AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಫೋಟೋ ಹಂಚಿಕೊಂಡು ಅಭಿಷೇಕ್​​ಗೆ ಬರ್ತ್​ಡೇ ವಿಶ್ ಮಾಡಿದ ಐಶ್ವರ್ಯಾ ರೈ

Abhishek Bachchan Birthday: ಐಶ್ವರ್ಯಾ ರೈ ಅವರು ಪತಿ ಅಭಿಷೇಕ್ ಬಚ್ಚನ್ ಅವರ ಜನ್ಮದಿನಕ್ಕೆ ಪ್ರೀತಿಯಿಂದ ಶುಭಾಶಯಗಳನ್ನು ತಿಳಿಸಿದ್ದಾರೆ. ಅವರ ಬಾಲ್ಯದ ಫೋಟೋವನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ಮಧ್ಯೆ ಮನಸ್ತಾಪವಿರುವ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು. ಆದರೆ, ಈ ಪೋಸ್ಟ್ ಮೂಲಕ ಅವರ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಲ್ಯದ ಫೋಟೋ ಹಂಚಿಕೊಂಡು ಅಭಿಷೇಕ್​​ಗೆ ಬರ್ತ್​ಡೇ ವಿಶ್ ಮಾಡಿದ ಐಶ್ವರ್ಯಾ ರೈ
ಐಶ್ವರ್ಯಾ ಕುಟುಂಬ
ರಾಜೇಶ್ ದುಗ್ಗುಮನೆ
|

Updated on:Feb 05, 2025 | 9:47 PM

Share

ಅಭಿಷೇಕ್ ಬಚ್ಚನ್ ಜನ್ಮದಿನದ ಪ್ರಯುಕ್ತ ಐಶ್ವರ್ಯಾ ರೈ ಅವರು ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಈ ಮೂಲಕ ತಮ್ಮ ಮಧ್ಯೆ ಎಲ್ಲವೂ ಸರಿ ಇದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಅಭಿಷೇಕ್ ಬಚ್ಚನ್ ಅವರ ಬಾಲ್ಯದ ಫೋಟೋನ ಐಶ್ವರ್ಯಾ ಹಂಚಿಕೊಂಡಿದ್ದು, ಪ್ರೀತಿಯಿಂದ ಸಾಲುಗಳನ್ನು ಬರೆದಿದ್ದಾರೆ. ಐಶ್ವರ್ಯಾ ರೈ ಅವರು ಪತಿಗೆ ವಿಶ್​ ಮಾಡಿದ್ದು ನೋಡಿ ಫ್ಯಾನ್ಸ್ ವಲಯದಲ್ಲಿ ಖುಷಿ ಹೆಚ್ಚಿದೆ. ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಬರುತ್ತಿತ್ತು. ಅಭಿಷೇಕ್ ಬಚ್ಚನ್ ಅವರಿಂದ ದೂರ ಆಗಿ ಐಶ್ವರ್ಯಾ ರೈ ವಾಸಿಸುತ್ತಿದ್ದಾರೆ ಮತ್ತು ಶೀಘ್ರವೇ ಇವರು ಡಿವೋರ್ಸ್ ಪಡೆಯುತ್ತಾರೆ ಎನ್ನುವ ವಿಚಾರವೂ ಹರಿದಾಡಿತ್ತು. ಆದರೆ, ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡು ಎಲ್ಲದಕ್ಕೂ ತೆರೆ ಎಳೆದರು. ಈಗ ಅಭಿಷೇಕ್​ಗೆ ಪ್ರೀತಿಯಿಂದ ವಿಶ್ ಮಾಡಿ ಸುದ್ದಿ ಆಗಿದ್ದಾರೆ.

ಅಭಿಷೇಕ್ ಬಚ್ಚನ್ ಅವರ ಬಾಲ್ಯದ ಫೋಟೋ ಇದಾಗಿದೆ. ಇದು ಬ್ಲಾಕ್​ ಆ್ಯಂಡ್ ವೈಟ್ ಚಿತ್ರ. ಈ ಫೋಟೋಗೆ, ‘ನಿಮಗೆ ಜನ್ಮದಿನದ ಶುಭಾಶಯ. ಸಂತೋಷ, ಉತ್ತಮ ಆರೋಗ್ಯ, ಪ್ರೀತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಕೆಲವರು ಐಶ್ವರ್ಯಾ ಅವರು ಅಭಿಷೇಕ್​ಗೆ ಬರ್ತ್​ಡೇ ವಿಶ್ ಮಾಡಿದರು ಎಂದು ಸಂಭ್ರಮಿಸಿದರೆ ಇನ್ನೂ ಕೆಲವರು, ಐಶ್ವರ್ಯಾ ಅವರು ಅಭಿಷೇಕ್ ಹೆಸರನ್ನು ಎಲ್ಲಿಯೂ ಉಲ್ಲೇಖ ಮಾಡಿಲ್ಲ, ಅವರನ್ನು ಟ್ಯಾಗ್ ಕೂಡ ಮಾಡಿಲ್ಲ ಎಂದು ಕೊಂಕು ತೆಗೆದಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ಅಭಿಷೇಕ್​ಗಿಂತ ಐಶ್ವರ್ಯಾ ರೈ ಇಷ್ಟೆಲ್ಲಾ ವರ್ಷ ದೊಡ್ಡವರಾ? ಈ ವಿಚಾರ ಗೊತ್ತಾ?

ಐಶ್ವರ್ಯಾ ರೈ ಅವರ ಈ ಫೋಟೋಗೆ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್ ಇತ್ತೀಚೆಗೆ ಹಲವು ಬಾರಿ ಒಟ್ಟಾಗಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಮೊದಲು ಇದ್ದ ವೈಮನಸ್ಸು ಈಗ ದೂರ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:33 pm, Wed, 5 February 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು