AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಡಿವೋರ್ಸ್​ ವದಂತಿಗೆ ಫುಲ್ ಸ್ಟಾಪ್; ಈ ಫೋಟೋದಲ್ಲಿದೆ ಅಸಲಿ ವಿಷಯ

ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರ ಸಂಸಾರದ ಬಗ್ಗೆ ಹಬ್ಬಿರುವ ಗಾಸಿಪ್ ಒಂದೆರಡಲ್ಲ. ಅವರ ಸಂಸಾರದಲ್ಲಿ ಏನೋ ಸಮಸ್ಯೆ ಎದುರಾಗಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಆದರೆ ಆ ಎಲ್ಲ ಗಾಸಿಪ್​ಗಳಿಗೆ ಉತ್ತರ ನೀಡುವಂತೆ ಒಂದು ಫೋಟೋ ವೈರಲ್​ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಐಶ್ವರ್ಯಾ ರೈ ಡಿವೋರ್ಸ್​ ವದಂತಿಗೆ ಫುಲ್ ಸ್ಟಾಪ್; ಈ ಫೋಟೋದಲ್ಲಿದೆ ಅಸಲಿ ವಿಷಯ
ಐಶ್ವರ್ಯಾ ರೈ ಬಚ್ಚನ್​, ಅಭಿಷೇಕ್ ಬಚ್ಚನ್​ವೈರಲ್ ಫೋಟೋ
ಮದನ್​ ಕುಮಾರ್​
|

Updated on: Dec 06, 2024 | 7:23 PM

Share

ಕಳೆದ ಕೆಲವು ತಿಂಗಳಿನಿಂದ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ದಾಂಪತ್ಯ ಜೀವನದ ಬಗ್ಗೆ ಇಲ್ಲಸಲ್ಲದ ಗಾಸಿಪ್​ಗಳು ಕೇಳಿಬರುತ್ತಿವೆ. ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಕೆಲವರು ಗಾಳಿಸುದ್ದಿ ಹಬ್ಬಿಸಿದ್ದಾರೆ. ಪತಿ ಅಭಿಷೇಕ್ ಬಚ್ಚನ್​ ಜೊತೆ ಐಶ್ವರ್ಯಾ ರೈ ಅವರಿಗೆ ವೈಮನಸ್ಸು ಮೂಡಿದೆ ಎಂದು ಕೆಲವು ಮಾಧ್ಯಮಗಳು ಕೂಡ ಸುದ್ದಿ ಪ್ರಕಟ ಮಾಡಿವೆ. ಶೀಘ್ರದಲ್ಲೇ ಐಶ್ವರ್ಯಾ ರೈ ಬಚ್ಚನ್​ ಮತ್ತು ಅಭಿಷೇಕ್ ಬಚ್ಚನ್​ ಅವರು ವಿಚ್ಛೇದನ ಪಡೆಯಲಿದ್ದಾರೆ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ. ಆದರೆ ಆ ಎಲ್ಲ ಅಂತೆ-ಕಂತೆಗಳಿಗೆ ಈಗ ಒಂದು ಫೋಟೋದಿಂದ ಪೂರ್ಣವಿರಾಮ ಬಿದ್ದಿದೆ.

ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ ಎಂಬ ಕಾರಣದಿಂದ ಅವರಿಬ್ಬರ ನಡುವೆ ಬಿರುಕು ಮೂಡಿದೆ ಎಂದು ಜನರು ಅಂದುಕೊಂಡಿದ್ದರು. ಈ ವಿಚಾರಕ್ಕೆ ಅಭಿಷೇಕ್​ ಬಚ್ಚನ್ ಅವರಾಗಲೀ, ಐಶ್ವರ್ಯಾ ರೈ ಅವರಾಗಲೀ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಗಾಸಿಪ್ ಇನ್ನಷ್ಟು ಜಾಸ್ತಿ ಆಯಿತು. ಆದರೆ ಈಗ ಎಲ್ಲದಕ್ಕೂ ಉತ್ತರ ಸಿಕ್ಕಿದೆ.

ಇತ್ತೀಚೆಗೆ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರು ತಮ್ಮ ಕುಟುಂಬದ ಸದಸ್ಯರ ಜೊತೆಗೆ ಒಂದು ಪಾರ್ಟಿಗೆ ತೆರಳಿದ್ದಾರೆ. ಆ ಪಾರ್ಟಿಯ ಫೋಟೋಗಳು ವೈರಲ್ ಆಗಿವೆ. ಪಾರ್ಟಿಯಲ್ಲಿದ್ದ ಉದ್ಯಮಿ ಅನು ರಂಜನ್, ನಟಿ ಆಯೆಷಾ ಜುಲ್ಕಾ ಜೊತೆ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್​ ಅವರು ಸೆಲ್ಫಿಗೆ ಪೋಸ್ ನೀಡಿದ್ದಾರೆ. ಅವರಿಬ್ಬರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?

ಒಂದು ವೇಳೆ ಐಶ್ವರ್ಯಾ ರೈ ಮತ್ತು ಅಭಿಷೇಕ್​ ಬಚ್ಚನ್​ ನಡುವೆ ಕಿರಿಕ್ ಇದ್ದಿದ್ದೇ ಹೌದಾಗಿದ್ದರೆ ಅವರು ಈ ಪಾರ್ಟಿಗೆ ಜೋಡಿಯಾಗಿ ಬರುತ್ತಿರಲಿಲ್ಲ. ಅಲ್ಲದೇ, ಅವರು ತುಂಬ ಖುಷಿ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಇಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂಬುದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ. ಇಷ್ಟು ದಿನ ಹರಿದಾಡಿದ್ದ ಎಲ್ಲ ವದಂತಿಗಳು ಈಗ ಸೈಲೆಂಟ್ ಆಗಿವೆ. ‘ಈ ಒಂದು ಫೋಟೋ ಎಲ್ಲದಕ್ಕೂ ಉತ್ತರ ನೀಡುತ್ತಿದೆ. ಗಟ್ಟಿ ಮಹಿಳೆಯು ಸಂಸಾರದಲ್ಲಿನ ಚಿಕ್ಕ ಸಮಸ್ಯೆಗೆ ಡಿವೋರ್ಸ್​ ನೀಡುವುದಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ