ವಿಚ್ಛೇದನ ವಿಚಾರ ಬರೀ ಫೇಕ್: ಒಂದೇ ವಿಡಿಯೋದಿಂದ ಸ್ಪಷ್ಟನೆ ಕೊಟ್ಟ ಐಶ್ವರ್ಯಾ ರೈ

ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತೇಚೆಗೆ ಸುದ್ದಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಬಹುವಾಗಿ ಚರ್ಚೆ ಆಗುತ್ತಿತ್ತು, ಆದರೆ ಕೇವಲ ಒಂದೇ ವಿಡಿಯೋದಿಂದ ಎಲ್ಲ ರೂಮರ್​ಗಳಿಗೆ ಪೂರ್ಣ ವಿರಾಮ ಇಟ್ಟಿದ್ದಾರೆ ನಟಿ.

ವಿಚ್ಛೇದನ ವಿಚಾರ ಬರೀ ಫೇಕ್: ಒಂದೇ ವಿಡಿಯೋದಿಂದ ಸ್ಪಷ್ಟನೆ ಕೊಟ್ಟ ಐಶ್ವರ್ಯಾ ರೈ
Follow us
| Updated By: ಮಂಜುನಾಥ ಸಿ.

Updated on: Sep 24, 2024 | 7:03 PM

ನಟಿ ಐಶ್ವರ್ಯಾ ರೈ ಅವರು ಪ್ಯಾರಿಸ್ ಫ್ಯಾಷನ್ ವೀಕ್ಗೆ ತೆರಳಿದ್ದಾರೆ. ಅವರ ಜೊತೆ ಮಗಳು ಕೂಡ ಕಾಣಿಸಿಕೊಂಡಿದ್ದಾರೆ. ಲೋರಿಯಾಲ್ ಪ್ಯಾರಿಸ್ ಫ್ಯಾಷನ್ ವೀಕ್ನಲ್ಲಿ ಅವರು ಗಮನ ಸೆಳೆಯಲಿದ್ದಾರೆ. ಐಶ್ವರ್ಯಾ ಹಾಗೂ ಆರಾಧ್ಯಾ ಒಟ್ಟಾಗಿ ಸಾಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಈ ವಿಡಿಯೋ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ವಿಡಿಯೋ ಮೂಲಕ ಅವರು ವಿಚ್ಛೇದನದ ವಿಚಾರಕ್ಕೆ ಬ್ರೇಕ್ ಹಾಕಿದ್ದಾರೆ.

ಐಶ್ವರ್ಯಾ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಇದೆ. ಈ ವಿಚಾರ ಅನೇಕರಿಗೆ ಶಾಕಿಂಗ್ ಎನಿಸಿದೆ. ಈ ಬಗ್ಗೆ ಅನೇಕ ವದಂತಿಗಳು ಹುಟ್ಟಿಕೊಂಡಿವೆ. ಆದರೆ, ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ಅವರು ಮಾತನಾಡುವ ಗೋಜಿಗೆ ಹೋಗಿಲ್ಲ. ಹೀಗಿರುವಾಗಲೇ ಇತ್ತೀಚೆಗೆ ಐಶ್ವರ್ಯಾ ಅವರು ವೆಡ್ಡಿಂಗ್ ರಿಂಗ್ನ ತೆಗೆದಿಟ್ಟು ಓಡಾಡಿದ್ದ ವಿಡಿಯೋ ವೈರಲ್ ಆಗಿತ್ತು. ಆದರೆ, ಈಗ ಅವರು ಮತ್ತೆ ಉಂಗುರ ಧರಿಸಿದ್ದಾರೆ.

ಹೌದು, ಐಶ್ವರ್ಯಾ ರೈ ಅವರು ವೆಡ್ಡಿಂಗ್ ರಿಂಗ್ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಮೂಲಕ ಐಶ್ವರ್ಯಾ-ಅಭಿಷೇಕ್ ಬೇರೆ ಆಗಿಲ್ಲ ಅನ್ನೋದು ಅಭಿಮಾನಿಗಳಿಗೆ ಮನವರಿಕೆ ಆದಂತೆ ಆಗಿದೆ. ಆದರೆ, ಇನ್ನಷ್ಟು ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಈ ಮೊದಲು ಐಶ್ವರ್ಯಾ ಅವರು ‘ಸೈಮಾ 2024’ಗಾಗಿ ದುಬೈ ತೆರಳಿದ್ದರು. ಐಶ್ವರ್ಯಾಗೆ ಅತ್ಯುತ್ತಮ ನಟಿ ಪ್ರಶಸ್ತಿ (ಪೊನ್ನಿಯಿನ್ ಸೆಲ್ವನ್ 2) ಸಿಕ್ಕಿದೆ. ಆ ಬಳಿಕ ವಿಕ್ರಮ್ ಹಾಗೂ ಐಶ್ವರ್ಯಾ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಐಶ್ವರ್ಯಾ ರೈ ಎಲ್ಲೇ ಹೋದರು ಮಗಳ ಜೊತೆ ಮಾತ್ರ ತೆರಳುತ್ತಿದ್ದಾರೆ. ಇದು ಅವರ ವಿಚ್ಛೇದನದ ಸುದ್ದಿ ಹುಟ್ಟಲು ಮೂಲ ಕಾರಣ. ಇದು ನಿಜ ಇದ್ದರೂ ಇರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕ ಬಳಿಕವೇ ಎಲ್ಲವೂ ತಿಳಿಯಲಿದೆ.

ಇನ್ನು ಪ್ಯಾರಿಸ್ ಫ್ಯಾಷನ್ ವೀಕ್ ವಿಚಾರಕ್ಕೆ ಬರೋದಾದರೆ ಐಶ್ವರ್ಯಾ ಅವರು ಇದರಲ್ಲಿ ಭಾಗಿ ಆಗುತ್ತಾರೆ. ಅವರು ಕಳೆದ ವರ್ಷ ಇಲ್ಲಿಗೆ ಆಗಮಿಸಿ ಎಲ್ಲರ ಮೆಚ್ಚುಗೆ ಪಡೆದಿದ್ದರು. ಐಶ್ವರ್ಯಾ ರೈ ಅವರು ‘ಪೊನ್ನಿಯಿನ್ ಸೆಲ್ವನ್ 1 ಹಾಗೂ 2’ನಲ್ಲಿ ನಟಿಸಿದ್ದರು. ಇದಾದ ಬಳಿಕ ಅವರು ಯಾವುದೇ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ