AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಬಳಿಕ ‘ರಾಮಾಯಣ’ ಆಫರ್ ರಿಜೆಕ್ಟ್ ಮಾಡಿದ ನಟಿ ಆಲಿಯಾ ಭಟ್

ನಿರ್ದೇಶಕ ನಿತೇಶ್ ತಿವಾರಿ ಅವರು ಮೂರು ಪಾರ್ಟ್​ನಲ್ಲಿ ‘ರಾಮಾಯಣ’ ಮಾಡಲು ಮುಂದಾಗಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್, ಸೀತೆಯ ಪಾತ್ರಕ್ಕೆ ಆಲಿಯಾ ಭಟ್ ಹಾಗೂ ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆ ನಿತೇಶ್​ಗೆ ಇತ್ತು. ಆದರೆ, ಈಗ ಅವರ ಲೆಕ್ಕಾಚಾರ ಉಲ್ಟಾ ಆಗುತ್ತಿದೆ.

ಯಶ್ ಬಳಿಕ ‘ರಾಮಾಯಣ’ ಆಫರ್ ರಿಜೆಕ್ಟ್ ಮಾಡಿದ ನಟಿ ಆಲಿಯಾ ಭಟ್
ಆಲಿಯಾ-ಯಶ್
Follow us
ರಾಜೇಶ್ ದುಗ್ಗುಮನೆ
|

Updated on:Aug 24, 2023 | 11:40 AM

‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ 17 ತಿಂಗಳು ಕಳೆದಿವೆ. ಆದರೆ, ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಅವರು ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ಮಧ್ಯೆ ಅವರು ಅನೇಕ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ್ದರು ಎನ್ನುವ ಸುದ್ದಿ ಕೂಡ ಹರಿದಾಡಿತ್ತು. ಆ ಪೈಕಿ ರಾಮಾಯಣ (Ramayana) ಸಿನಿಮಾ ಕೂಡ ಒಂದು. ಈಗ ಈ ಚಿತ್ರದ ಆಫರ್​ನ ಆಲಿಯಾ ಭಟ್ ಕೂಡ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಕ್ಕೆ ಸ್ಪಷ್ಟನೆ ಕೂಡ ಸಿಕ್ಕಿದೆ.

ಇತ್ತೀಚೆಗೆ ಪುರಣಾಗಳ ಕಥೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ನಡೆದಿದೆ. ಆ ಪೈಕಿ ‘ರಾಮಾಯಣ’, ‘ಶಾಕುಂತಲಂ’ ಸಿನಿಮಾಗಳು ಸೋತವು. ಹೀಗಿರುವಾಗ ನಿರ್ದೇಶಕ ನಿತೇಶ್ ತಿವಾರಿ ಅವರು ಮೂರು ಪಾರ್ಟ್​ನಲ್ಲಿ ‘ರಾಮಾಯಣ’ ಮಾಡಲು ಮುಂದಾಗಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್, ಸೀತೆಯ ಪಾತ್ರಕ್ಕೆ ಆಲಿಯಾ ಭಟ್ ಹಾಗೂ ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆ ನಿತೇಶ್​ಗೆ ಇತ್ತು. ಆದರೆ, ಈಗ ಅವರ ಲೆಕ್ಕಾಚಾರ ಉಲ್ಟಾ ಆಗುತ್ತಿದೆ.

ನಿತೇಶ್ ಅವರು ಈ ಮೂವರನ್ನೂ ಭೇಟಿ ಮಾಡಿ ಆಫರ್ ನೀಡಿದ್ದರು. ಈ ಮೊದಲೇ ಯಶ್ ಅವರು ಆಫರ್ ರಿಜೆಕ್ಟ್ ಮಾಡಿದ್ದರು. ಆಲಿಯಾ ಭಟ್ ಅವರು ಸ್ವಲ್ಪ ಸಮಯ ತೆಗೆದುಕೊಂಡು ಆಫರ್​ನ ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣ ಡೇಟ್ಸ್ ಹೊಂದಾಣಿಕೆ ಆಗದೇ ಇರುವುದು.

ಇದನ್ನೂ ಓದಿ: ‘ನಮಗೆ ಒಂದೇ ಸಿನಿಮಾದಲ್ಲಿ ನಟಿಸೋಕೆ ಚಾನ್ಸ್ ಕೊಡಿ’; ಕರೀನಾ ಜೊತೆ ಕಾಣಿಸಿಕೊಂಡ ಆಲಿಯಾ ಹೊಸ ಮನವಿ

‘ಹಾರ್ಟ್ ಆಫ್ ಸ್ಟೋನ್’ ಬಳಿಕ ಆಲಿಯಾ ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಅವರು ಇನ್ನು ಕೆಲ ವರ್ಷ ಬೆರಳೆಣಿಕೆ ಸಿನಿಮಾ ಒಪ್ಪಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ ಮಗಳ ಆರೈಕೆ ಮಾಡಬಬೇಕಿದೆ. ‘ರಾಮಾಯಣ’ ಮೂರು ಭಾಗದಲ್ಲಿ ಬರುವುದರಿಂದ ಹೆಚ್ಚಿನ ಸಮಯ ಮೀಸಲಿಡಬೇಕಾಗುತ್ತದೆ. ಈ ಕಾರಣಕ್ಕೆ ಅವರು ಸಿನಿಮಾದಲ್ಲಿ ನಟಿಸಲು ಒಪ್ಪಿಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:48 am, Thu, 24 August 23

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ