AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಬಳಿಕ ‘ರಾಮಾಯಣ’ ಆಫರ್ ರಿಜೆಕ್ಟ್ ಮಾಡಿದ ನಟಿ ಆಲಿಯಾ ಭಟ್

ನಿರ್ದೇಶಕ ನಿತೇಶ್ ತಿವಾರಿ ಅವರು ಮೂರು ಪಾರ್ಟ್​ನಲ್ಲಿ ‘ರಾಮಾಯಣ’ ಮಾಡಲು ಮುಂದಾಗಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್, ಸೀತೆಯ ಪಾತ್ರಕ್ಕೆ ಆಲಿಯಾ ಭಟ್ ಹಾಗೂ ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆ ನಿತೇಶ್​ಗೆ ಇತ್ತು. ಆದರೆ, ಈಗ ಅವರ ಲೆಕ್ಕಾಚಾರ ಉಲ್ಟಾ ಆಗುತ್ತಿದೆ.

ಯಶ್ ಬಳಿಕ ‘ರಾಮಾಯಣ’ ಆಫರ್ ರಿಜೆಕ್ಟ್ ಮಾಡಿದ ನಟಿ ಆಲಿಯಾ ಭಟ್
ಆಲಿಯಾ-ಯಶ್
ರಾಜೇಶ್ ದುಗ್ಗುಮನೆ
|

Updated on:Aug 24, 2023 | 11:40 AM

Share

‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ 17 ತಿಂಗಳು ಕಳೆದಿವೆ. ಆದರೆ, ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಅವರು ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ಮಧ್ಯೆ ಅವರು ಅನೇಕ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ್ದರು ಎನ್ನುವ ಸುದ್ದಿ ಕೂಡ ಹರಿದಾಡಿತ್ತು. ಆ ಪೈಕಿ ರಾಮಾಯಣ (Ramayana) ಸಿನಿಮಾ ಕೂಡ ಒಂದು. ಈಗ ಈ ಚಿತ್ರದ ಆಫರ್​ನ ಆಲಿಯಾ ಭಟ್ ಕೂಡ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಕ್ಕೆ ಸ್ಪಷ್ಟನೆ ಕೂಡ ಸಿಕ್ಕಿದೆ.

ಇತ್ತೀಚೆಗೆ ಪುರಣಾಗಳ ಕಥೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ನಡೆದಿದೆ. ಆ ಪೈಕಿ ‘ರಾಮಾಯಣ’, ‘ಶಾಕುಂತಲಂ’ ಸಿನಿಮಾಗಳು ಸೋತವು. ಹೀಗಿರುವಾಗ ನಿರ್ದೇಶಕ ನಿತೇಶ್ ತಿವಾರಿ ಅವರು ಮೂರು ಪಾರ್ಟ್​ನಲ್ಲಿ ‘ರಾಮಾಯಣ’ ಮಾಡಲು ಮುಂದಾಗಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್, ಸೀತೆಯ ಪಾತ್ರಕ್ಕೆ ಆಲಿಯಾ ಭಟ್ ಹಾಗೂ ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆ ನಿತೇಶ್​ಗೆ ಇತ್ತು. ಆದರೆ, ಈಗ ಅವರ ಲೆಕ್ಕಾಚಾರ ಉಲ್ಟಾ ಆಗುತ್ತಿದೆ.

ನಿತೇಶ್ ಅವರು ಈ ಮೂವರನ್ನೂ ಭೇಟಿ ಮಾಡಿ ಆಫರ್ ನೀಡಿದ್ದರು. ಈ ಮೊದಲೇ ಯಶ್ ಅವರು ಆಫರ್ ರಿಜೆಕ್ಟ್ ಮಾಡಿದ್ದರು. ಆಲಿಯಾ ಭಟ್ ಅವರು ಸ್ವಲ್ಪ ಸಮಯ ತೆಗೆದುಕೊಂಡು ಆಫರ್​ನ ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣ ಡೇಟ್ಸ್ ಹೊಂದಾಣಿಕೆ ಆಗದೇ ಇರುವುದು.

ಇದನ್ನೂ ಓದಿ: ‘ನಮಗೆ ಒಂದೇ ಸಿನಿಮಾದಲ್ಲಿ ನಟಿಸೋಕೆ ಚಾನ್ಸ್ ಕೊಡಿ’; ಕರೀನಾ ಜೊತೆ ಕಾಣಿಸಿಕೊಂಡ ಆಲಿಯಾ ಹೊಸ ಮನವಿ

‘ಹಾರ್ಟ್ ಆಫ್ ಸ್ಟೋನ್’ ಬಳಿಕ ಆಲಿಯಾ ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಅವರು ಇನ್ನು ಕೆಲ ವರ್ಷ ಬೆರಳೆಣಿಕೆ ಸಿನಿಮಾ ಒಪ್ಪಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ ಮಗಳ ಆರೈಕೆ ಮಾಡಬಬೇಕಿದೆ. ‘ರಾಮಾಯಣ’ ಮೂರು ಭಾಗದಲ್ಲಿ ಬರುವುದರಿಂದ ಹೆಚ್ಚಿನ ಸಮಯ ಮೀಸಲಿಡಬೇಕಾಗುತ್ತದೆ. ಈ ಕಾರಣಕ್ಕೆ ಅವರು ಸಿನಿಮಾದಲ್ಲಿ ನಟಿಸಲು ಒಪ್ಪಿಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:48 am, Thu, 24 August 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ