AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​ಗೆ ಸಿಹಿ ಸುದ್ದಿ ಕೊಟ್ಟ ಅಜಯ್​ ದೇವಗನ್​; ಏನಿದು ಲೇಟೆಸ್ಟ್​ ವಿಚಾರ?

ಮೋಹನ್​ಲಾಲ್​ ನಟನೆಯ ‘ದೃಶ್ಯಂ’ ಸಿನಿಮಾ 2013ರಲ್ಲಿ ತೆರೆಗೆ ಬಂದು ಸೂಪರ್ ಹಿಟ್​ ಆಗಿತ್ತು. ಸಸ್ಪೆನ್ಸ್​ ಥ್ರಿಲ್ಲರ್​ ಕಥಾ ಹಂದರ ಹೊಂದಿದ್ದ ಈ ಸಿನಿಮಾದ ಸೀಕ್ವೆಲ್​ ‘ದೃಶ್ಯಂ 2’ ಶೀರ್ಷಿಕೆಯಲ್ಲಿ ಈ ವರ್ಷ ತೆರೆಗೆ ಬಂದಿದೆ.

ಫ್ಯಾನ್ಸ್​ಗೆ ಸಿಹಿ ಸುದ್ದಿ ಕೊಟ್ಟ ಅಜಯ್​ ದೇವಗನ್​; ಏನಿದು ಲೇಟೆಸ್ಟ್​ ವಿಚಾರ?
ಅಜಯ್​ ದೇವಗನ್​-ಟಬು
TV9 Web
| Edited By: |

Updated on: Sep 24, 2021 | 9:39 PM

Share

ಅಜಯ್​ ದೇವಗನ್​ ಇತ್ತೀಚೆಗೆ ಖಾಲಿ ಕುಳಿತ ಉದಾಹರಣೆಯೇ ಇಲ್ಲ. ಒಂದಿಲ್ಲೊಂದು ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದೇ ಇದ್ದಾರೆ. ಇನ್ನು, ಸಿನಿಮಾ ಆಯ್ಕೆಯಲ್ಲಿ ಅವರು ತುಂಬಾನೇ ಚ್ಯೂಸಿ. ಈ ಕಾರಣಕ್ಕೆ ಉತ್ತಮ ಸ್ಕ್ರಿಪ್ಟ್​ಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅಭಿಮಾನಿಗಳಿಗೆ ಅವರ ಕಡೆಯಿಂದ ಮತ್ತೊಂದು ಸುದ್ದಿ ಸಿಕ್ಕಿದೆ. ಅವರು ‘ದೃಶ್ಯಂ 2’ ಮಾಡೋಕೆ ರೆಡಿ ಆಗಿದ್ದಾರೆ.  

ಮೋಹನ್​ಲಾಲ್​ ನಟನೆಯ ‘ದೃಶ್ಯಂ’ ಸಿನಿಮಾ 2013ರಲ್ಲಿ ತೆರೆಗೆ ಬಂದು ಸೂಪರ್ ಹಿಟ್​ ಆಗಿತ್ತು. ಸಸ್ಪೆನ್ಸ್​ ಥ್ರಿಲ್ಲರ್​ ಕಥಾ ಹಂದರ ಹೊಂದಿದ್ದ ಈ ಸಿನಿಮಾದ ಸೀಕ್ವೆಲ್​ ‘ದೃಶ್ಯಂ 2’ ಶೀರ್ಷಿಕೆಯಲ್ಲಿ ಈ ವರ್ಷ ತೆರೆಗೆ ಬಂದಿದೆ. ಕೊವಿಡ್ ಕಾರಣದಿಂದ ಚಿತ್ರಮಂದಿರ ಓಪನ್​ ಆಗಿಲ್ಲ. ಹೀಗಾಗಿ, ಸಿನಿಮಾ ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಎಲ್ಲ ಕಡೆಗಳಿಂದ ಈ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಾಗಿ, ಈ ಮೊದಲು ದೃಶ್ಯಂ ರಿಮೇಕ್​ ಮಾಡಿದ್ದ ಚಿತ್ರತಂಡ ‘ದೃಶ್ಯಂ 2’ ಮಾಡೋಕೆ ರೆಡಿ ಆಗಿದೆ.

‘ದೃಶ್ಯಂ’ ಚಿತ್ರದ ಹಿಂದಿ ರಿಮೇಕ್​ನಲ್ಲಿ ಅಜಯ್​ ದೇವಗನ್​ ಕಾಣಿಸಿಕೊಂಡಿದ್ದರು. ಈಗ ಬಾಲಿವುಡ್​ನಲ್ಲಿ ಪಾರ್ಟ್​ 2 ಬರುತ್ತಿದೆ. ಅದಕ್ಕೆ ಅಜಯ್​ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ, ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿದ್ದು, ಡಿಸೆಂಬರ್​ ವೇಳೆಗೆ ಸಿನಿಮಾ ಶೂಟಿಂಗ್ ಪೂರ್ಣಗೊಳ್ಳಲಿದೆ. ಕುಮಾರ್​ ಪಾಟಕ್​ ‘ದೃಶ್ಯಂ 2’ನ ರಿಮೇಕ್​ ಹಕ್ಕನ್ನು ಪಡೆದಿದ್ದಾರೆ. ಇವರ ಮಗ ಅಭಿಷೇಕ್​ ಪಾಟಕ್​ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಮೊದಲ ಭಾಗವನ್ನು ನಿಶಿಕಾಂತ್​ ಕಾಮತ್​ ನಿರ್ದೇಶನ ಮಾಡಿದ್ದರು. ಆದರೆ, ಕಳೆದ ವರ್ಷ ಅವರು ನಿಧನ ಹೊಂದಿದರು. ಹೀಗಾಗಿ, ಬೇರೆ ನಿರ್ದೇಶಕರ ಆಯ್ಕೆ ಅನಿವಾರ್ಯವಾಗಿದೆ. ಈ ಕಾರಣಕ್ಕೆ ನಿರ್ಮಾಪಕರು ತಮ್ಮ ಮಗನನ್ನೇ ನಿರ್ದೇಶನಕ್ಕೆ ಇಳಿಸುವ ಆಲೋಚನೆಯಲ್ಲಿ ಇದ್ದಾರೆ. ಅಜಯ್​ ದೇವಗನ್​ ಜತೆ ಟಬು, ಶ್ರಿಯಾ ಶರಣ್​,  ಇಶಿಯಾ ದತ್ತ, ಮೃನಾಲ್​ ಜಾಧವ್​ ಮೊದಲಾದವರು ನಟಿಸುತ್ತಿದ್ದಾರೆ.

ಸದ್ಯ ಅಜಯ್​ ಮೇಡೇ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಅವರು ಮುಂದಿನ ತಿಂಗಳು ಮಾಸ್ಕೋಗೆ ತೆರಳಲಿದ್ದಾರೆ. ನಂತರ ಮೈದಾನ್​ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಇದಾದ ನಂತರವೇ ಅವರು ‘ದೃಶ್ಯಂ 2’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ:ಚಿಕ್ಕ ಹುಡುಗನಿಂದ RRR​ ಚಿತ್ರದ ದೊಡ್ಡ ಸೀಕ್ರೆಟ್​ ಬಯಲು; ಅಜಯ್​ ದೇವಗನ್​ ಪಾತ್ರದ ಗುಟ್ಟು ರಟ್ಟು 

ಮಾರ್ವೆಲ್ ಸರಣಿಯ ಹೊಸ ಚಿತ್ರಕ್ಕೂ, ಅಜಯ್​ ದೇವಗನ್​ರ ‘ಜಿಗರ್’ ಚಿತ್ರಕ್ಕೂ ಸಾಮ್ಯತೆ ಕಂಡುಹಿಡಿದ ಅಭಿಮಾನಿಗಳು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ