AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ರಂಗಿನ ಹಬ್ಬ ಆಚರಿಸಿದ ಐಶ್ವರ್ಯಾ-ಅಭಿಷೇಕ್; ವಿಚ್ಛೇದನ ವದಂತಿಗೆ ಸಂಪೂರ್ಣ ಬ್ರೇಕ್

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ ವಿಚ್ಛೇದನ ವದಂತಿ ಕಳೆದ ವರ್ಷವೇ ಹುಟ್ಟಿಕೊಂಡಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎನ್ನುವ ವಿಚಾರ ಆಗಾಗ ಸಾಬೀತು ಆಗುತ್ತಲೇ ಇರುತ್ತದೆ. ಆದಾಗ್ಯೂ ಕೆಲವರಿಗೆ ಈ ಬಗ್ಗೆ ಇನ್ನೂ ಅನುಮಾನಗಳು ಇವೆ.

ಮನೆಯಲ್ಲಿ ರಂಗಿನ ಹಬ್ಬ ಆಚರಿಸಿದ ಐಶ್ವರ್ಯಾ-ಅಭಿಷೇಕ್; ವಿಚ್ಛೇದನ ವದಂತಿಗೆ ಸಂಪೂರ್ಣ ಬ್ರೇಕ್
ಐಶ್ವರ್ಯಾ-ಅಭಿಷೇಕ್
ರಾಜೇಶ್ ದುಗ್ಗುಮನೆ
|

Updated on: Mar 25, 2024 | 10:45 AM

Share

ಭಾರತದಾದ್ಯಂತ ಹೋಳಿ ಆಚರಣೆ ಜೋರಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ಇದರಲ್ಲಿ ಭಾಗಿ ಆಗುತ್ತಿದ್ದಾರೆ. ಬಣ್ಣ ಹಚ್ಚಿ ಸಂಭ್ರಮಿಸಲಾಗುತ್ತಿದೆ. ಈಗ ಐಶ್ವರ್ಯಾ ರೈ ಬಚ್ಚನ್ (Aishwarya Rai ) ಕುಟುಂಬದಲ್ಲಿ ಹೋಳಿ ಆಚರಣೆ ನಡೆದಿದೆ. ಐಶ್ವರ್ಯಾ ರೈ ಬಚ್ಚನ್  ಹಾಗೂ ಅಭಿಷೇಕ್ ಬಚ್ಚನ್ ಮನೆಯಲ್ಲೂ ಹೋಳಿ ಆಚರಣೆ ನಡೆದಿದೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರು ‘ಅಮಿತಾಭ್-ಐಶ್ವರ್ಯಾ ಹೀಗೆಯೇ ಖುಷಿಯಿಂದ ಇರಲಿ’ ಎಂದು ಹಾರೈಸಿದ್ದಾರೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬಚ್ಚನ್ ವಿಚ್ಛೇದನ ವದಂತಿ ಕಳೆದ ವರ್ಷವೇ ಹುಟ್ಟಿಕೊಂಡಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎನ್ನುವ ವಿಚಾರ ಆಗಾಗ ಸಾಬೀತು ಆಗುತ್ತಲೇ ಇರುತ್ತದೆ. ಆದಾಗ್ಯೂ ಕೆಲವರಿಗೆ ಈ ಬಗ್ಗೆ ಇನ್ನೂ ಅನುಮಾನಗಳು ಇವೆ. ಅಂಥವರಿಗೆ ಈ ಫೋಟೋಗಳು ಸ್ಪಷ್ಟನೆ ನೀಡುವಂತೆ ಇದೆ.

ಹೋಳಿ ಸಂದರ್ಭದಲ್ಲಿ ಅಗ್ನಿ ಉರಿಸಲಾಗುತ್ತದೆ. ಅನೇಕ ಕಡೆಗಳಲ್ಲಿ ಈ ಆಚರಣೆ ಇದೆ. ಇದಕ್ಕೆ ‘ಹೋಳಿಕಾ ದಹನ್’ ಎಂದು ಉತ್ತರ ಭಾರತದವರು ಕರೆಯುತ್ತಾರೆ. ಇದನ್ನು ಐಶ್ವರ್ಯಾ ರೈ ಮನೆಯಲ್ಲಿ ಆಚರಿಸಲಾಗಿದೆ. ಬಚ್ಚನ್ ಕುಟುಂಬದ ಎಲ್ಲರೂ ಇದಕ್ಕೆ ಆಗಮಿಸಿದ್ದರು. ಐಶ್ವರ್ಯಾ ರೈ ಎಂದಿನಂತೆ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

ಐಶ್ವರ್ಯಾ ರೈ

‘ನಿಮ್ಮ ಕುಟುಂಬವನ್ನು ಒಟ್ಟಿಗೆ ನೋಡುವುದೇ ಖುಷಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ನೋಡಿ ಐಶ್ವರ್ಯಾ-ಅಭಿಷೇಕ್ ಚೆನ್ನಾಗಿಯೇ ಇದ್ದಾರೆ. ಸುಳ್ಳು ಸುದ್ದಿ ಹೇಳಿದವರ ಬಾಯಿ ಮುಚ್ಚಿದೆ’ ಎಂದು ಕೆಲವರು ಹೇಳಿದ್ದಾರೆ. ಈ ಫೋಟೋದಲ್ಲಿ ಆರಾಧ್ಯಾ ಕೂಡ ಕಾಣಿಸಿಕೊಂಡಿದ್ದಾಳೆ.

ಇದನ್ನೂ ಓದಿ: ಹೇಗಿದ್ರು ಹೇಗಾದ್ರು ಐಶ್ವರ್ಯಾ ರೈ ಪುತ್ರಿ ಆರಾಧ್ಯಾ ಬಚ್ಚನ್: ಇಲ್ಲಿವೆ ಚಿತ್ರಗಳು

ಇತ್ತೀಚೆಗೆ ಆರಾಧ್ಯಾಳ ಹೊಸ ಫೋಟೋ ವೈರಲ್ ಆಗಿತ್ತು. ಈ ಫೋಟೋದಲ್ಲಿ ಅವಳು ಸಖತ್ ಸುಂದರವಾಗಿ ಕಾಣಿಸಿಕೊಂಡಿದ್ದಳು. ಇದನ್ನು ನೋಡಿದ ಅನೇಕರು ಅವಳ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಂದು ಹೇಳಿದ್ದರು. ಇದರಲ್ಲಿ ನಿಜವಿಲ್ಲ ಎಂದು ಹೇಳಲಾಗುತ್ತಿದೆ. ಐಶ್ವರ್ಯಾ ರೈ ಬಚ್ಚನ್ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು