AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ಕುಮಾರ್ ಚಿತ್ರಕ್ಕೆ ಹಾಲಿವುಡ್ ಸಿನಿಮಾ ಟೈಟಲ್; ‘ಪುಷ್ಪ’ ನಿರ್ಮಾಪಕನಿಂದ ಬಂಡವಾಳ

‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಪೋಸ್ಟರ್ ಹಿಂಭಾಗ ಸಂಪೂರ್ಣವಾಗಿ ಕೆಂಪು ಬಣ್ಣದಿಂದ ಕೂಡಿದೆ. ಈ ಮೂಲಕ ಚಿತ್ರ ಭರ್ಜರಿ ಆ್ಯಕ್ಷನ್​ ಹಾಗೂ ವೈಲೆನ್ಸ್​ನಿಂದ ಕೂಡಿರಲಿದೆ ಎಂಬುದು ಗೊತ್ತಾಗಿದೆ. ಈ ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿನಂದನ್ ರಾಮಾನುಜಂ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.

ಅಜಿತ್ ಕುಮಾರ್ ಚಿತ್ರಕ್ಕೆ ಹಾಲಿವುಡ್ ಸಿನಿಮಾ ಟೈಟಲ್; ‘ಪುಷ್ಪ’ ನಿರ್ಮಾಪಕನಿಂದ ಬಂಡವಾಳ
ಅಜಿತ್
ರಾಜೇಶ್ ದುಗ್ಗುಮನೆ
|

Updated on: Mar 15, 2024 | 8:48 AM

Share

ಅಜಿತ್ ಕುಮಾರ್ (Ajith Kumar) ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಇದು ಅವರ 63ನೇ ಸಿನಿಮಾ ಆಗಿದ್ದು, ಈ ಚಿತ್ರಕ್ಕೆ ‘ಗುಡ್ ಬ್ಯಾಡ್ ಅಗ್ಲಿ’ ಎಂದು ಶೀರ್ಷಿಕೆ ಇಡಲಾಗಿದೆ. 1966ರಲ್ಲಿ ಹಾಲಿವುಡ್​ನಲ್ಲಿ ‘ದಿ ಗುಡ್, ದಿ ಬ್ಯಾಡ್ ಆ್ಯಂಡ್ ದಿ ಅಗ್ಲಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಗಿತ್ತು. ಆ ಚಿತ್ರದ ಟೈಟಲ್​ನ ಅಜಿತ್ ಸಿನಿಮಾ ನೆನಪಿಸಿದೆ. ಸಿನಿಮಾದ ಟೈಟಲ್ ನೋಡಿದ ಬಳಿಕ ಅಜಿತ್ ಕುಮಾರ್ ಪಾತ್ರಕ್ಕೆ ಮೂರು ಶೇಡ್​ಗಳು ಇರಲಿವೆಯೇ ಅಥವಾ ಗುಡ್, ಬ್ಯಾಡ್, ಅಗ್ಲಿ ಎಂಬ ಮೂರು ಪಾತ್ರಗಳು ಸಿನಿಮಾದಲ್ಲಿ ಬರಲಿವೆಯೇ ಎನ್ನುವ ಪ್ರಶ್ನೆ ಮೂಡಿದೆ.

ತೆಲುಗಿನ ಮೈತ್ರಿ ಮೂವೀ ಮೇಕರ್ಸ್ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಅವರು ಅಜಿತ್ ಕುಮಾರ್ ಜೊತೆ ಕೈ ಜೋಡಿಸಿರುವುದು ಇದೇ ಮೊದಲು. ಈಗಾಗಲೇ ಮೈತ್ರಿ ಮೂವೀ ಮೇಕರ್ಸ್ ‘ಪುಷ್ಪ’ ಸಿನಿಮಾ ನಿರ್ಮಾಣ ಮಾಡಿ ಸಾಕಷ್ಟು ಲಾಭ ಕಂಡಿದೆ. ಸದ್ಯ ‘ಪುಷ್ಪ 2’ ಮೊದಲಾದ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅಜಿತ್ ಕುಮಾರ್ ಹೊಸ ಸಿನಿಮಾ ಕೂಡ ಘೋಷಣೆ ಆಗಿದೆ. ಈ ಚಿತ್ರವನ್ನು ಅಧಿಕ್ ರವಿಚಂದ್ರನ್ ನಿರ್ದೇಶನ ಮಾಡುತ್ತಿದ್ದಾರೆ.

ಮೈತ್ರಿ ಮೂವೀ ಮೇಕರ್ಸ್

ಈ ಸಿನಿಮಾ ಪೋಸ್ಟರ್ ಹಿಂಭಾಗ ಸಂಪೂರ್ಣವಾಗಿ ಕೆಂಪು ಬಣ್ಣದಿಂದ ಕೂಡಿದೆ. ಈ ಮೂಲಕ ಚಿತ್ರ ಭರ್ಜರಿ ಆ್ಯಕ್ಷನ್​ ಹಾಗೂ ವೈಲೆನ್ಸ್​ನಿಂದ ಕೂಡಿರಲಿದೆ ಎಂಬುದು ಗೊತ್ತಾಗಿದೆ. ಈ ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿನಂದನ್ ರಾಮಾನುಜಂ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಟ ಅಜಿತ್ ಕುಮಾರ್ ಸಾಧನೆ ಒಂದೆರಡಲ್ಲ; ಇವರು ವಿಮಾನ ಕೂಡ ಹಾರಿಸಬಲ್ಲರು

ಅಜಿತ್ ಕುಮಾರ್ ಅವರು ಬೇರೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರಿಗೆ ಅನಾರೋಗ್ಯ ಕಾಡಿದ್ದು ಇದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಚಿತ್ರದ ಶೂಟಿಂಗ್​ ಜೂನ್​ನಲ್ಲಿ ಆರಂಭ ಆಗಲಿದ್ದು, 2025ರ ಪೊಂಗಲ್​ಗೆ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ