AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಮೊಬೈಲ್ ವಾಲ್​ಪೇಪರ್​ನಲ್ಲಿ ಅಮಿತಾಭ್ ಬಚ್ಚನ್? ವಿಡಿಯೋ ವೈರಲ್

ಇತ್ತೀಚೆಗೆ ಐಶ್ವರ್ಯಾ ರೈ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಲು ದುಬೈ ತೆರಳಿದ್ದರು. ಈಗ ಅವರು ಕಾರ್ಯಕ್ರಮ ಮುಗಿಸಿ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಕೈಯಲ್ಲಿ ಮೊಬೈಲ್ ಇತ್ತು. ಅವರ ಮೊಬೈಲ್​ನಲ್ಲಿರೋ ವಾಲ್​ಪೇಪರ್ ಸಾಕಷ್ಟು ಗಮನ ಸೆಳೆದಿದೆ.

ಐಶ್ವರ್ಯಾ ರೈ ಮೊಬೈಲ್ ವಾಲ್​ಪೇಪರ್​ನಲ್ಲಿ ಅಮಿತಾಭ್ ಬಚ್ಚನ್? ವಿಡಿಯೋ ವೈರಲ್
ಐಶ್ವರ್ಯಾ,ಆರಾಧ್ಯಾ-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Nov 29, 2024 | 12:46 PM

Share

ಐಶ್ವರ್ಯಾ ರೈ ಹಾಗೂ ಬಚ್ಚನ್ ಕುಟುಂಬದ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ವಿಚಾರ ಇತ್ತೀಚೆಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬಗ್ಗೆ ಸಾಕಷ್ಟು ಸುದ್ದಿ ಆಗುತ್ತಿದೆ. ಹೀಗಿರುವಾಗಲೇ ಐಶ್ವರ್ಯಾ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಐಶ್ವರ್ಯಾ ರೈ ಅವರ ಮೊಬೈಲ್ ವಾಲ್​ಪೇಪರ್ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇತ್ತೀಚೆಗೆ ಐಶ್ವರ್ಯಾ ರೈ ಅವರು ಈವೆಂಟ್ ಒಂದರಲ್ಲಿ ಭಾಗಿ ಆಗಲು ದುಬೈ ತೆರಳಿದ್ದರು. ಈಗ ಅವರು ಕಾರ್ಯಕ್ರಮ ಮುಗಿಸಿ ಮರಳಿದ್ದಾರೆ. ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಕೈಯಲ್ಲಿ ಮೊಬೈಲ್ ಇತ್ತು. ಅವರ ಮೊಬೈಲ್​ನಲ್ಲಿರೋ ವಾಲ್​ಪೇಪರ್ ಸಾಕಷ್ಟು ಗಮನ ಸೆಳೆದಿದೆ.

ಐಶ್ವರ್ಯಾ ಅವರು ನಡೆದು ಬರುವಾಗ ಅವರ ಮೊಬೈಲ್ ಬ್ಲಿಂಕ್ ಆಗಿದೆ. ಇದರಲ್ಲಿ ಆರಾಧ್ಯಾ ಅವರು ಯಾರದ್ದೋ ಜೊತೆ ಇರುವ ಫೋಟೋ ಕಾಣಿಸಿದೆ. ಅನೇಕರು ಆರಾಧ್ಯ ಹಾಗೂ ತಾತ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೋ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು, ಇದು ಐಶ್ವರ್ಯಾ ಅವರ ತಂದೆ ಕೃಷ್ಣರಾಜ್​ ರೈ ಜೊತೆ ಆರಾಧ್ಯಾ ಇರುವ ಫೋಟೋ ಎಂದು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ವಿಚಾರ ಚರ್ಚೆ ಆಗುತ್ತಿದೆ. ಆದರೆ, ಇದನ್ನು ದಂಪತಿ ಒಪ್ಪಿಕೊಂಡಿಲ್ಲ. ಅಮಿತಾಭ್ ಬಚ್ಚನ್ ಅವರು ಈ ಬಗ್ಗೆ ಓಪನ್ ಆಗಿ ಲೆಟರ್ ಬರೆದು ಈ ವಿಚಾರವನ್ನು ಅಲ್ಲಗಳೆದಿದ್ದಾರೆ. ಅಭಿಷೇಕ್ ಅವರು ಆರಾಧ್ಯಾಳನ್ನು ನೋಡಿಕೊಳ್ಳುತ್ತಿರುವ ಐಶ್ವರ್ಯಾಗೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಐಶ್ವರ್ಯಾ ರೈಗೆ ಓಪನ್ ಆಗಿ ಧನ್ಯವಾದ ಹೇಳಿದ ಅಭಿಷೇಕ್; ಕಾರಣವೇನು?

ಐಶ್ವರ್ಯಾ ರೈ ಅವರು ಸದ್ಯ ಅಭಿಷೇಕ್ ಅವರಿಂದ ದೂರವೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಆರಾಧ್ಯಾ ಬಚ್ಚನ್ ಬರ್ತ್​ಡೇ ಆಚರಿಸಿಕೊಂಡಳು. ಆದರೆ, ಅಭಿಷೇಕ್ ಬಚ್ಚನ್ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?