AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ಬ್ಲೌಸ್ ಜೊತೆ ಸೀರೆ ಧರಿಸಿದ ನಟಿ ಆಕಾಂಕ್ಷಾ ಪುರಿ; ವಿಡಿಯೋ ನೋಡಿ ಸಿಕ್ಕಾಪಟ್ಟೆ ಟ್ರೋಲ್

ಬಿಕಿನಿ ಬ್ಲೌಸ್ ಜೊತೆಯಲ್ಲಿ ಸೀರೆ ಧರಿಸಿದ್ದಕ್ಕಾಗಿ ನಟಿ ಆಕಾಂಕ್ಷಾ ಪುರಿ ಅವರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿದೆ. ಈ ರೀತಿ ವಿನ್ಯಾಸದಲ್ಲಿ ಸೀರೆ ಧರಿಸುವುದು ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಅನೇಕರು ಟೀಕಿಸಿದ್ದಾರೆ. ತಮ್ಮ ಬಗ್ಗೆ ಕೇಳಿಬಂದ ಟೀಕೆಗಳ ಬಗ್ಗೆ ಆಕಾಂಕ್ಷಾ ಪುರಿ ಅವರು ತಿರುಗೇಟು ನೀಡಿದ್ದಾರೆ.

ಬಿಕಿನಿ ಬ್ಲೌಸ್ ಜೊತೆ ಸೀರೆ ಧರಿಸಿದ ನಟಿ ಆಕಾಂಕ್ಷಾ ಪುರಿ; ವಿಡಿಯೋ ನೋಡಿ ಸಿಕ್ಕಾಪಟ್ಟೆ ಟ್ರೋಲ್
Akanksha PuriImage Credit source: Instagram/filmygyan
ಮದನ್​ ಕುಮಾರ್​
|

Updated on: Apr 08, 2026 | 9:11 PM

Share

ನೇರ ಮಾತು ಹಾಗೂ ಗ್ಲಾಮರಸ್ ಶೈಲಿಯಿಂದಲೇ ಗುರುತಿಸಿಕೊಂಡಿರುವ ನಟಿ ಆಕಾಂಕ್ಷಾ ಪುರಿ, ಇತ್ತೀಚೆಗೆ ನಡೆದ ಫ್ಯಾಷನ್ ವೀಕ್​ನಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡರು. ಸಾಂಪ್ರದಾಯಿಕ ಸೀರೆಗೆ ಬಿಕಿನಿ (Bikini) ಬ್ಲೌಸ್ ಧರಿಸಿ ಮಿಂಚಿದ್ದ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆದವು. ಆಕಾಂಕ್ಷಾ ಪುರಿ ಅವರ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಅವರ ಫ್ಯಾಷನ್ ಸೆನ್ಸ್ ಬಗ್ಗೆ ಕಿಡಿಕಾರಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಬಗೆಬಗೆಯ ಟೀಕೆಗಳು ವ್ಯಕ್ತವಾಗಿವೆ. ಅವುಗಳಿಗೆಲ್ಲ ಆಕಾಂಕ್ಷಾ ಪುರಿ (Akanksha Puri) ಅವರು ತಿರುಗೇಟು ನೀಡಿದ್ದಾರೆ.

ಖ್ಯಾತ ವಿನ್ಯಾಸಕ ರೋಹಿತ್ ವರ್ಮಾ ಅವರ ಶೋಗಾಗಿ ಆಕಾಂಕ್ಷಾ ಈ ವಿಶಿಷ್ಟ ಉಡುಪು ಧರಿಸಿದ್ದರು. ಮಹಾರಾಷ್ಟ್ರದ ಸಂಪ್ರದಾಯದ ಸಂಕೇತವಾಗಿರುವ ಪೈಠಣಿ ಸೀರೆಯನ್ನು ಬಿಕಿನಿ ಬ್ಲೌಸ್ ಜೊತೆ ಧರಿಸುವ ಮೂಲಕ ಅವರು ಸಂಸ್ಕೃತಿಗೆ ಅವಮಾನ ಮಾಡಿದ್ದಾರೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡಿದ್ದರು.

ಟಿವಿ9 ಹಿಂದಿ ಡಿಜಿಟಲ್‌ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮುಕ್ತವಾಗಿ ಮಾತನಾಡಿದ ಆಕಾಂಕ್ಷಾ, ‘ನನಗೆ ಈ ಉಡುಪಿಗಾಗಿ ಸಾಕಷ್ಟು ಮೆಚ್ಚುಗೆಗಳು ಸಿಕ್ಕಿವೆ. ಹೊಗಳಿಕೆ ಇರುವಲ್ಲಿ ಟ್ರೋಲ್‌ಗಳು ಇರುವುದು ಸಹಜ. ನಾನು ನಕಾರಾತ್ಮಕ ವಿಚಾರಗಳಿಗಿಂತ ಸಕಾರಾತ್ಮಕತೆ ಮೇಲೆ ಹೆಚ್ಚು ಗಮನ ಹರಿಸುತ್ತೇನೆ’ ಎಂದು ಶಾಂತವಾಗಿಯೇ ಉತ್ತರಿಸಿದ್ದಾರೆ.

ಆಕಾಂಕ್ಷಾ ಪುರಿ ವೈರಲ್ ವಿಡಿಯೋ:

ಅಲ್ಲದೆ, ಈ ಉಡುಪಿನ ಆಯ್ಕೆಯ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇದು ಸಂಪೂರ್ಣವಾಗಿ ಡಿಸೈನರ್ ರೋಹಿತ್ ವರ್ಮಾ ಅವರ ಕಲ್ಪನೆಯಾಗಿತ್ತು. ರೋಹಿತ್ ಅವರ ಪ್ರತಿಭೆಯ ಮೇಲೆ ನನಗೆ ಅಪಾರ ನಂಬಿಕೆಯಿದೆ. ಅವರು ಏನನ್ನಾದರೂ ವಿನ್ಯಾಸಗೊಳಿಸಿದರೆ ಅದರ ಹಿಂದೆ ಒಂದು ಉದ್ದೇಶವಿರುತ್ತದೆ. ಒಬ್ಬ ಕಲಾವಿದೆಯಾಗಿ ಅವರ ವಿನ್ಯಾಸವನ್ನು ಗೌರವಿಸುವುದು ಮತ್ತು ಅದನ್ನು ಆತ್ಮವಿಶ್ವಾಸದಿಂದ ತೊಡುವುದು ನನ್ನ ಕೆಲಸ’ ಎಂದು ಆಕಾಂಕ್ಷಾ ಹೇಳಿದ್ದಾರೆ.

ಇದನ್ನೂ ಓದಿ: ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​

ಸದ್ಯ ಆಕಾಂಕ್ಷಾ ಅವರು ಅಶ್ಮಿತ್ ಪಟೇಲ್ ಜೊತೆಗಿನ ‘ಸಾಡಿ ಫರ್ಮಾಯಿಶ್’ ಹಾಡಿನ ಮೂಲಕ ಗಮನ ಸೆಳೆಯುತ್ತಿದ್ದಾರೆ. 2023ರಲ್ಲಿ ಬಿಗ್ ಬಾಸ್ ಒಟಿಟಿ ಮೂಲಕವೂ ಅವರು ಸಾಕಷ್ಟು ಸುದ್ದಿಯಲ್ಲಿದ್ದರು. ಎಷ್ಟೇ ಟ್ರೋಲ್ ಆದರೂ ತಮ್ಮ ಫ್ಯಾಷನ್ ಆಯ್ಕೆಗಳ ಬಗ್ಗೆ ಅವರು ಎಂದಿಗೂ ಹಿಂಜರಿದಿಲ್ಲ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?