AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್

ವಿಶ್ವವಿಖ್ಯಾತ ಕಾನ್ ಫೆಸ್ಟಿವಲ್ ಐಶ್ವರ್ಯಾ ರೈ ಬಚ್ಚನ್ ಅವರ ನೀಲಿ ಗೌನ್ ರೆಡ್ ಕಾರ್ಪೆಟ್ ಲುಕ್ ಭಾರಿ ಚರ್ಚೆಗೆ ಕಾರಣವಾಗಿದೆ. ಕೆಲವರು ಹೊಗಳಿದರೆ, ವಯಸ್ಸು ಮತ್ತು ಶೈಲಿಯನ್ನು ಆಧರಿಸಿ ಟ್ರೋಲ್‌ಗಳು ನೆಗೆಟಿವ್ ಕಮೆಂಟ್ ಮಾಡಿದ್ದವು. ಇದಕ್ಕೆ ನಟಿ ಕಂಗನಾ ರನೌತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಐಶ್ವರ್ಯಾ ಅವರ ಫ್ಯಾಷನ್ ಆಯ್ಕೆಯನ್ನು ಬೆಂಬಲಿಸಿ, ಟ್ರೋಲರ್‌ಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ವೈಯಕ್ತಿಕ ಆಯ್ಕೆ ಎಂದು ಕಂಗನಾ ಪ್ರತಿಪಾದಿಸಿದ್ದಾರೆ.

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್
ಕಂಗನಾ -ಐಶ್ವರ್ಯಾImage Credit source: Cannes Film Festival
 ಶ್ರೀಲಕ್ಷ್ಮೀ ಎಚ್
| Edited By: |

Updated on:May 25, 2026 | 11:07 AM

Share

ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕೆಲವು ನೆಟ್ಟಿಗರು ಐಶ್ವರ್ಯಾ ಅವರ ನೀಲಿ ಬಣ್ಣದ ಗೌನ್ ಸೌಂದರ್ಯವನ್ನು ಹೊಗಳುತ್ತಿದ್ದರೆ, ಇನ್ನು ಕೆಲವರು ಅವರ ವಯಸ್ಸು ಮತ್ತು ಸ್ಟೈಲಿಂಗ್ ಅನ್ನು ಆಧರಿಸಿ ನೆಗೆಟಿವ್ ಕಾಮೆಂಟ್ ಮಾಡುತ್ತಿದ್ದಾರೆ. ಈಗ ಈ ಟ್ರೋಲರ್‌ಗಳ ವಿರುದ್ಧ ನಟಿ ಹಾಗೂ ಸಂಸದೆ ಕಂಗನಾ ರನೌತ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಐಶ್ವರ್ಯಾ ಅವರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿರುವ ಕಂಗನಾ ರನೌತ್, ಟ್ರೋಲರ್‌ಗಳಿಗೆ ಬಲವಾದ ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾಷನ್ ಮತ್ತು ಶೈಲಿ ಎಂಬುದು ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಆಯ್ಕೆ ಹಾಗೂ ಅಭಿವ್ಯಕ್ತಿ. ಯಾವುದೇ ಮಹಿಳೆ ಇತರರನ್ನು ಮೆಚ್ಚಿಸಲು ಮಾತ್ರ ಬದುಕುವುದಿಲ್ಲ. ಈ ಲುಕ್‌ನಲ್ಲಿ ಐಶ್ವರ್ಯಾ ಅದ್ಭುತವಾಗಿ ಕಾಣುತ್ತಿದ್ದಾರೆ. ಕೆಲವರು ಅವಳನ್ನು ವಿಭಿನ್ನವಾಗಿ ನೋಡಲು ಬಯಸಿದರೆ, ಅವರು ಮೊದಲು ತಮ್ಮನ್ನು ತಾವು ಕನ್ನಡಿಯಲಿ ನೋಡಿಕೊಳ್ಳಬೇಕು. ಐಶ್ವರ್ಯಾ ಯಾರನ್ನೂ ಇಂಪ್ರೆಸ್ ಮಾಡಲು ರೆಡ್ ಕಾರ್ಪೆಟ್‌ಗೆ ಬರುವುದಿಲ್ಲ, ಅವರು ತಮ್ಮ ಆತ್ಮವಿಶ್ವಾಸ ಮತ್ತು ವಿಶಿಷ್ಟ ಗುರುತಿನಿಂದ ಅಲ್ಲಿ ನಿಲ್ಲುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಲಗುವ ಮುನ್ನ ಐಶ್ವರ್ಯಾಗೆ ಮೂರು ಬಾರಿ ಕ್ಷಮೆ ಕೇಳುತ್ತಾರೆ ಅಭಿಷೇಕ್ ಬಚ್ಚನ್

ವಯಸ್ಸನ್ನು ಮುಂದಿಟ್ಟುಕೊಂಡು ನೆಗೆಟಿವ್ ಕಾಮೆಂಟ್ ಮಾಡಿದವರಿಗೆ ಕಂಗನಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ಜನರಿಗೆ ರೆಡ್ ಕಾರ್ಪೆಟ್ ಮೇಲೆ ವಯಸ್ಸಾದ ಮಹಿಳೆಯರನ್ನು ನೋಡಿ ಅಭ್ಯಾಸವಿಲ್ಲದಿದ್ದರೆ, ಅವರು ಈಗಲೇ ಅದಕ್ಕೆ ಒಗ್ಗಿಕೊಳ್ಳುವುದು ಒಳ್ಳೆಯದು. ಐಶ್ವರ್ಯಾ ರೈ ಬಚ್ಚನ್ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲ ಕಾನ್ ಫೆಸ್ಟ್​ನ ಭಾಗವಾಗಿದ್ದಾರೆ. ಅವರ ರೆಡ್ ಕಾರ್ಪೆಟ್ ಲುಕ್ ಪ್ರತಿ ವರ್ಷವೂ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತದೆ. ಪ್ರಪಂಚದಾದ್ಯಂತದ ಫ್ಯಾಷನಿಸ್ಟರು ಅವರ ಸ್ಟೈಲಿಂಗ್‌ಗಾಗಿ ಕಾಯುತ್ತಿರುತ್ತಾರೆ” ಎಂದು ಹೇಳುವ ಮೂಲಕ ಕಂಗನಾ ಅವರು ಐಶ್ವರ್ಯಾ ಬೆಂಬಲಕ್ಕೆ ನಿಂತಿದ್ದಾರೆ.

ಕಾನ್ 2026ರ ವೇದಿಕೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರು ಪ್ರಸಿದ್ಧ ವಿನ್ಯಾಸಕ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ನೀಲಿ ಬಣ್ಣದ ವಿಶೇಷ ಗೌನ್ ಧರಿಸಿದ್ದರು. ವರದಿಗಳ ಪ್ರಕಾರ, ಈ ರಾಯಲ್ ಉಡುಪನ್ನು ಸಿದ್ಧಪಡಿಸಲು ಬರೋಬ್ಬರಿ 1500 ಗಂಟೆಗಳು ಬೇಕಾಗಿದ್ದವಂತೆ. ಆದರೆ, ಈ ವಿಶಿಷ್ಟ ಲುಕ್ ಹೊರಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Mon, 25 May 26

Follow Us
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್