AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes 2024: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ ಅವರು 2024ರ ಕಾನ್​ ಚಿತ್ರೋತ್ಸವದಲ್ಲಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಅವರು ಭಾರತಕ್ಕೆ ಮರಳುತ್ತಿದ್ದಂತೆಯೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಹಾಗಾದರೆ ಅವರಿಗೆ ಏನಾಗಿದೆ? ಆರೋಗ್ಯ ಸಮಸ್ಯೆ ಇದ್ದರೂ ಕೂಡ ಐಶ್ವರ್ಯಾ ರೈ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳಿದ್ದು ಯಾಕೆ? ಇಲ್ಲಿದೆ ಉತ್ತರ..

Cannes 2024: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​
ಐಶ್ವರ್ಯಾ ರೈ ಬಚ್ಚನ್
ಮದನ್​ ಕುಮಾರ್​
|

Updated on: May 19, 2024 | 7:12 AM

Share

ಕೈ ನೋವು ಇದ್ದರೂ ಕೂಡ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಅಲ್ಲಿನ ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ (Cannes 2024) ಭಾಗಿ ಆಗಿದ್ದಾರೆ. ರೆಡ್ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಈ ವೇಳೆ ಅವರ ಬಲಗೈಯಲ್ಲಿ ಇರುವ ಬ್ಯಾಂಡೇಜ್​ ನೋಡಿ ಬಹುತೇಕರಿಗೆ ಅಚ್ಚರಿ ಆಗಿದೆ. ಈಗ ಸಿಕ್ಕಿರುವ ಮಾಹಿತಿ ಏನೆಂದರೆ, ಭಾರತಕ್ಕೆ ವಾಪಸ್​ ಆಗುತ್ತಿದ್ದಂತೆಯೇ ಐಶ್ವರ್ಯಾ ರೈ (Aishwarya Rai) ಅವರ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. 77ನೇ ಕಾನ್ ಚಿತ್ರೋತ್ಸವದಲ್ಲಿ ಅವರು ಮಿಂಚಿದ್ದಾರೆ. ಕೈ ನೋವಿನ ನಡುವೆಯೂ ತಮ್ಮ ಬದ್ಧತೆ ತೋರಿಸಿದ್ದಾರೆ.

ಸತತ 21 ವರ್ಷಗಳಿಂದ ಐಶ್ವರ್ಯಾ ರೈ ಬಚ್ಚನ್​ ಅವರು ಕಾನ್​ ಚಿತ್ರೋತ್ಸವದಲ್ಲಿ ಭಾಗಿ ಆಗುತ್ತಿದ್ದಾರೆ. ಅವರನ್ನು ವಿವಿಧ ಬಗೆಯ ಕಾಸ್ಟ್ಯೂಮ್​ನಲ್ಲಿ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ವರ್ಷ ಅವರಿಗೆ ತೀವ್ರ ಕೈ ನೋವು ಇತ್ತು. ಹಾಗಾಗಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದೇ ಅನೇಕರು ಊಹಿಸಿದ್ದರು. ಆದರೆ ಅಂಥವರ ಊಹೆ ಸುಳ್ಳಾಗಿದೆ.

ಕೆಲವೇ ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಅವರ ಮಣಿಕಟ್ಟಿಗೆ ಪೆಟ್ಟಾಗಿತ್ತು. ನೋವು ಇದ್ದಿದ್ದರಿಂದ ಈ ಬಾರಿ ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳುವುದು ಬೇಡ ಎಂದು ಆಪ್ತರು ಸಲಹೆ ಕೂಡ ನೀಡಿದ್ದರು. ಆದರೆ ಅದಕ್ಕೆ ಐಶ್ವರ್ಯಾ ರೈ ಒಪ್ಪಲಿಲ್ಲ. ಇಷ್ಟು ವರ್ಷಗಳ ಕಾಲ ನಡೆದುಬಂದ ಸಂಭ್ರಮವನ್ನು ಈ ಬಾರಿ ತಪ್ಪಿಸಲು ಅವರಿಗೆ ಇಷ್ಟ ಇರಲಿಲ್ಲ. ಹಾಗಾಗಿ ಕೈಗೆ ಬ್ಯಾಂಡೇಜ್​ ಹಾಕಿಸಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡಿದರು.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ಐಶ್ವರ್ಯಾ ರೈ ಬಚ್ಚನ್​ ಅವರು ವಿದೇಶಕ್ಕೆ ತೆರಳುವುದಕ್ಕೂ ಮುನ್ನ ತಮ್ಮ ವೈದ್ಯರ ತಂಡದ ಜೊತೆ ಚರ್ಚೆ ಮಾಡಿದ್ದಾರೆ. ಮುಂದಿನ ವಾರ ಅವರು ಭಾರತಕ್ಕೆ ಮರಳಿದ ತಕ್ಷಣ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂಬ ಆಪ್ತರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಮಗಳು ಆರಾಧ್ಯ ಬಚ್ಚನ್​ ಜೊತೆ ಐಶ್ವರ್ಯಾ ಅವರು ಕಾನ್​ ಚಿತ್ರೋತ್ಸವಕ್ಕೆ ತೆರಳಿದ್ದಾರೆ. ಅಲ್ಲಿಂದ ಅವರ ಫೋಟೋಗಳು ವೈರಲ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?