AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ ರೇಡ್​ ಮೇಲೆ ಸಿದ್ಧವಾಗುತ್ತಿದೆ ಸಿನಿಮಾ; 250 ಕೋಟಿ ರೂಪಾಯಿ ಕಥೆ ಹೇಳಲಿದ್ದಾರೆ ಅಜಯ್​ ದೇವಗನ್​

ಸುಗಂಧ ದ್ರವ್ಯ​ ಉದ್ಯಮಿ ಪೀಯುಷ್​ ಜೈನ್​ ಎಂಬುವರ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿ ಬಂದಿತ್ತು. ಈ ಉದ್ಯಮಿಯ ಮನೆ ಮೇಲೆ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 40 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಕಾನ್ಪುರ ರೇಡ್​ ಮೇಲೆ ಸಿದ್ಧವಾಗುತ್ತಿದೆ ಸಿನಿಮಾ; 250 ಕೋಟಿ ರೂಪಾಯಿ ಕಥೆ ಹೇಳಲಿದ್ದಾರೆ ಅಜಯ್​ ದೇವಗನ್​
ಅಜಯ್​ ದೇವಗನ್
TV9 Web
| Edited By: |

Updated on: Dec 29, 2021 | 2:35 PM

Share

ನಟ ಅಜಯ್​ ದೇವಗನ್​ ಅಭಿನಯದ ‘ರೇಡ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅಕ್ರಮ ಹಣ ಸಂಪಾದನೆ ಮಾಡಿದವರ ಮನೆ ಮೇಲೆ ರೇಡ್​ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಚಿತ್ರದ ಸೀಕ್ವೆಲ್​ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಇದಕ್ಕೆ ಈಗ ಕಥೆ ಸಿಕ್ಕಿದೆ. ಇತ್ತೀಚೆಗೆ ಕಾನ್ಪುರದಲ್ಲಿ ನಡೆದ ರೇಡ್​ ಕಥೆಯನ್ನು ಆಧರಿಸಿ ‘ರೇಡ್​ 2’ ತೆರೆಗೆ ಬರುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ಸುಗಂಧ ದ್ರವ್ಯ​ ಉದ್ಯಮಿ ಪೀಯುಷ್​ ಜೈನ್​ ಎಂಬುವರ ವಿರುದ್ಧ ತೆರಿಗೆ ವಂಚನೆ ಆರೋಪ ಕೇಳಿ ಬಂದಿತ್ತು. ಈ ಉದ್ಯಮಿಯ ಮನೆ ಮೇಲೆ ಕೇಂದ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 40 ಗಂಟೆಗಳ ಕಾಲ ಶೋಧ ನಡೆಸಿದ್ದರು. ಈ ವೇಳೆ 250 ಕೋಟಿ ರೂಪಾಯಿಗೂ ಅಧಿಕ ನಗದು, 250 ಕೆಜಿ ಬೆಳ್ಳಿ, 25 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಪೀಯುಷ್​ ಬರೋಬ್ಬರಿ 40 ಕಂಪನಿಗಳಿಗೆ ಮಾಲೀಕರಾಗಿದ್ದಾರೆ. ಇದರಲ್ಲಿ ಹಲವು ಕಂಪನಿಗಳು ಬೇನಾಮಿ ಕಂಪನಿಗಳಾಗಿವೆ. ಈ ಉದ್ಯಮಿಯ ಬಳಿ ಡ್ರಮ್​ಗಟ್ಟಲೆ ಶ್ರೀಗಂಧದ ಎಣ್ಣೆಯೂ ಸಿಕ್ಕಿದೆ. ರಟ್ಟಿನ ಬಾಕ್ಸ್​ಗಳಲ್ಲೂ 2000 ರೂಪಾಯಿ ನೋಟಿನ ಬಂಡಲ್​​ಗಳು ಪತ್ತೆಯಾಗಿವೆ.

ಈ ಘಟನೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅಲ್ಲದೆ, ಸಾಕಷ್ಟು ಕುತೂಹಲ ಮೂಡಿಸಿದೆ. 250 ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ಪೀಯುಷ್​ ಕೂಡಿಟ್ಟಿದ್ದು ಹೇಗೆ ಎಂಬಿತ್ಯಾದಿ ಪ್ರಶ್ನೆಗಳು ಮೂಡಿದ್ದವು. ಈ ಕಾರಣಕ್ಕೆ ‘ರೇಡ್​ 2’ ಸಿನಿಮಾದಲ್ಲಿ ಉತ್ತರ ಸಿಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಚಾರದ ಬಗ್ಗೆ  ‘ರೇಡ್’ ಚಿತ್ರದ​ ನಿರ್ಮಾಪಕ ಕುಮಾರ್​ ಪಾಠಕ್​ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ವಾರಾಣಸಿಯಲ್ಲಿ ನಡೆದ ‘ಕಾಶಿ ಫಿಲ್ಮ್ ಫೆಸ್ಟಿವಲ್’ನಲ್ಲಿ ಮಾತನಾಡಿದ ಕುಮಾರ್​ ಪಾಠಕ್, ‘ರೈಡ್ 2’ ನಿರ್ಮಿಸುವುದಾಗಿ ಹೇಳಿದರು. ಈ ಚಿತ್ರವು ಪೀಯುಷ್​ ಜೈನ್ ಅವರ ಮನೆ ಮತ್ತು ಕಾರ್ಖಾನೆಯ ಮೇಲಿನ ದಾಳಿಯನ್ನು ಆಧರಿಸಿ ಸಿದ್ಧಗೊಳ್ಳಲಿದೆ. ಈ ಸಿನಿಮಾದಲ್ಲಿ ಇನ್ನೂ ಯಾವೆಲ್ಲ ವಿಚಾರ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಕಾನ್ಪುರದ ಉದ್ಯಮಿ ಮನೆ ಮೇಲೆ ಜಿಎಸ್​ಟಿ ಅಧಿಕಾರಿಗಳಿಂದ ದಾಳಿ; ನಗದು ಎಣಿಕೆಯೇ ಮುಗಿಯುತ್ತಿಲ್ಲ, ಬೀಗ ತೆಗೆಯಲೂ ಸಾಧ್ಯವಾಗುತ್ತಿಲ್ಲ !

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ