AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು
‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು
TV9 Web
| Edited By: |

Updated on:Jul 20, 2021 | 7:21 PM

Share

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ  ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ.

ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಎಲ್ಲರೂ ಈ ಬಗ್ಗೆ ನಗೆಚಟಾಕಿ ಹಾರಿಸುತ್ತಿದ್ದಾರೆ. ಅಷ್ಟಕ್ಕೂ ರಹಾನೆ ಅವರು ರಾಜ್​ ಕುಂದ್ರಾ ಅವರನ್ನು ಹೊಗಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಹಾನೆ 2012ರಲ್ಲಿ ರಾಜಸ್ಥಾನ್​ ರಾಯಲ್ಸ್​ ಪರ ಆಡುತ್ತಿದ್ದರು. 2019ರವರೆಗೂ ರಹಾನೆ ಆರ್​ಆರ್​ ತಂಡದ ಪರವಾಗಿಯೆ ಆಡಿದ್ದಾರೆ. 2012ರಲ್ಲಿ ಆರ್​ಆರ್​ ತಂಡದ ಸಹ ಮಾಲೀಕರಾಗಿದ್ದರು ರಾಜ್​ ಕುಂದ್ರಾ. ಈ ಅವಧಿಯಲ್ಲಿ ರಹಾನೆ ಮಾಡಿದ ಟ್ವೀಟ್​ ಈಗ ಟ್ರೋಲ್​ ಪೇಜ್​ಗಳಿಗೆ ಆಹಾರವಾಗಿದೆ.

ಟ್ವೀಟ್​ನಲ್ಲೇನಿತ್ತು?

‘ರಾಜ್​ ಕುಂದ್ರಾ ಸರ್​ ನೀವು ಬಹಳ ಉತ್ತಮ ಕೆಲಸ ಮಾಡುತ್ತಿದ್ದೀರಿ’ ಎಂದು ರಹಾನೆ ಹೇಳಿದ್ದರು. ‘ರಹಾನೆ ಅವರೇ ಧನ್ಯವಾದಗಳು. ನೀವು ಒಮ್ಮೆ ಬಂದು ಲೈವ್​ ನೋಡಬೇಕು’ ಎಂದು ಉತ್ತರಿಸಿದ್ದಾರೆ ರಾಜ್​. ಇದಕ್ಕೆ ‘ಖಂಡಿತವಾಗಿಯೂ ನೋಡುತ್ತೇನೆ’ ಎನ್ನುವ ಉತ್ತರ ರಹಾನೆ ಕಡೆಯಿಂದ ಬಂದಿದೆ.

ಮುಂಬೈ ಪೊಲೀಸರು ಹೇಳಿದ್ದೇನು?

‘ಫೆಬ್ರವರಿ 2021ರಂದು ಕ್ರೈಮ್​ ಬ್ರ್ಯಾಂಚ್​ನಲ್ಲಿ ಪ್ರಕರಣ ದಾಖಲಾಗಿತ್ತು. ನೀಲಿ ಸಿನಿಮಾಗಳನ್ನು ಚಿತ್ರೀಕರಣ ಮಾಡಿ, ಕೆಲ ಆ್ಯಪ್​ಗಳ ಮೂಲಕ ಇದನ್ನು ಅಪ್​ಲೋಡ್​ ಮಾಡಲಾಗುತ್ತಿದೆ ಎನ್ನುವ ಮಾಹಿತಿ ನಮಗೆ ಲಭ್ಯವಾಗಿತ್ತು. ಇಂದು (ಜುಲೈ 19) ನಾವು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದೇವೆ. ಇಡೀ ಪ್ರಕರಣದ ರುವಾರಿ ಅವರೇ ಆಗಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಏನನ್ನೂ ಹೇಳುವುದಿಲ್ಲ’ ಎಂದು ಮುಂಬೈ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Sagarika Shona: ರಾಜ್ ಕುಂದ್ರಾ ನಗ್ನವಾಗಿ ಆಡಿಶನ್ ಕೊಡಲು ಹೇಳಿದ್ದರು: ನಟಿ ಸಾಗರಿಕಾ ಶೋನಾ ಗಂಭೀರ ಆರೋಪ 

Raj Kundra: ರಾಜಕಾರಣಿಗಳು ಅಶ್ಲೀಲ ವಿಡಿಯೋ ನೋಡುತ್ತಿದ್ದಾರೆ; ಬಂಧನದ ಬೆನ್ನಲ್ಲೇ ರಾಜ್ ಕುಂದ್ರಾ ಹಳೇ ಟ್ವೀಟ್​ಗಳು ವೈರಲ್

Published On - 7:17 pm, Tue, 20 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್