AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು
‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು
TV9 Web
| Edited By: |

Updated on:Jul 20, 2021 | 7:21 PM

Share

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ  ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ.

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಎಲ್ಲರೂ ಈ ಬಗ್ಗೆ ನಗೆಚಟಾಕಿ ಹಾರಿಸುತ್ತಿದ್ದಾರೆ. ಅಷ್ಟಕ್ಕೂ ರಹಾನೆ ಅವರು ರಾಜ್​ ಕುಂದ್ರಾ ಅವರನ್ನು ಹೊಗಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಹಾನೆ 2012ರಲ್ಲಿ ರಾಜಸ್ಥಾನ್​ ರಾಯಲ್ಸ್​ ಪರ ಆಡುತ್ತಿದ್ದರು. 2019ರವರೆಗೂ ರಹಾನೆ ಆರ್​ಆರ್​ ತಂಡದ ಪರವಾಗಿಯೆ ಆಡಿದ್ದಾರೆ. 2012ರಲ್ಲಿ ಆರ್​ಆರ್​ ತಂಡದ ಸಹ ಮಾಲೀಕರಾಗಿದ್ದರು ರಾಜ್​ ಕುಂದ್ರಾ. ಈ ಅವಧಿಯಲ್ಲಿ ರಹಾನೆ ಮಾಡಿದ ಟ್ವೀಟ್​ ಈಗ ಟ್ರೋಲ್​ ಪೇಜ್​ಗಳಿಗೆ ಆಹಾರವಾಗಿದೆ.

ಟ್ವೀಟ್​ನಲ್ಲೇನಿತ್ತು?

‘ರಾಜ್​ ಕುಂದ್ರಾ ಸರ್​ ನೀವು ಬಹಳ ಉತ್ತಮ ಕೆಲಸ ಮಾಡುತ್ತಿದ್ದೀರಿ’ ಎಂದು ರಹಾನೆ ಹೇಳಿದ್ದರು. ‘ರಹಾನೆ ಅವರೇ ಧನ್ಯವಾದಗಳು. ನೀವು ಒಮ್ಮೆ ಬಂದು ಲೈವ್​ ನೋಡಬೇಕು’ ಎಂದು ಉತ್ತರಿಸಿದ್ದಾರೆ ರಾಜ್​. ಇದಕ್ಕೆ ‘ಖಂಡಿತವಾಗಿಯೂ ನೋಡುತ್ತೇನೆ’ ಎನ್ನುವ ಉತ್ತರ ರಹಾನೆ ಕಡೆಯಿಂದ ಬಂದಿದೆ.

ಮುಂಬೈ ಪೊಲೀಸರು ಹೇಳಿದ್ದೇನು?

‘ಫೆಬ್ರವರಿ 2021ರಂದು ಕ್ರೈಮ್​ ಬ್ರ್ಯಾಂಚ್​ನಲ್ಲಿ ಪ್ರಕರಣ ದಾಖಲಾಗಿತ್ತು. ನೀಲಿ ಸಿನಿಮಾಗಳನ್ನು ಚಿತ್ರೀಕರಣ ಮಾಡಿ, ಕೆಲ ಆ್ಯಪ್​ಗಳ ಮೂಲಕ ಇದನ್ನು ಅಪ್​ಲೋಡ್​ ಮಾಡಲಾಗುತ್ತಿದೆ ಎನ್ನುವ ಮಾಹಿತಿ ನಮಗೆ ಲಭ್ಯವಾಗಿತ್ತು. ಇಂದು (ಜುಲೈ 19) ನಾವು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದೇವೆ. ಇಡೀ ಪ್ರಕರಣದ ರುವಾರಿ ಅವರೇ ಆಗಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಏನನ್ನೂ ಹೇಳುವುದಿಲ್ಲ’ ಎಂದು ಮುಂಬೈ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Sagarika Shona: ರಾಜ್ ಕುಂದ್ರಾ ನಗ್ನವಾಗಿ ಆಡಿಶನ್ ಕೊಡಲು ಹೇಳಿದ್ದರು: ನಟಿ ಸಾಗರಿಕಾ ಶೋನಾ ಗಂಭೀರ ಆರೋಪ 

Raj Kundra: ರಾಜಕಾರಣಿಗಳು ಅಶ್ಲೀಲ ವಿಡಿಯೋ ನೋಡುತ್ತಿದ್ದಾರೆ; ಬಂಧನದ ಬೆನ್ನಲ್ಲೇ ರಾಜ್ ಕುಂದ್ರಾ ಹಳೇ ಟ್ವೀಟ್​ಗಳು ವೈರಲ್

Published On - 7:17 pm, Tue, 20 July 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ