AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಲಿತ ಕ್ರಿಕೇಟಿಗನ ಬಗ್ಗೆ ಬಯೋಪಿಕ್; ಮುಖ್ಯಭೂಮಿಕೆಯಲ್ಲಿ ಅಜಯ್ ದೇವಗನ್

ಇತ್ತೀಚೆಗೆ ಬಯೋಪಿಕ್​ಗಳು ಹೆಚ್ಚೆಚ್ಚು ಸಿದ್ಧಗೊಳ್ಳುತ್ತಿವೆ. ನಿರ್ಮಾಪಕರು ಈ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಖ್ಯಾತ ನಾಮರ ಕಥೆಯನ್ನು ತೆರೆಮೇಲೆ ತರುವ ಪ್ರಯತ್ನ ನಡೆಯುತ್ತಿದೆ. ಈ ಪೈಕಿ ಕೆಲವು ಸಿನಿಮಾಗಳು ಗೆದ್ದು ಬೀಗಿವೆ. ಈಗ ಮೊದಲ ದಲಿತ ಕ್ರಿಕೆಟಿಗನ ಬಗ್ಗೆ ಸಿನಿಮಾ ರೆಡಿ ಆಗುತ್ತಿದೆ.

ಮೊದಲ ದಲಿತ ಕ್ರಿಕೇಟಿಗನ ಬಗ್ಗೆ ಬಯೋಪಿಕ್; ಮುಖ್ಯಭೂಮಿಕೆಯಲ್ಲಿ ಅಜಯ್ ದೇವಗನ್
ಅಜಯ್
Follow us
ರಾಜೇಶ್ ದುಗ್ಗುಮನೆ
|

Updated on: May 31, 2024 | 1:02 PM

ಅಜಯ್ ದೇವಗನ್ (Ajay Devgn) ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಭಿನ್ನತೆ ತೋರುತ್ತಿದ್ದಾರೆ. ಇತ್ತೀಚೆಗೆ ಅವರು ‘ಮೈದಾನ್’ ಸಿನಿಮಾ ಮೂಲಕ ಗಮನ ಸೆಳೆದಿದೆ. ಈ ಚಿತ್ರ ಅಂದುಕೊಂಡ ರೀತಿಯಲ್ಲಿ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ಆದರೆ, ಅಜಯ್ ದೇವಗನ್ ನಟನೆಗೆ ಎಲ್ಲರೂ ಮೆಚ್ಚುಗೆ ಸೂಚಿಸಿದರು. ಈಗ ಅವರ ಮತ್ತೊಂದು ಬಯೋಪಿಕ್ ಕೈಗೆತ್ತಿಕೊಂಡಿದ್ದಾರೆ. ಭಾರತದ ಮೊದಲ ದಲಿತ ಕ್ರಿಕೆಟಿಗ ಪಾಲ್ವಂಕರ್ ಬಾಲೂ ಅವರ ಬಯೋಪಿಕ್​ನಲ್ಲಿ ಅಜಯ್ ದೇವಗನ್ ನಟಿಸಲಿದ್ದಾರೆ.

ಇತ್ತೀಚೆಗೆ ಬಯೋಪಿಕ್​ಗಳು ಹೆಚ್ಚೆಚ್ಚು ಸಿದ್ಧಗೊಳ್ಳುತ್ತಿವೆ. ನಿರ್ಮಾಪಕರು ಈ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಖ್ಯಾತ ನಾಮರ ಕಥೆಯನ್ನು ತೆರೆಮೇಲೆ ತರುವ ಪ್ರಯತ್ನ ನಡೆಯುತ್ತಿದೆ. ಈ ಪೈಕಿ ಕೆಲವು ಸಿನಿಮಾಗಳು ಗೆದ್ದು ಬೀಗಿವೆ. ಈಗ ಮೊದಲ ದಲಿತ ಕ್ರಿಕೆಟಿಗನ ಬಗ್ಗೆ ಸಿನಿಮಾ ಮಾಡುತ್ತಿರುವುದಕ್ಕೆ ಒಂದು ವರ್ಗದ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಅಜಯ್ ದೇವಗನ್ ಅವರ ನಟನೆಯ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ ಎಂದು ಅನೆಕರು ನಂಬಿದ್ದಾರೆ.

ನಿರ್ಮಾಪಕಿ ಪ್ರೀತಿ ಸಿನ್ಹಾ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೌನ್ಸ್ ಮಾಡಿದ್ದಾರೆ. ಈ ಚಿತ್ರದಲ್ಲಿ ಪಾಲ್ವಂಕರ್ ಬಾಲೂ ಪಾತ್ರದಲ್ಲಿ ಅಜಯ್ ದೇವಗನ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತಿಗ್​ಮಂಶು ದುಲಿಯಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾಮಚಂದ್ರ ಗುಹಾ ಬರೆದ ‘ಎ ಕಾರ್ನರ್ ಆಫ್ ಎ ಫಾರೆನ್ ಫೀಲ್ಡ್’ ಪುಸ್ತಕ ಆಧರಿಸಿ ಸಿನಿಮಾದ ಕಥೆ ಸಿದ್ಧವಾಗಿದೆ. ಈ ಚಿತ್ರದ ಶೂಟಿಂಗ್ ಈ ವರ್ಷದ ಕೊನೆಯಲ್ಲಿ ಆರಂಭ ಆಗೋ ಸಾಧ್ಯತೆ ಇದೆ.

ಇದನ್ನೂ ಓದಿ: ಮುಂಬೈ, ಲಂಡನ್​ನಲ್ಲಿ ಐಷಾರಾಮಿ ಬಂಗಲೆ; ಅಜಯ್ ದೇವಗನ್​​ ಒಟ್ಟೂ ಆಸ್ತಿ ಎಷ್ಟು ಕೋಟಿ?

ಈ ವರ್ಷದ ಕೊನೆಯಲ್ಲಿ ಚಿತ್ರದ ಶೂಟಿಂಗ್ ಆರಂಭ ಆಗೋ ಸಾಧ್ಯತೆ ಇದೆ. ಪಾಲ್ವಂಕರ್ ಬಾಲೂ ಅವರು ದಲಿತ ಸಮುದಾಯದಲ್ಲಿ ಜನಿಸಿದರು. ಅವರು ಪುಣೆ ಕ್ರಿಕೆಟ್ ಕ್ಲಬ್​ನಲ್ಲಿ ಆರಂಭದಲ್ಲಿ ಗ್ರೌಂಡ್ ಕೀಪರ್ ಆಗಿದ್ದರು. ನಂತರ ಅವರು ಕ್ರಿಕೆಟರ್ ಆದರು. ಈ ಪ್ರಯಾಣದಲ್ಲಿ ಅವರು ಎಷ್ಟೊಂದು ಚಾಲೆಂಜ್​ಗಳನ್ನು ಎದುರಿಸಿದರು ಎನ್ನುವುದನ್ನು ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು