AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes 2024: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ ಅವರು 2024ರ ಕಾನ್​ ಚಿತ್ರೋತ್ಸವದಲ್ಲಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಅವರು ಭಾರತಕ್ಕೆ ಮರಳುತ್ತಿದ್ದಂತೆಯೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಹಾಗಾದರೆ ಅವರಿಗೆ ಏನಾಗಿದೆ? ಆರೋಗ್ಯ ಸಮಸ್ಯೆ ಇದ್ದರೂ ಕೂಡ ಐಶ್ವರ್ಯಾ ರೈ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳಿದ್ದು ಯಾಕೆ? ಇಲ್ಲಿದೆ ಉತ್ತರ..

Cannes 2024: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​
ಐಶ್ವರ್ಯಾ ರೈ ಬಚ್ಚನ್
ಮದನ್​ ಕುಮಾರ್​
|

Updated on: May 19, 2024 | 7:12 AM

Share

ಕೈ ನೋವು ಇದ್ದರೂ ಕೂಡ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಅಲ್ಲಿನ ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ (Cannes 2024) ಭಾಗಿ ಆಗಿದ್ದಾರೆ. ರೆಡ್ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಈ ವೇಳೆ ಅವರ ಬಲಗೈಯಲ್ಲಿ ಇರುವ ಬ್ಯಾಂಡೇಜ್​ ನೋಡಿ ಬಹುತೇಕರಿಗೆ ಅಚ್ಚರಿ ಆಗಿದೆ. ಈಗ ಸಿಕ್ಕಿರುವ ಮಾಹಿತಿ ಏನೆಂದರೆ, ಭಾರತಕ್ಕೆ ವಾಪಸ್​ ಆಗುತ್ತಿದ್ದಂತೆಯೇ ಐಶ್ವರ್ಯಾ ರೈ (Aishwarya Rai) ಅವರ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. 77ನೇ ಕಾನ್ ಚಿತ್ರೋತ್ಸವದಲ್ಲಿ ಅವರು ಮಿಂಚಿದ್ದಾರೆ. ಕೈ ನೋವಿನ ನಡುವೆಯೂ ತಮ್ಮ ಬದ್ಧತೆ ತೋರಿಸಿದ್ದಾರೆ.

ಸತತ 21 ವರ್ಷಗಳಿಂದ ಐಶ್ವರ್ಯಾ ರೈ ಬಚ್ಚನ್​ ಅವರು ಕಾನ್​ ಚಿತ್ರೋತ್ಸವದಲ್ಲಿ ಭಾಗಿ ಆಗುತ್ತಿದ್ದಾರೆ. ಅವರನ್ನು ವಿವಿಧ ಬಗೆಯ ಕಾಸ್ಟ್ಯೂಮ್​ನಲ್ಲಿ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ವರ್ಷ ಅವರಿಗೆ ತೀವ್ರ ಕೈ ನೋವು ಇತ್ತು. ಹಾಗಾಗಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದೇ ಅನೇಕರು ಊಹಿಸಿದ್ದರು. ಆದರೆ ಅಂಥವರ ಊಹೆ ಸುಳ್ಳಾಗಿದೆ.

ಕೆಲವೇ ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಅವರ ಮಣಿಕಟ್ಟಿಗೆ ಪೆಟ್ಟಾಗಿತ್ತು. ನೋವು ಇದ್ದಿದ್ದರಿಂದ ಈ ಬಾರಿ ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳುವುದು ಬೇಡ ಎಂದು ಆಪ್ತರು ಸಲಹೆ ಕೂಡ ನೀಡಿದ್ದರು. ಆದರೆ ಅದಕ್ಕೆ ಐಶ್ವರ್ಯಾ ರೈ ಒಪ್ಪಲಿಲ್ಲ. ಇಷ್ಟು ವರ್ಷಗಳ ಕಾಲ ನಡೆದುಬಂದ ಸಂಭ್ರಮವನ್ನು ಈ ಬಾರಿ ತಪ್ಪಿಸಲು ಅವರಿಗೆ ಇಷ್ಟ ಇರಲಿಲ್ಲ. ಹಾಗಾಗಿ ಕೈಗೆ ಬ್ಯಾಂಡೇಜ್​ ಹಾಕಿಸಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡಿದರು.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ಐಶ್ವರ್ಯಾ ರೈ ಬಚ್ಚನ್​ ಅವರು ವಿದೇಶಕ್ಕೆ ತೆರಳುವುದಕ್ಕೂ ಮುನ್ನ ತಮ್ಮ ವೈದ್ಯರ ತಂಡದ ಜೊತೆ ಚರ್ಚೆ ಮಾಡಿದ್ದಾರೆ. ಮುಂದಿನ ವಾರ ಅವರು ಭಾರತಕ್ಕೆ ಮರಳಿದ ತಕ್ಷಣ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂಬ ಆಪ್ತರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಮಗಳು ಆರಾಧ್ಯ ಬಚ್ಚನ್​ ಜೊತೆ ಐಶ್ವರ್ಯಾ ಅವರು ಕಾನ್​ ಚಿತ್ರೋತ್ಸವಕ್ಕೆ ತೆರಳಿದ್ದಾರೆ. ಅಲ್ಲಿಂದ ಅವರ ಫೋಟೋಗಳು ವೈರಲ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್