಮಾಗಳು ಸ್ಪೈ ಯೂನಿವರ್ಸ್ ಅಡಿಯಲ್ಲಿ ಸಿದ್ಧಗೊಂಡಿದೆ. ಮುಂದೆಯೂ ಇದೇ ಯೂನಿವರ್ಸ್ ಅಡಿಯಲ್ಲಿ ಸಿನಿಮಾಗಳು ಮೂಡಿಬರಲಿವೆ. ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎನ್ನುವ ಮಾತೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ