AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​

Mani Ratnam | Viral Video: ‘ನನಗೆ ಪೊನ್ನಿಯಿನ್​ ಸೆಲ್ವನ್ ಚಿತ್ರ ಯಾಕೆ ವಿಶೇಷ ಎಂದರೆ ಇದಕ್ಕೆ ನಿರ್ದೇಶನ ಮಾಡಿರುವುದು ಮಣಿರತ್ನಂ. ಇಂಥ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಐಶ್ವರ್ಯಾ ರೈ ಹೇಳಿದ್ದಾರೆ.

Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​
ಮಣಿರತ್ನಂ, ಐಶ್ವರ್ಯಾ ರೈ
TV9 Web
| Edited By: |

Updated on:Sep 27, 2022 | 12:40 PM

Share

ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಬಗ್ಗೆ ನಟಿ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಎಲ್ಲಿಲ್ಲದ ಗೌರವ. ಅವರು ನಟಿಸಿದ ಮೊದಲ ಚಿತ್ರ ‘ಇರುವರ್​’ಗೆ ನಿರ್ದೇಶನ ಮಾಡಿದ್ದೇ ಮಣಿರತ್ನಂ. ಆ ಸಿನಿಮಾ ತೆರೆಕಂಡಿದ್ದು 1997ರಲ್ಲಿ. ಆ ನಂತರ ಐಶ್ವರ್ಯಾ ರೈ (Aishwarya Rai) ಹಿಂದಿರುಗಿ ನೋಡಲೇ ಇಲ್ಲ. ಬ್ಯಾಕ್​ ಟು ಬ್ಯಾಕ್​ ಯಶಸ್ಸು ಗಳಿಸುತ್ತ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಬಾಲಿವುಡ್​ನಲ್ಲಿ ಸ್ಟಾರ್​ ನಟಿಯಾಗಿ ಮೆರೆದರು. ಈಗ ‘ಪೊನ್ನಿಯಿನ್​ ಸೆಲ್ವನ್​’ (Ponniyin Selvan) ಚಿತ್ರದಲ್ಲಿ ಐಶ್ವರ್ಯಾ ರೈ ಮತ್ತು ಮಣಿರತ್ನಂ ಅವರು ಮತ್ತೆ ಜೊತೆಯಾಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದ ವೇಳೆ ಮಣಿರತ್ನಂ ಕಾಲಿಗೆ ಐಶ್ವರ್ಯಾ ನಮಸ್ಕರಿಸಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

‘ಪೊನ್ನಿಯಿನ್​ ಸೆಲ್ವನ್​’ ಚಿತ್ರ ಸೆಪ್ಟೆಂಬರ್​ 30ರಂದು ಬಿಡುಗಡೆ ಆಗುತ್ತಿದೆ. ತಮಿಳಿನ ಈ ಸಿನಿಮಾ ಹಿಂದಿ, ಕನ್ನಡ, ಮಲಯಾಳಂ ಹಾಗೂ ತೆಲುಗು ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆ ಕಾರಣದಿಂದ ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಸೋಮವಾರ (ಸೆ.26) ದೆಹಲಿಯಲ್ಲಿ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಐಶ್ವರ್ಯಾ ರೈ ಬಚ್ಚನ್​ ಅವರು ತಮ್ಮ ಗುರು ಮಣಿರತ್ನಂ ಬಗ್ಗೆ ಮಾತನಾಡಿದರು.

ಇದನ್ನೂ ಓದಿ
Image
30 ವರ್ಷಗಳ ಹಿಂದೆ ಐಶ್ವರ್ಯಾ ರೈ ಹೇಗಿದ್ರು ಗೊತ್ತಾ? ಇಲ್ಲಿದೆ ಫೋಟೋ
Image
ಪಾರ್ಟಿಯಲ್ಲಿ ಸಲ್ಮಾನ್​ ಖಾನ್​ ಕಂಡು ಗಂಡನಿಂದಲೇ ಅಂತರ ಕಾಯ್ದುಕೊಂಡ ಐಶ್ವರ್ಯಾ ರೈ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ
Image
ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

ಮಣಿರತ್ನಂ ಜೊತೆಗೆ ಐಶ್ವರ್ಯಾ ರೈ ಬಚ್ಚನ್​ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು. ಈ ಹಿಂದೆ ‘ಇರುವರ್​’, ‘ಗುರು’ ಮತ್ತು ‘ರಾವಣ್​’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ‘ಪೊನ್ನಿಯಿನ್​ ಸೆಲ್ವನ್​’ ಚಿತ್ರದಲ್ಲಿ ಜಯಂ ರವಿ, ಚಿಯಾನ್​ ವಿಕ್ರಮ್​, ತ್ರಿಷಾ ಕೃಷ್ಣನ್​, ಕಾರ್ತಿ, ಪ್ರಕಾಶ್​ ರಾಜ್​​ ಮುಂತಾದವರು ನಟಿಸಿದ್ದಾರೆ. ಎರಡು ಭಾಗದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈಗ ಮೊದಲ ಭಾಗ ರಿಲೀಸ್​ ಆಗುತ್ತಿದೆ. ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕೃತಿಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ.

‘ಈ ರೀತಿಯ ಅನೇಕ ದೊಡ್ಡ ಸಿನಿಮಾಗಳಲ್ಲಿ ನಟಿಸುವ ಅದೃಷ್ಟ ನನ್ನದಾಗಿತ್ತು. ಅವುಗಳ ನಡುವೆ ಈ ಚಿತ್ರ ಯಾಕೆ ವಿಶೇಷ ಎಂದರೆ ಇದಕ್ಕೆ ನಿರ್ದೇಶನ ಮಾಡಿರುವುದು ಮಣಿರತ್ನಂ. ಅವಕಾಶ ನೀಡಿದ್ದಾಗಿ ಧನ್ಯವಾದಗಳು’ ಎಂದು ಐಶ್ವರ್ಯಾ ರೈ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಚೆನ್ನೈನಲ್ಲಿ ಈ ಚಿತ್ರದ ಟ್ರೇಲರ್​ ಲಾಂಚ್​ ಕಾರ್ಯಕ್ರಮ ನಡೆದಾಗ ರಜನಿಕಾಂತ್​ ಅವರು ಮುಖ್ಯ ಅಥಿತಿಯಾಗಿ ಬಂದಿದ್ದರು. ಆಗ ಅವರ ಕಾಲಿಗೆ ನಮಸ್ಕರಿಸುವ ಮೂಲಕ ಐಶ್ವರ್ಯಾ ರೈ ವಿನಯವಂತಿಕೆ ಮೆರೆದಿದ್ದರು. ಆ ವಿಡಿಯೋ ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:40 pm, Tue, 27 September 22

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​