AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಸಿದ ‘ಶೈತಾನ್​’ ಸಿನಿಮಾ

‘ಶೈತಾನ್​’ ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್​ ಪ್ರತಿಕ್ರಿಯೆ ನೀಡಿದ್ದಾರೆ. ವಿಮರ್ಶಕರು ಕೂಡ ಈ ಚಿತ್ರಕ್ಕೆ ಉತ್ತಮ ಅಂಕ ನೀಡಿದ್ದಾರೆ. ಅಜಯ್​ ದೇವಗನ್​, ಆರ್​. ಮಾಧವನ್​ ಅವರ ಮುಖಾಮುಖಿ ಈ ಸಿನಿಮಾದಲ್ಲಿ ಆಗಿದೆ. ನಟಿ ಜ್ಯೋತಿಕಾ ಅವರಿಗೂ ಒಂದು ಪ್ರಮುಖ ಪಾತ್ರವಿದೆ. ಜಾನಕಿ ಬೋಡಿವಾಲಾ ಅವರ ನಟನೆ ಹೆಚ್ಚು ಹೈಲೈಟ್​ ಆಗಿದೆ.

ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಸಿದ ‘ಶೈತಾನ್​’ ಸಿನಿಮಾ
ಜಾನಕಿ ಬೋಡಿವಾಲಾ, ಆರ್​. ಮಾಧವನ್​, ಅಜಯ್​ ದೇವಗನ್​
ಮದನ್​ ಕುಮಾರ್​
|

Updated on: Mar 14, 2024 | 5:05 PM

Share

ಹಾರರ್​ ಸಿನಿಮಾಗಳನ್ನು ಇಷ್ಟಪಡುವ ದೊಡ್ಡ ಪ್ರೇಕ್ಷಕರ ವರ್ಗವಿದೆ. ಅಂಥವರೆಲ್ಲ ಶೈತಾನ್​’ ಸಿನಿಮಾ (Shaitaan Movie) ನೋಡಿ ಎಂಜಾಯ್ ಮಾಡಿದ್ದಾರೆ. ಅಜಯ್​ ದೇವಗನ್​ (Ajay Devgn) ನಟನೆಯ ಈ ಸಿನಿಮಾದಲ್ಲಿ ಆರ್​. ಮಾಧವನ್​ ಅವರು ನೆಗೆಟಿವ್​ ಪಾತ್ರ ಮಾಡಿದ್ದಾರೆ. ಯುವತಿಯನ್ನು ವಶೀಕರಣ ಮಾಡುವ ಕಥೆ ಈ ಸಿನಿಮಾದಲ್ಲಿದೆ. ಕಳೆದ ಶುಕ್ರವಾರ (ಮಾರ್ಚ್​ 8) ಬಿಡುಗಡೆಯಾದ ಶೈತಾನ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ವಿಶ್ವಾದ್ಯಂತ ‘ಶೈತಾನ್​’ ಕಲೆಕ್ಷನ್​ (Shaitaan Box Office Collection) 100 ಕೋಟಿ ರೂಪಾಯಿಯಾಗಿದೆ ಎಂದು ವರದಿ ಆಗಿದೆ. ಇನ್ನೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ.

‘ಶೈತಾನ್​’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ಹೈಪ್​ ಸೃಷ್ಟಿ ಮಾಡಿತ್ತು. ಟ್ರೇಲರ್​ ನೋಡಿ ಎಲ್ಲರೂ ವಾವ್​ ಎಂದಿದ್ದರು. ಇದು ಗುಜರಾತಿ ಭಾಷೆಯ ‘ವಶ್​’ ಸಿನಿಮಾದ ಬಾಲಿವುಡ್​ ರಿಮೇಕ್​. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ‘ದೃಶ್ಯಂ’ ರೀತಿಯೇ ಅಜಯ್​ ದೇವಗನ್​ ಅವರು ‘ಶೈತಾನ್​’ ಚಿತ್ರದ ಮೂಲಕ ಫ್ಯಾಮಿಲಿ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದಾರೆ.

ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ ಶೈತಾನ್​ ಕಲೆಕ್ಷನ್​ ವಿವರ:

ಮೊದಲ ದಿನ: 15.21 ಕೋಟಿ ರೂಪಾಯಿ. ಎರಡನೇ ದಿನ: 19.18 ಕೋಟಿ ರೂಪಾಯಿ. ಮೂರನೇ ದಿನ: 20.74 ಕೋಟಿ ರೂಪಾಯಿ. ನಾಲ್ಕನೇ ದಿನ: 7.81 ಕೋಟಿ ರೂಪಾಯಿ. ಐದನೇ ದಿನ: 6.27 ಕೋಟಿ ರೂಪಾಯಿ.

6ನೇ ದಿನವೂ ‘ಶೈತಾನ್​’ ಚಿತ್ರ ಉತ್ತಮವಾಗಿ ಪ್ರದರ್ಶನವಾಗುತ್ತಿದೆ. ಈವರೆಗೂ ಭಾರತದಲ್ಲಿ ಈ ಸಿನಿಮಾದ ಗಳಿಕೆ 80 ಕೋಟಿ ರೂಪಾಯಿ ಆಗಿದೆ ಎಂದು ಹೇಳಲಾಗುತ್ತಿದೆ. ವಿದೇಶದಿಂದ 20 ಕೋಟಿ ರೂಪಾಯಿ ಆದಾಯ ಹರಿದುಬಂದಿರುವ ಬಗ್ಗೆ ವರದಿ ಆಗಿದೆ. ಎರಡೂ ಸೇರಿಸಿದರೆ ‘ಶೈತಾನ್​’ ಕಲೆಕ್ಷನ್​ 100 ಕೋಟಿ ರೂಪಾಯಿ ಗಡಿ ಮುಟ್ಟಿದೆ. ಈ ಸಿನಿಮಾಗೆ ವಿಕಾಸ್​ ಬಹ್ಲ್ ಅವರು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ನನಗೂ ದೆವ್ವದ​ ಅನುಭವ ಆಗಿದೆ, ಆದರೆ ನಾನು ಮಾತಾಡಲ್ಲ’: ಅಜಯ್​ ದೇವಗನ್​

‘ಶೈತಾನ್’ ಸಿನಿಮಾದಲ್ಲಿ ನಟಿ ಜಾನಕಿ ಬೋಡಿವಾಲಾ ಅವರು ಕಥಾನಾಯಕನ ಮಗಳ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾದಲ್ಲಿ ಅವರ ನಟನೆಗೆ ಹೆಚ್ಚು ಸ್ಕೋಪ್​ ಸಿಕ್ಕಿದೆ. ಜ್ಯೋತಿಕಾ ಕೂಡ ಒಂದು ಪ್ರಮುಖವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಲನ್ ಆಗಿ ಅಬ್ಬರಿಸಿರುವ ಆರ್​. ಮಾಧವನ್​ ಅವರ ನಟನೆಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ