AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​

Mani Ratnam | Viral Video: ‘ನನಗೆ ಪೊನ್ನಿಯಿನ್​ ಸೆಲ್ವನ್ ಚಿತ್ರ ಯಾಕೆ ವಿಶೇಷ ಎಂದರೆ ಇದಕ್ಕೆ ನಿರ್ದೇಶನ ಮಾಡಿರುವುದು ಮಣಿರತ್ನಂ. ಇಂಥ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಐಶ್ವರ್ಯಾ ರೈ ಹೇಳಿದ್ದಾರೆ.

Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​
ಮಣಿರತ್ನಂ, ಐಶ್ವರ್ಯಾ ರೈ
TV9 Web
| Edited By: |

Updated on:Sep 27, 2022 | 12:40 PM

Share

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಬಗ್ಗೆ ನಟಿ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಎಲ್ಲಿಲ್ಲದ ಗೌರವ. ಅವರು ನಟಿಸಿದ ಮೊದಲ ಚಿತ್ರ ‘ಇರುವರ್​’ಗೆ ನಿರ್ದೇಶನ ಮಾಡಿದ್ದೇ ಮಣಿರತ್ನಂ. ಆ ಸಿನಿಮಾ ತೆರೆಕಂಡಿದ್ದು 1997ರಲ್ಲಿ. ಆ ನಂತರ ಐಶ್ವರ್ಯಾ ರೈ (Aishwarya Rai) ಹಿಂದಿರುಗಿ ನೋಡಲೇ ಇಲ್ಲ. ಬ್ಯಾಕ್​ ಟು ಬ್ಯಾಕ್​ ಯಶಸ್ಸು ಗಳಿಸುತ್ತ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಬಾಲಿವುಡ್​ನಲ್ಲಿ ಸ್ಟಾರ್​ ನಟಿಯಾಗಿ ಮೆರೆದರು. ಈಗ ‘ಪೊನ್ನಿಯಿನ್​ ಸೆಲ್ವನ್​’ (Ponniyin Selvan) ಚಿತ್ರದಲ್ಲಿ ಐಶ್ವರ್ಯಾ ರೈ ಮತ್ತು ಮಣಿರತ್ನಂ ಅವರು ಮತ್ತೆ ಜೊತೆಯಾಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದ ವೇಳೆ ಮಣಿರತ್ನಂ ಕಾಲಿಗೆ ಐಶ್ವರ್ಯಾ ನಮಸ್ಕರಿಸಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

‘ಪೊನ್ನಿಯಿನ್​ ಸೆಲ್ವನ್​’ ಚಿತ್ರ ಸೆಪ್ಟೆಂಬರ್​ 30ರಂದು ಬಿಡುಗಡೆ ಆಗುತ್ತಿದೆ. ತಮಿಳಿನ ಈ ಸಿನಿಮಾ ಹಿಂದಿ, ಕನ್ನಡ, ಮಲಯಾಳಂ ಹಾಗೂ ತೆಲುಗು ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆ ಕಾರಣದಿಂದ ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಸೋಮವಾರ (ಸೆ.26) ದೆಹಲಿಯಲ್ಲಿ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಐಶ್ವರ್ಯಾ ರೈ ಬಚ್ಚನ್​ ಅವರು ತಮ್ಮ ಗುರು ಮಣಿರತ್ನಂ ಬಗ್ಗೆ ಮಾತನಾಡಿದರು.

ಇದನ್ನೂ ಓದಿ
Image
30 ವರ್ಷಗಳ ಹಿಂದೆ ಐಶ್ವರ್ಯಾ ರೈ ಹೇಗಿದ್ರು ಗೊತ್ತಾ? ಇಲ್ಲಿದೆ ಫೋಟೋ
Image
ಪಾರ್ಟಿಯಲ್ಲಿ ಸಲ್ಮಾನ್​ ಖಾನ್​ ಕಂಡು ಗಂಡನಿಂದಲೇ ಅಂತರ ಕಾಯ್ದುಕೊಂಡ ಐಶ್ವರ್ಯಾ ರೈ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ
Image
ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

ಮಣಿರತ್ನಂ ಜೊತೆಗೆ ಐಶ್ವರ್ಯಾ ರೈ ಬಚ್ಚನ್​ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು. ಈ ಹಿಂದೆ ‘ಇರುವರ್​’, ‘ಗುರು’ ಮತ್ತು ‘ರಾವಣ್​’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ‘ಪೊನ್ನಿಯಿನ್​ ಸೆಲ್ವನ್​’ ಚಿತ್ರದಲ್ಲಿ ಜಯಂ ರವಿ, ಚಿಯಾನ್​ ವಿಕ್ರಮ್​, ತ್ರಿಷಾ ಕೃಷ್ಣನ್​, ಕಾರ್ತಿ, ಪ್ರಕಾಶ್​ ರಾಜ್​​ ಮುಂತಾದವರು ನಟಿಸಿದ್ದಾರೆ. ಎರಡು ಭಾಗದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈಗ ಮೊದಲ ಭಾಗ ರಿಲೀಸ್​ ಆಗುತ್ತಿದೆ. ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕೃತಿಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ.

‘ಈ ರೀತಿಯ ಅನೇಕ ದೊಡ್ಡ ಸಿನಿಮಾಗಳಲ್ಲಿ ನಟಿಸುವ ಅದೃಷ್ಟ ನನ್ನದಾಗಿತ್ತು. ಅವುಗಳ ನಡುವೆ ಈ ಚಿತ್ರ ಯಾಕೆ ವಿಶೇಷ ಎಂದರೆ ಇದಕ್ಕೆ ನಿರ್ದೇಶನ ಮಾಡಿರುವುದು ಮಣಿರತ್ನಂ. ಅವಕಾಶ ನೀಡಿದ್ದಾಗಿ ಧನ್ಯವಾದಗಳು’ ಎಂದು ಐಶ್ವರ್ಯಾ ರೈ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಚೆನ್ನೈನಲ್ಲಿ ಈ ಚಿತ್ರದ ಟ್ರೇಲರ್​ ಲಾಂಚ್​ ಕಾರ್ಯಕ್ರಮ ನಡೆದಾಗ ರಜನಿಕಾಂತ್​ ಅವರು ಮುಖ್ಯ ಅಥಿತಿಯಾಗಿ ಬಂದಿದ್ದರು. ಆಗ ಅವರ ಕಾಲಿಗೆ ನಮಸ್ಕರಿಸುವ ಮೂಲಕ ಐಶ್ವರ್ಯಾ ರೈ ವಿನಯವಂತಿಕೆ ಮೆರೆದಿದ್ದರು. ಆ ವಿಡಿಯೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:40 pm, Tue, 27 September 22

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್