AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ

Swara Bhaskar | Death Threat: ಸ್ವರಾ ಭಾಸ್ಕರ್​ ಅವರು ಮೊದಲಿನಿಂದಲೂ ಅನೇಕ ವಿವಾದಗಳನ್ನು ಮಾಡಿಕೊಂಡಿದ್ದಾರೆ. ಈಗ ಮುಂಬೈನ ವರ್ಸೋವಾದಲ್ಲಿ ಇರುವ ಅವರ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರವನ್ನು ಕಳಿಸಲಾಗಿದೆ.

Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
ಸ್ವರಾ ಭಾಸ್ಕರ್
TV9 Web
| Edited By: |

Updated on:Jun 30, 2022 | 8:03 AM

Share

ಅನೇಕ ಸೆಲೆಬ್ರಿಟಿಗಳಿಗೆ ಕೊಲೆ ಬೆದರಿಕೆ (Death Threat) ಹಾಕಲಾಗುತ್ತಿದೆ. ಪಂಜಾಬಿ ಸಿಂಗರ್​ ಸಿಧು ಮೂಸೆ ವಾಲಾ ಅವರ ಹತ್ಯೆ ಬೆನ್ನಲ್ಲೇ ಈ ರೀತಿಯ ಘಟನೆಗಳು ಹೆಚ್ಚಾಗಿ ವರದಿ ಆಗುತ್ತಿವೆ. ಕೆಲವೇ ದಿನಗಳ ಹಿಂದೆ ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್​ ಖಾನ್​ (Salman Khan) ಮತ್ತು ಅವರ ತಂದೆ ಸಲೀಮ್​ ಖಾನ್​ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಈಗ ಖ್ಯಾತ ನಟಿ ಸ್ವರಾ ಭಾಸ್ಕರ್ (Swara Bhaskar)​ ಅವರಿಗೆ ಇದೇ ರೀತಿಯಲ್ಲಿ ಬೆದರಿಕೆ ಹಾಕಲಾಗಿದೆ. ಅನಾಮಧೇಯ ವ್ಯಕ್ತಿಗಳಿಂದ ಸ್ವರಾ ಭಾಸ್ಕರ್​ ಅವರ ಮನೆಗೆ ಪತ್ರ ಬರೆಯಲಾಗಿದೆ. ಅವರನ್ನು ಕೊಲೆ ಮಾಡುವುದಾಗಿ ಈ ಪತ್ರದಲ್ಲಿ ಬರೆಯಲಾಗಿದೆ. ವಿನಾಯಕ ದಾಮೋದರ್​ ಸಾವರ್ಕರ್​ ಬಗ್ಗೆ ಮಾತನಾಡಿದ್ದಕ್ಕಾಗಿಯೇ ಸ್ವರಾ ಭಾಸ್ಕರ್​ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ವರದಿ ಆಗಿದೆ.

ಸ್ವರಾ ಭಾಸ್ಕರ್​​ ಅವರು ಮೊದಲಿನಿಂದಲೂ ಅನೇಕ ವಿವಾದಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ನೇರ ನಡೆ-ನುಡಿಯ ಕಾರಣದಿಂದ ಅವರು ಫೇಮಸ್​ ಆಗಿದ್ದಾರೆ. ಈಗ ಮುಂಬೈನ ವರ್ಸೋವಾದಲ್ಲಿ ಇರುವ ಅವರ ನಿವಾಸಕ್ಕೆ ಬೆದರಿಕೆ ಪತ್ರವನ್ನು ಕಳಿಸಲಾಗಿದೆ. ಈ ಕೃತ್ಯ ಮಾಡಿರುವವರು ಯಾರು ಎಂಬುದು ತಿಳಿದು ಬಂದಿಲ್ಲ. ಹಾಗಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ವರಾ ಭಾಸ್ಕರ್​ ಅವರು ದೂರು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬೆದರಿಕೆ ಪತ್ರವನ್ನು ಹಿಂದಿಯಲ್ಲಿ ಬರೆಯಲಾಗಿದೆ. ವೀರ ಸಾವರ್ಕರ್​ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಈ ದೇಶದ ಜನತೆ ಸಹಿಸುವುದಿಲ್ಲ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ವರ್ಸೋವಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ
Image
Salman Khan: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್​ ಭದ್ರತೆ ಹೆಚ್ಚಳ
Image
ಕೊಲೆ ಬೆದರಿಕೆಗಳ ಹಿನ್ನೆಲೆಯಲ್ಲಿ ದೂರು ದಾಖಲಿಸಿದ ಕಂಗನಾ; ಚುನಾವಣೆ ಗೆಲ್ಲಲು ದ್ವೇಷ ಹರಡಬೇಡಿ ಎಂದ ನಟಿ
Image
ಶೂಟಿಂಗ್ ವೇಳೆಯೇ ಬಾಲಿವುಡ್​ ಖ್ಯಾತ ನಿರ್ದೇಶಕನಿಗೆ ತಾಲಿಬಾನಿಗಳಿಂದ ಬಂತು ಜೀವ ಬೆದರಿಕೆ
Image
ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ಸ್ವರಾ ಭಾಸ್ಕರ್​ ಹಿನ್ನೆಲೆ:

ದೆಹಲಿ ಮೂಲದ ಸ್ವರಾ ಭಾಸ್ಕರ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. 2009ರಲ್ಲಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ತನು ವೆಡ್ಸ್​ ಮನು’, ‘ಪ್ರೇಮ್​ ರತನ್​ ಧನ್​ ಪಾಯೋ’, ‘ಅನಾರ್ಕಲಿ ಆಫ್ ಆರಾಹ್’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

ಸಲ್ಮಾನ್​ ಖಾನ್​ ಕುಟುಂಬಕ್ಕೂ ಬಂದಿತ್ತು ಬೆದರಿಕೆ:

ಸಿಧು ಮೂಸೆ ವಾಲಾ ಅವರ ಹತ್ಯೆಯ ಬೆನ್ನಲ್ಲೇ ನಟ ಸಲ್ಮಾನ್​ ಖಾನ್​ ಕುಟುಂಬದವರಿಗೂ ಕೊಲೆ ಬೆದರಿಕೆ ಹಾಕಲಾಗಿತ್ತು. ಸಲ್ಲು ಮನೆಯ ಭದ್ರತಾ ಸಿಬ್ಬಂದಿಗೆ ಬೆದರಿಕೆ ಪತ್ರ ಸಿಕ್ಕಿತ್ತು. ‘ನಿಮಗೂ ಮೂಸೆ ವಾಲಾ ರೀತಿ ಮಾಡುತ್ತೇವೆ’ ಎಂದು ಅದರಲ್ಲಿ ಬರೆಯಲಾಗಿತ್ತು. ಈ ಬೆದರಿಕೆ ಪತ್ರ ಬಂದಿರುವುದು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ

Published On - 7:48 am, Thu, 30 June 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ