AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು
‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು
TV9 Web
| Edited By: |

Updated on:Jul 20, 2021 | 7:21 PM

Share

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ  ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ.

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಎಲ್ಲರೂ ಈ ಬಗ್ಗೆ ನಗೆಚಟಾಕಿ ಹಾರಿಸುತ್ತಿದ್ದಾರೆ. ಅಷ್ಟಕ್ಕೂ ರಹಾನೆ ಅವರು ರಾಜ್​ ಕುಂದ್ರಾ ಅವರನ್ನು ಹೊಗಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಹಾನೆ 2012ರಲ್ಲಿ ರಾಜಸ್ಥಾನ್​ ರಾಯಲ್ಸ್​ ಪರ ಆಡುತ್ತಿದ್ದರು. 2019ರವರೆಗೂ ರಹಾನೆ ಆರ್​ಆರ್​ ತಂಡದ ಪರವಾಗಿಯೆ ಆಡಿದ್ದಾರೆ. 2012ರಲ್ಲಿ ಆರ್​ಆರ್​ ತಂಡದ ಸಹ ಮಾಲೀಕರಾಗಿದ್ದರು ರಾಜ್​ ಕುಂದ್ರಾ. ಈ ಅವಧಿಯಲ್ಲಿ ರಹಾನೆ ಮಾಡಿದ ಟ್ವೀಟ್​ ಈಗ ಟ್ರೋಲ್​ ಪೇಜ್​ಗಳಿಗೆ ಆಹಾರವಾಗಿದೆ.

ಟ್ವೀಟ್​ನಲ್ಲೇನಿತ್ತು?

‘ರಾಜ್​ ಕುಂದ್ರಾ ಸರ್​ ನೀವು ಬಹಳ ಉತ್ತಮ ಕೆಲಸ ಮಾಡುತ್ತಿದ್ದೀರಿ’ ಎಂದು ರಹಾನೆ ಹೇಳಿದ್ದರು. ‘ರಹಾನೆ ಅವರೇ ಧನ್ಯವಾದಗಳು. ನೀವು ಒಮ್ಮೆ ಬಂದು ಲೈವ್​ ನೋಡಬೇಕು’ ಎಂದು ಉತ್ತರಿಸಿದ್ದಾರೆ ರಾಜ್​. ಇದಕ್ಕೆ ‘ಖಂಡಿತವಾಗಿಯೂ ನೋಡುತ್ತೇನೆ’ ಎನ್ನುವ ಉತ್ತರ ರಹಾನೆ ಕಡೆಯಿಂದ ಬಂದಿದೆ.

ಮುಂಬೈ ಪೊಲೀಸರು ಹೇಳಿದ್ದೇನು?

‘ಫೆಬ್ರವರಿ 2021ರಂದು ಕ್ರೈಮ್​ ಬ್ರ್ಯಾಂಚ್​ನಲ್ಲಿ ಪ್ರಕರಣ ದಾಖಲಾಗಿತ್ತು. ನೀಲಿ ಸಿನಿಮಾಗಳನ್ನು ಚಿತ್ರೀಕರಣ ಮಾಡಿ, ಕೆಲ ಆ್ಯಪ್​ಗಳ ಮೂಲಕ ಇದನ್ನು ಅಪ್​ಲೋಡ್​ ಮಾಡಲಾಗುತ್ತಿದೆ ಎನ್ನುವ ಮಾಹಿತಿ ನಮಗೆ ಲಭ್ಯವಾಗಿತ್ತು. ಇಂದು (ಜುಲೈ 19) ನಾವು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದೇವೆ. ಇಡೀ ಪ್ರಕರಣದ ರುವಾರಿ ಅವರೇ ಆಗಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಏನನ್ನೂ ಹೇಳುವುದಿಲ್ಲ’ ಎಂದು ಮುಂಬೈ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Sagarika Shona: ರಾಜ್ ಕುಂದ್ರಾ ನಗ್ನವಾಗಿ ಆಡಿಶನ್ ಕೊಡಲು ಹೇಳಿದ್ದರು: ನಟಿ ಸಾಗರಿಕಾ ಶೋನಾ ಗಂಭೀರ ಆರೋಪ 

Raj Kundra: ರಾಜಕಾರಣಿಗಳು ಅಶ್ಲೀಲ ವಿಡಿಯೋ ನೋಡುತ್ತಿದ್ದಾರೆ; ಬಂಧನದ ಬೆನ್ನಲ್ಲೇ ರಾಜ್ ಕುಂದ್ರಾ ಹಳೇ ಟ್ವೀಟ್​ಗಳು ವೈರಲ್

Published On - 7:17 pm, Tue, 20 July 21

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್