AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ ರೇಡ್​ ಮೇಲೆ ಸಿದ್ಧವಾಗುತ್ತಿದೆ ಸಿನಿಮಾ; 250 ಕೋಟಿ ರೂಪಾಯಿ ಕಥೆ ಹೇಳಲಿದ್ದಾರೆ ಅಜಯ್​ ದೇವಗನ್​

ಸುಗಂಧ ದ್ರವ್ಯ​ ಉದ್ಯಮಿ ಪೀಯುಷ್​ ಜೈನ್​ ಎಂಬುವರ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿ ಬಂದಿತ್ತು. ಈ ಉದ್ಯಮಿಯ ಮನೆ ಮೇಲೆ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 40 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಕಾನ್ಪುರ ರೇಡ್​ ಮೇಲೆ ಸಿದ್ಧವಾಗುತ್ತಿದೆ ಸಿನಿಮಾ; 250 ಕೋಟಿ ರೂಪಾಯಿ ಕಥೆ ಹೇಳಲಿದ್ದಾರೆ ಅಜಯ್​ ದೇವಗನ್​
ಅಜಯ್​ ದೇವಗನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 29, 2021 | 2:35 PM

ನಟ ಅಜಯ್​ ದೇವಗನ್​ ಅಭಿನಯದ ‘ರೇಡ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅಕ್ರಮ ಹಣ ಸಂಪಾದನೆ ಮಾಡಿದವರ ಮನೆ ಮೇಲೆ ರೇಡ್​ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಚಿತ್ರದ ಸೀಕ್ವೆಲ್​ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಇದಕ್ಕೆ ಈಗ ಕಥೆ ಸಿಕ್ಕಿದೆ. ಇತ್ತೀಚೆಗೆ ಕಾನ್ಪುರದಲ್ಲಿ ನಡೆದ ರೇಡ್​ ಕಥೆಯನ್ನು ಆಧರಿಸಿ ‘ರೇಡ್​ 2’ ತೆರೆಗೆ ಬರುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ಸುಗಂಧ ದ್ರವ್ಯ​ ಉದ್ಯಮಿ ಪೀಯುಷ್​ ಜೈನ್​ ಎಂಬುವರ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿ ಬಂದಿತ್ತು. ಈ ಉದ್ಯಮಿಯ ಮನೆ ಮೇಲೆ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 40 ಗಂಟೆಗಳ ಕಾಲ ಶೋಧ ನಡೆಸಿದ್ದರು. ಈ ವೇಳೆ 250 ಕೋಟಿ ರೂಪಾಯಿಗೂ ಅಧಿಕ ನಗದು, 250 ಕೆಜಿ ಬೆಳ್ಳಿ, 25 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಪೀಯುಷ್​ ಬರೋಬ್ಬರಿ 40 ಕಂಪನಿಗಳಿಗೆ ಮಾಲೀಕರಾಗಿದ್ದಾರೆ. ಇದರಲ್ಲಿ ಹಲವು ಕಂಪನಿಗಳು ಬೇನಾಮಿ ಕಂಪನಿಗಳಾಗಿವೆ. ಈ ಉದ್ಯಮಿಯ ಬಳಿ ಡ್ರಮ್​ಗಟ್ಟಲೆ ಶ್ರೀಗಂಧದ ಎಣ್ಣೆಯೂ ಸಿಕ್ಕಿದೆ. ರಟ್ಟಿನ ಬಾಕ್ಸ್​ಗಳಲ್ಲೂ 2000 ರೂಪಾಯಿ ನೋಟಿನ ಬಂಡಲ್​​ಗಳು ಪತ್ತೆಯಾಗಿವೆ.

ಈ ಘಟನೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅಲ್ಲದೆ, ಸಾಕಷ್ಟು ಕುತೂಹಲ ಮೂಡಿಸಿದೆ. 250 ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ಪೀಯುಷ್​ ಕೂಡಿಟ್ಟಿದ್ದು ಹೇಗೆ ಎಂಬಿತ್ಯಾದಿ ಪ್ರಶ್ನೆಗಳು ಮೂಡಿದ್ದವು. ಈ ಕಾರಣಕ್ಕೆ ‘ರೇಡ್​ 2’ ಸಿನಿಮಾದಲ್ಲಿ ಉತ್ತರ ಸಿಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಚಾರದ ಬಗ್ಗೆ  ‘ರೇಡ್’ ಚಿತ್ರದ​ ನಿರ್ಮಾಪಕ ಕುಮಾರ್​ ಪಾಠಕ್​ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ವಾರಾಣಸಿಯಲ್ಲಿ ನಡೆದ ‘ಕಾಶಿ ಫಿಲ್ಮ್ ಫೆಸ್ಟಿವಲ್’ನಲ್ಲಿ ಮಾತನಾಡಿದ ಕುಮಾರ್​ ಪಾಠಕ್, ‘ರೈಡ್ 2’ ನಿರ್ಮಿಸುವುದಾಗಿ ಹೇಳಿದರು. ಈ ಚಿತ್ರವು ಪೀಯುಷ್​ ಜೈನ್ ಅವರ ಮನೆ ಮತ್ತು ಕಾರ್ಖಾನೆಯ ಮೇಲಿನ ದಾಳಿಯನ್ನು ಆಧರಿಸಿ ಸಿದ್ಧಗೊಳ್ಳಲಿದೆ. ಈ ಸಿನಿಮಾದಲ್ಲಿ ಇನ್ನೂ ಯಾವೆಲ್ಲ ವಿಚಾರ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಕಾನ್ಪುರದ ಉದ್ಯಮಿ ಮನೆ ಮೇಲೆ ಜಿಎಸ್​ಟಿ ಅಧಿಕಾರಿಗಳಿಂದ ದಾಳಿ; ನಗದು ಎಣಿಕೆಯೇ ಮುಗಿಯುತ್ತಿಲ್ಲ, ಬೀಗ ತೆಗೆಯಲೂ ಸಾಧ್ಯವಾಗುತ್ತಿಲ್ಲ !

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO