AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್​ ಮೇಲೆ ಮಿಂಚಿದ ಐಶ್ವರ್ಯಾ ರೈ ಬಚ್ಚನ್​

ಬಾಲಿವುಡ್​ ಬೆಡಗಿ ಐಶ್ವರ್ಯಾ ರೈ ಬಚ್ಚನ್​ ಅವರ ಕೈಗೆ ಪೆಟ್ಟಾಗಿದೆ. ಆದರೂ ಕೂಡ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗಿ ಆಗುವುದನ್ನು ತಪ್ಪಿಸಿಕೊಂಡಿಲ್ಲ. ಕೈಯಲ್ಲಿ ಬ್ಯಾಂಡೇಜ್​ ಇದ್ದರೂ ಸಹ ಅವರು ನಗು ನಗುತ್ತಲೇ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ್ದಾರೆ. ಮಾಧ್ಯಮಗಳ ಕ್ಯಾಮೆರಾಗಳತ್ತ ನಗು ಚೆಲ್ಲಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್​ ಮೇಲೆ ಮಿಂಚಿದ ಐಶ್ವರ್ಯಾ ರೈ ಬಚ್ಚನ್​
ಐಶ್ವರ್ಯಾ ರೈ ಬಚ್ಚನ್
ಮದನ್​ ಕುಮಾರ್​
|

Updated on: May 16, 2024 | 10:59 PM

Share

ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರು ಸಿನಿಮಾ ಮಾತ್ರವಲ್ಲದೇ ಮಾಡೆಲಿಂಗ್​ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಜಾಗತಿಕ ಮಟ್ಟದ ಸೌಂದರ್ಯ ವರ್ಧಕ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ಹಲವು ವರ್ಷಗಳಿಂದ ಕಾನ್​ ಚಿತ್ರೋತ್ಸವದ (Cannes Film Festival 2024) ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಾ ಬಂದಿದ್ದಾರೆ. ಈ ಬಾರಿ ಕೂಡ ಅವರು ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ್ದಾರೆ. ಅಚ್ಚರಿ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಅವರ ಆತ್ಮವಿಶ್ವಾಸಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಆದರೆ ಐಶ್ವರ್ಯಾ ರೈ ಅವರು ತಮ್ಮ ಬದ್ಧತೆ ತೋರಿಸಿದ್ದಾರೆ.

ಕೈಗೆ ಪೆಟ್ಟಾಗಿದೆ ಎಂಬ ನೆಪ ಹೇಳದೇ ಐಶ್ವರ್ಯಾ ರೈ ಅವರು ಕಾನ್​ ಫಿಲ್ಮ್ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದಾರೆ. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ. ಮೊದಲೇ ಒಪ್ಪಿಕೊಂಡ ಈ ಕೆಲಸವನ್ನು ಅವರು ಎಂದಿನ ಉತ್ಸಾಹದಲ್ಲಿ ಮಾಡಿ ಮುಗಿಸಿದ್ದಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಕಾನ್​ ಚಿತ್ರೋತ್ಸವ ಹೊಸದೇನೂ ಅಲ್ಲ. 2002ರಲ್ಲಿ ಅವರು ಮೊದಲ ಬಾರಿಗೆ ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದರು. ಅಂದಿನಿಂದ ಇಂದಿನ ತನಕ ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳಿ ತಮ್ಮ ಹಾಜರಿ ಹಾಕಿದ್ದಾರೆ. ಈವರೆಗೂ 21 ಬಾರಿ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ನ ರೆಡ್​ ಕಾರ್ಪೆಟ್​ನಲ್ಲಿ ವಾಕ್​ ಮಾಡಿದ್ದಾರೆ. ಈ ಬಾರಿ ಕೈಗೆ ಪೆಟ್ಟಾಗಿದ್ದನ್ನು ಕೂಡ ಅವರು ಲೆಕ್ಕಿಸದೇ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ನಗುಮುಖದಿಂದ ಪೋಸ್​ ನೀಡಿದ್ದಾರೆ.​

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ