AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಡಿವೋರ್ಸ್​ ವದಂತಿಗೆ ಫುಲ್ ಸ್ಟಾಪ್; ಈ ಫೋಟೋದಲ್ಲಿದೆ ಅಸಲಿ ವಿಷಯ

ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರ ಸಂಸಾರದ ಬಗ್ಗೆ ಹಬ್ಬಿರುವ ಗಾಸಿಪ್ ಒಂದೆರಡಲ್ಲ. ಅವರ ಸಂಸಾರದಲ್ಲಿ ಏನೋ ಸಮಸ್ಯೆ ಎದುರಾಗಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಆದರೆ ಆ ಎಲ್ಲ ಗಾಸಿಪ್​ಗಳಿಗೆ ಉತ್ತರ ನೀಡುವಂತೆ ಒಂದು ಫೋಟೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಐಶ್ವರ್ಯಾ ರೈ ಡಿವೋರ್ಸ್​ ವದಂತಿಗೆ ಫುಲ್ ಸ್ಟಾಪ್; ಈ ಫೋಟೋದಲ್ಲಿದೆ ಅಸಲಿ ವಿಷಯ
ಐಶ್ವರ್ಯಾ ರೈ ಬಚ್ಚನ್​, ಅಭಿಷೇಕ್ ಬಚ್ಚನ್​ವೈರಲ್ ಫೋಟೋ
ಮದನ್​ ಕುಮಾರ್​
|

Updated on: Dec 06, 2024 | 7:23 PM

Share

ಕಳೆದ ಕೆಲವು ತಿಂಗಳಿನಿಂದ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ದಾಂಪತ್ಯ ಜೀವನದ ಬಗ್ಗೆ ಇಲ್ಲಸಲ್ಲದ ಗಾಸಿಪ್​ಗಳು ಕೇಳಿಬರುತ್ತಿವೆ. ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಕೆಲವರು ಗಾಳಿಸುದ್ದಿ ಹಬ್ಬಿಸಿದ್ದಾರೆ. ಪತಿ ಅಭಿಷೇಕ್ ಬಚ್ಚನ್​ ಜೊತೆ ಐಶ್ವರ್ಯಾ ರೈ ಅವರಿಗೆ ವೈಮನಸ್ಸು ಮೂಡಿದೆ ಎಂದು ಕೆಲವು ಮಾಧ್ಯಮಗಳು ಕೂಡ ಸುದ್ದಿ ಪ್ರಕಟ ಮಾಡಿವೆ. ಶೀಘ್ರದಲ್ಲೇ ಐಶ್ವರ್ಯಾ ರೈ ಬಚ್ಚನ್​ ಮತ್ತು ಅಭಿಷೇಕ್ ಬಚ್ಚನ್​ ಅವರು ವಿಚ್ಛೇದನ ಪಡೆಯಲಿದ್ದಾರೆ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಈಗ ಒಂದು ಫೋಟೋದಿಂದ ಪೂರ್ಣವಿರಾಮ ಬಿದ್ದಿದೆ.

ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ ಎಂಬ ಕಾರಣದಿಂದ ಅವರಿಬ್ಬರ ನಡುವೆ ಬಿರುಕು ಮೂಡಿದೆ ಎಂದು ಜನರು ಅಂದುಕೊಂಡಿದ್ದರು. ಈ ವಿಚಾರಕ್ಕೆ ಅಭಿಷೇಕ್​ ಬಚ್ಚನ್ ಅವರಾಗಲೀ, ಐಶ್ವರ್ಯಾ ರೈ ಅವರಾಗಲೀ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಗಾಸಿಪ್ ಇನ್ನಷ್ಟು ಜಾಸ್ತಿ ಆಯಿತು. ಆದರೆ ಈಗ ಎಲ್ಲದಕ್ಕೂ ಉತ್ತರ ಸಿಕ್ಕಿದೆ.

ಇತ್ತೀಚೆಗೆ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರು ತಮ್ಮ ಕುಟುಂಬದ ಸದಸ್ಯರ ಜೊತೆಗೆ ಒಂದು ಪಾರ್ಟಿಗೆ ತೆರಳಿದ್ದಾರೆ. ಆ ಪಾರ್ಟಿಯ ಫೋಟೋಗಳು ವೈರಲ್ ಆಗಿವೆ. ಪಾರ್ಟಿಯಲ್ಲಿದ್ದ ಉದ್ಯಮಿ ಅನು ರಂಜನ್, ನಟಿ ಆಯೆಷಾ ಜುಲ್ಕಾ ಜೊತೆ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್​ ಅವರು ಸೆಲ್ಫಿಗೆ ಪೋಸ್ ನೀಡಿದ್ದಾರೆ. ಅವರಿಬ್ಬರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?

ಒಂದು ವೇಳೆ ಐಶ್ವರ್ಯಾ ರೈ ಮತ್ತು ಅಭಿಷೇಕ್​ ಬಚ್ಚನ್​ ನಡುವೆ ಕಿರಿಕ್ ಇದ್ದಿದ್ದೇ ಹೌದಾಗಿದ್ದರೆ ಅವರು ಈ ಪಾರ್ಟಿಗೆ ಜೋಡಿಯಾಗಿ ಬರುತ್ತಿರಲಿಲ್ಲ. ಅಲ್ಲದೇ, ಅವರು ತುಂಬ ಖುಷಿ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಇಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂಬುದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ. ಇಷ್ಟು ದಿನ ಹರಿದಾಡಿದ್ದ ಎಲ್ಲ ವದಂತಿಗಳು ಈಗ ಸೈಲೆಂಟ್ ಆಗಿವೆ. ‘ಈ ಒಂದು ಫೋಟೋ ಎಲ್ಲದಕ್ಕೂ ಉತ್ತರ ನೀಡುತ್ತಿದೆ. ಗಟ್ಟಿ ಮಹಿಳೆಯು ಸಂಸಾರದಲ್ಲಿನ ಚಿಕ್ಕ ಸಮಸ್ಯೆಗೆ ಡಿವೋರ್ಸ್​ ನೀಡುವುದಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು