Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೈತಾನ್​’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಹೊಸ ದಾಖಲೆ ಬರೆದ ಅಜಯ್ ದೇವಗನ್

ಅಜಯ್ ದೇವಗನ್ ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಭಿನ್ನತೆ ತೋರುತ್ತಿದ್ದಾರೆ. ಇತ್ತೀಚೆಗೆ ಅವರು ‘ಶೈತಾನ್’ ಸಿನಿಮಾ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರಕ್ಕೆ ಈಗ ಸೀಕ್ವೆಲ್ ಬರುತ್ತಿದೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಮಾಹಿತಿ ಬರಬೇಕಿದೆ.

‘ಶೈತಾನ್​’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಹೊಸ ದಾಖಲೆ ಬರೆದ ಅಜಯ್ ದೇವಗನ್
Follow us
ರಾಜೇಶ್ ದುಗ್ಗುಮನೆ
|

Updated on: Aug 07, 2024 | 2:21 PM

ಅಜಯ್ ದೇವಗನ್ ನಟನೆಯ ‘ಶೈತಾನ್’ ಸಿನಿಮಾ ದೊಡ್ಡ ಗೆಲುವು ಕಂಡಿತು. ಈ ಚಿತ್ರದಿಂದ ಅವರಿಗೆ ಭರ್ಜರಿ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ಈಗ ಸೀಕ್ವೆಲ್ ಮಾಡಲು ತಂಡ ರೆಡಿ ಆಗಿದೆ. ಅಜಯ್ ದೇವಗನ್ ಅವರು ಸೀಕ್ವೆಲ್​ನಲ್ಲಿ ನಟಿಸಲಿದ್ದಾರೆ. ಈ ಮೂಲಕ ‘ಶೈತಾನ್’ ಫ್ರಾಂಚೈಸ್​ನ ಭಾಗವಾಗಿ ಅಜಯ್ ಇರಲಿದ್ದಾರೆ. ಇದರ ಜೊತೆಗೆ ಅವರು ವಿಶೇಷ ದಾಖಲೆಯನ್ನು ಕೂಡ ಬರೆದಿದ್ದಾರೆ.

ಈ ವರ್ಷ ರಿಲೀಸ್ ಆದ ‘ಶೈತಾನ್’ ಸಿನಿಮಾ ಮೆಚ್ಚುಗೆ ಪಡೆಯಿತು. ಬ್ಲ್ಯಾಕ್ ಮ್ಯಾಜಿಕ್​ನ ಕಥೆ ಈ ಚಿತ್ರದಲ್ಲಿ ಇತ್ತು. ಅಜಯ್ ದೇವಗನ್ ಈ ಚಿತ್ರಕ್ಕೆ ಹೀರೋ. ಜ್ಯೋತಿಕಾ ಅವರು ಅಜಯ್ ದೇವಗನ್ ಪತ್ನಿ ಪಾತ್ರದಲ್ಲಿ ಕಾಣಸಿಕೊಂಡಿದ್ದರು. ಆರ್​. ಮಾಧವನ್ ಅವರು ನೆಗೆಟಿವ್ ಶೇಡ್​ನ ಪಾತ್ರ ಮಾಡಿದ್ದರು. ಈಗ ‘ಶೈತಾನ್’ ಫ್ರಾಂಚೈಸ್ ಆಗಿ ಬದಲಾಗುತ್ತಿದೆ. ಭಾರತದ ಹೀರೋ ಒಬ್ಬರು ಅತಿ ಹೆಚ್ಚು ಫ್ರಾಂಚೈಸ್​​ಗಳಲ್ಲಿ ನಟಿಸಿದ ಖ್ಯಾತಿ ಅಜಯ್ ದೇವಗನ್​ಗೆ ಸಿಕ್ಕಿದೆ.

‘ಶೈತಾನ್ 2’ ಚಿತ್ರಕ್ಕೆ ಸ್ಕ್ರಿಪ್ಟ್ ಫೈನಲ್ ಆಗಿದೆ. ಅಜಯ್ ದೇವಗನ್ ಹಾಗೂ ಸಿನಿಮಾ ತಂಡದವರು ಮಾತುಕತೆ ನಡೆಸಿದ್ದು, ಈ ಸಿನಿಮಾ ಸೆಟ್ಟೇರಬೇಕು ಎಂದು ಆಶಿಸಿದ್ದಾರೆ. ಅಜಯ್ ದೇವಗನ್ ಅವರು ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಈ ಚಿತ್ರದ ಕೆಲಸದಲ್ಲೂ ತೊಡಗಿಕೊಳ್ಳಲಿದ್ದಾರೆ.

ಸದ್ಯ ಅಜಯ್ ದೇವಗನ್ ಹಲವು ಸಿನಿಮಾ ಸೀಕ್ವೆಲ್​ಗಳಲ್ಲಿ ನಟಿಸುತ್ತಿದ್ದಾರೆ. ‘ಸಿಂಗಂ ಅಗೇನ್’, ‘ರೇಡ್​ 2’ ‘ದೇ ದೇ ಪ್ಯಾರ್ ದೇ 2’ ಹಾಗೂ ‘ಸನ್ ಆಫ್ ಸರ್ದಾರ್ 2’ ಚಿತ್ರಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈಗ ಈ ಸಾಲಿಗೆ ‘ಶೈತಾನ್ 2’ ಕೂಡ ಸೇರ್ಪಡೆ ಆಗಿದೆ.

ಇದನ್ನೂ ಓದಿ: ಮೊದಲ ದಲಿತ ಕ್ರಿಕೇಟಿಗನ ಬಗ್ಗೆ ಬಯೋಪಿಕ್; ಮುಖ್ಯಭೂಮಿಕೆಯಲ್ಲಿ ಅಜಯ್ ದೇವಗನ್ 

ಅಜಯ್ ದೇವಗನ್ ಅವರು ಈ ಮೊದಲು ‘ಗೋಲ್​ಮಾಲ್’ (4 ಸಿನಿಮಾಗಳು), ‘ಸಿಂಗಂ’ (2 ಸಿನಿಮಾ), ‘ಧಮಾಲ್’ (3 ಸಿನಿಮಾಗಳಿದ್ದು ‘ಟೋಟಲ್ ಧಮಾಲ್​’ನಲ್ಲಿ ನಟನೆ), ‘ದೃಶ್ಯಂ’ (2 ಸಿನಿಮಾ) ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ