AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17ನೇ ವರ್ಷದ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿದ ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ

ಕೆಲವು ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಹಾಗೂ ​ಅಭಿಷೇಕ್​ ಬಚ್ಚನ್​ ದಾಂಪತ್ಯದ ಬಗ್ಗೆ ಗಾಸಿಪ್​ ಹರಡಿತ್ತು. ವಿಚ್ಛೇದನ ಪಡೆಯಲು ಈ ದಂಪತಿ ನಿರ್ಧರಿಸಿದ್ದಾರೆ ಎಂಬ ಗಾಳಿಸುದ್ದಿ ಹಬ್ಬಿತ್ತು. ಆದರೆ ಮತ್ತೆ ಮತ್ತೆ ಜೊತೆಯಾಗಿ ಪೋಸ್ ನೀಡುವ ಮೂಲಕ ​ಅಭಿಷೇಕ್​ ಮತ್ತು ಐಶ್ವರ್ಯಾ ಅವರು ಆ ವದಂತಿಗೆ ಬ್ರೇಕ್​ ಹಾಕಿದರು. ಈಗ ಅವರು ಖುಷಿ ಖುಷಿಯಾಗಿ 17ನೇ ವರ್ಷದ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ.

17ನೇ ವರ್ಷದ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿದ ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ
ಆರಾಧ್ಯಾ, ಅಭಿಷೇಕ್​ ಬಚ್ಚನ್​, ಐಶ್ವರ್ಯಾ ರೈ
ಮದನ್​ ಕುಮಾರ್​
|

Updated on: Apr 21, 2024 | 9:37 AM

Share

ಬಾಲಿವುಡ್​ನ ಸ್ಟಾರ್​ ಕಪಲ್​ ಆದಂತಹ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ (Aishwarya Rai Bachchan) ಅವರು 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಏಪ್ರಿಲ್​ 20ರಂದು ವಿವಾಹ ವಾರ್ಷಿಕೋತ್ಸವ (Wedding Anniversary) ಸೆಲೆಬ್ರೇಟ್​ ಮಾಡಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರ ಜೊತೆ ಮಗಳು ಆರಾಧ್ಯಾ ಕೂಡ ಸಾಥ್​ ನೀಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್ (Abhishek Bachchan)​ ಜೋಡಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಕೋರಿದ್ದಾರೆ. ಈ ಫೋಟೋ ನೋಡಿದ ಬಳಿಕ ಗಾಸಿಪ್​ ಮಂದಿಯ ಬಾಯಿಗೆ ಬೀಗ ಹಾಕಿದಂತಾಗಿದೆ.

ಒಂದಷ್ಟು ದಿನಗಳ ಹಿಂದೆ ​ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರ ಬಗ್ಗೆ ಗಾಸಿಪ್​ ಹಬ್ಬಿತ್ತು. ಅವರಿಬ್ಬರು ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸಿದ್ದರು. ಅಭಿಮಾನಿಗಳು ಕೂಡ ಅದನ್ನು ನಿಜ ಎಂದು ನಂಬುವ ಹಂತಕ್ಕೆ ಹೋಗಿದ್ದರು. ಆದರೆ ನಂತರದ ದಿನಗಳಲ್ಲಿ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಜೊತೆಯಾಗಿ ಕೆಲವು ಕಾರ್ಯಕ್ರಮಗಳಿಗೆ ಹಾಜರಾದಾಗ ಗಾಸಿಪ್​ಗಳಿಗೆ ಪೂರ್ಣವಿರಾಮ ಬಿತ್ತು.

ಬಾಲಿವುಡ್​ನಲ್ಲಿ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸಖತ್​ ಬೇಡಿಕೆ ಇದೆ. ತಮ್ಮದೇ ರೀತಿಯಲ್ಲಿ ಇಬ್ಬರೂ ಗುರುತಿಸಿಕೊಂಡಿದ್ದಾರೆ. ಅತ್ತ ಅಮಿತಾಭ್ ಬಚ್ಚನ್​ ಕೂಡ ಫುಲ್​ ಆ್ಯಕ್ಟೀವ್​ ಆಗಿದ್ದಾರೆ. ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ದಿನಗಳಲ್ಲಿ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ದಂಪತಿಯ ಪುತ್ರಿ ಆರಾಧ್ಯಾ ಕೂಡ ವೇದಿಕೆಗಳಲ್ಲಿ ಮಾತನಾಡಿ ಗಮನ ಸೆಳೆಯುತ್ತಿದ್ದಾರೆ. ಅವರು ಯಾವಾಗ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ಅಂಬಾನಿ ಪುತ್ರನ ಪ್ರೀ-ವೆಡ್ಡಿಂಗ್​ ಸಮಾರಂಭದಲ್ಲಿ ಐಶ್ವರ್ಯಾ ರೈ ಮಸ್ತ್​ ಡ್ಯಾನ್ಸ್​

ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್​ ಅವರು ಹಲವು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದರು. ಆ ಬಳಿಕ ಅವರ ನಡುವೆ ಸ್ನೇಹ ಬೆಳೆಯಿತು. ನಂತರ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2007ರಲ್ಲಿ ಅವರಿಬ್ಬರು ಹಸೆಮಣೆ ಏರಿದರು. 2011ರಲ್ಲಿ ಐಶ್ವರ್ಯಾ ರೈ ಅವರು ಹೆಣ್ಣು ಮಗುವಿಗೆ (ಆರಾಧ್ಯಾ) ಜನ್ಮ ನೀಡಿದರು. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್​ ಅವರ ಸುಖ ಸಂಸಾರಕ್ಕೆ ಈಗ 17 ವರ್ಷ ತುಂಬಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ