AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮನೆ ಮದುವೆಯಲ್ಲಿ ಕುಟುಂಬದಿಂದ ಅಂತರ ಕಾಯ್ದುಕೊಂಡ ಐಶ್ವರ್ಯಾ; ಪ್ರತ್ಯೇಕವಾಗಿ ಪೋಸ್ ಕೊಟ್ಟ ನಟಿ  

ಸೆಲೆಬ್ರಿಟಿಗಳು ತಮ್ಮ ಕುಟುಂಬದ ಜೊತೆ ಅನಂತ್ ಹಾಗೂ ರಾಧಿಕಾ ಮದುವೆಗೆ ಹಾಜರಿ ಹಾಕಿದ್ದಾರೆ. ಆದರೆ, ಐಶ್ವರ್ಯಾ ರೈ ಮಾತ್ರ ಬಚ್ಚನ್ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದಾರೆ! ಐಶ್ವರ್ಯಾ ರೈ ಬಚ್ಚನ್ ಹಾಗೂ ಮಗಳು ಆರಾಧ್ಯಾ ಪ್ರತ್ಯೇಕವಾಗಿ ಮದುವೆಗೆ ಆಗಮಿಸಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಅಂಬಾನಿ ಮನೆ ಮದುವೆಯಲ್ಲಿ ಕುಟುಂಬದಿಂದ ಅಂತರ ಕಾಯ್ದುಕೊಂಡ ಐಶ್ವರ್ಯಾ; ಪ್ರತ್ಯೇಕವಾಗಿ ಪೋಸ್ ಕೊಟ್ಟ ನಟಿ  
ಅಂಬಾನಿ ಮನೆ ಮದುವೆಯಲ್ಲಿ ಕುಟುಂಬದಿಂದ ಅಂತರ ಕಾಯ್ದುಕೊಂಡ ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on:Jul 13, 2024 | 10:47 AM

Share

ರಿಲೈನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಹಾಗೂ ಉದ್ಯಮಿಯ ಮಗಳು ರಾಧಿಕಾ ಮರ್ಚೆಂಟ್ ಮದುವೆ ಅದ್ದೂರಿಯಾಗಿ ಮುಂಬೈನಲ್ಲಿ ನೆರವೇರಿದೆ. ಅನೇಕ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. WWE ಆಟಗಾರ ಜಾನ್ ಸಿನಾ, ಕಿಮ್ ಕರ್ದಾಶಿಯಾ ಸೇರಿ ಅನೇಕರು ಮದುವೆಯಲ್ಲಿ ಭಾಗಿ ಆಗಿದ್ದಾರೆ. ಇಡೀ ಬಾಲಿವುಡ್ ಮದುವೆಗೆ ಹಾಜರಿ ಹಾಕಿದೆ. ಈ ಮದುವೆಯಿಂದ ಮತ್ತೆ ವಿಚ್ಛೇದನದ ವಿಚಾರ ಸದ್ದು ಮಾಡಿದೆ.

ಎಲ್ಲ ಸೆಲೆಬ್ರಿಟಿಗಳು ತಮ್ಮ ಕುಟುಂಬದ ಜೊತೆ ಮದುವೆಗೆ ಹಾಜರಿ ಹಾಕಿದ್ದಾರೆ. ಆದರೆ, ಐಶ್ವರ್ಯಾ ರೈ ಮಾತ್ರ ಬಚ್ಚನ್ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದಾರೆ! ಹೌದು, ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಹಾಗೂ ಇತರರು ಒಟ್ಟಾಗಿ ಮದುವೆಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಐಶ್ವರ್ಯಾ ಇರಲಿಲ್ಲ. ಅವರು ಯಾವುದೋ ಕಾರಣಕ್ಕೆ ಮದುವೆಗೆ ಹಾಜರಾಗುತ್ತಿಲ್ಲವೇನೋ ಎಂದು ಕೆಲವರು ಭಾವಿಸಿದರು. ಬಳಿಕ ಅವರು ಮದುವೆಗೆ ಹಾಜರಿ ಹಾಕಿದ್ದಾರೆ.

ಐಶ್ವರ್ಯಾ ರೈ ಬಚ್ಚನ್ ಹಾಗೂ ಮಗಳು ಆರಾಧ್ಯಾ ಪ್ರತ್ಯೇಕವಾಗಿ ಮದುವೆಗೆ ಆಗಮಿಸಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಐಶ್ವರ್ಯಾ ರೈಗೆ ಬಚ್ಚನ್ ಕುಟುಂಬದ ಜೊತೆ ಕಿರಿಕ್ ಇರೋದು ನಿಜ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಈ ಬಗ್ಗೆ ಬಚ್ಚನ್ ಕುಟುಂಬದವರು ಮೌನವಹಿಸಿದ್ದಾರೆ.

ಇದನ್ನೂ ಓದಿ: ಎಷ್ಟು ಕ್ಯೂಟ್ ಆಗಿ ಕಾಣ್ತಿದ್ದಾರೆ ನೋಡಿ ಐಶ್ವರ್ಯಾ ರೈ ಮಗಳು

ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್-ಜಯಾ ಬಚ್ಚನ್ ದಂಪತಿ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಚರ್ಚೆ ಮೊದಲಿನಿಂದಲೂ ಇದೆ. ಆದರೆ, ಅಷ್ಟಾಗಿ ಇದನ್ನು ತೋರಿಸಿಕೊಳ್ಳುತ್ತಾ ಇರಲಿಲ್ಲ. ಇತ್ತೀಚೆಗೆ ಐಶ್ವರ್ಯಾ ಹಾಗೂ ಅಭಿಷೇಕ್ ಅವರು ವಿಚ್ಛೇದನ ಪಡೆದುಕೊಳ್ಳುತ್ತಾರೆ ಎನ್ನುವ ಸುದ್ದಿ ಕೂಡ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Sat, 13 July 24

Follow Us
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ